AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ

Amitabh Bachchan Jaya Bachchan Wedding Anniversary: ಮದುವೆ ನಂತರವೂ ಬೇರೆ ನಟಿಯರ ಜೊತೆ ಅಮಿತಾಭ್​ ಹೆಸರು ತಳುಕು ಹಾಕಿಕೊಂಡಿತ್ತು. ಹತ್ತಾರು ಗಾಸಿಪ್​ಗಳು ಹರಿದಾಡಿದ್ದವು. ಆದರೂ ಅವುಗಳಿಂದ ಅಮಿತಾಭ್​ ಮತ್ತು ಜಯ ದಾಂಪತ್ಯಕ್ಕೆ ಧಕ್ಕೆ ಆಗಲಿಲ್ಲ.

ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ
ಅಮಿತಾಭ್​ ಬಚ್ಚನ್​ - ಜಯಾ ಬಚ್ಚನ್​ ಮದುವೆ ಫೋಟೋ
ಮದನ್​ ಕುಮಾರ್​
|

Updated on: Jun 03, 2021 | 8:26 AM

Share

ಸೆಲೆಬ್ರಿಟಿಗಳ ಜಗತ್ತಿನಲ್ಲಿ ಮದುವೆ ಎಷ್ಟು ಸುಲಭವೋ ವಿಚ್ಛೇದನವೂ ಅಷ್ಟೇ ಸುಲಭ ಎಂಬಂತಹ ವಾತಾವರಣ ಇದೆ. ಅದರ ನಡುವೆಯೂ ಆದರ್ಶ ದಂಪತಿಗಳಾಗಿ ಬಾಳುತ್ತಿರುವ ಸೆಲೆಬ್ರಿಟಿಗಳು ಅನೇಕರಿದ್ದಾರೆ. ಆ ಸಾಲಿನಲ್ಲಿ ಮುಂಚೂಣಿಯಾಗಿ ಕೇಳಿಬರುವ ಹೆಸರು ಅಮಿತಾಭ್​ ಬಚ್ಚನ್​ ಮತ್ತು ಜಯಾ ಬಚ್ಚನ್​ ಅವರದ್ದು. ಇಂದು (ಜೂ.3) ಈ ಜೋಡಿಗೆ 48ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ. ಕೊವಿಡ್​ ಇರುವುದರಿಂದ ಬಂಧು-ಬಾಂಧವರನ್ನು ಜೊತೆ ಸೇರಿಸಿಕೊಂಡು ಈ ದಿನವನ್ನು ಸಂಭ್ರಮಿಸಲು ಸಾಧ್ಯವಾಗುತ್ತಿಲ್ಲ.

ಮದುವೆ ನಂತರವೂ ಬೇರೆ ನಟಿಯರ ಜೊತೆ ಅಮಿತಾಭ್​ ಹೆಸರು ತಳುಕು ಹಾಕಿಕೊಂಡಿತ್ತು. ಹತ್ತಾರು ಗಾಸಿಪ್​ಗಳು ಹರಿದಾಡಿದ್ದವು. ಆದರೂ ಅವುಗಳಿಂದ ಅಮಿತಾಭ್​ ಮತ್ತು ಜಯ ದಾಂಪತ್ಯಕ್ಕೆ ಧಕ್ಕೆ ಆಗಲಿಲ್ಲ. ಕಳೆದ 48 ವರ್ಷಗಳಿಂದ ಪರಸ್ಪರ ನಂಬಿಕೆ, ಪ್ರೀತಿ, ಗೌರವಗಳೊಂದಿಗೆ ದಾಂಪತ್ಯ ಜೀವನ ನಡೆಸುತ್ತಿರುವ ಈ ಸ್ಟಾರ್​ಗಳಿಬ್ಬರು ಅನೇಕರಿಗೆ ಮಾದರಿ. ತಮ್ಮ ಪತ್ನಿ ಬಗ್ಗೆ ಅಮಿತಾಭ್​ ಹೇಳಿಕೊಂಡ 5 ಇಂಟರೆಸ್ಟಿಂಗ್​ ಮಾತುಗಳು ಇಲ್ಲಿವೆ.

1) ‘ನಾನು ಬಯಸಿದ ಎಲ್ಲ ಒಳ್ಳೆಯ ಗುಣಗಳು ಜಯಾ ಅವರಲ್ಲಿ ಇತ್ತು. ಅದೇ ಕಾರಣಕ್ಕಾಗಿ ನಾನು ಅವರನ್ನು ಮದುವೆ ಆದೆ. ಪ್ರೀತಿಯ ಭಾವನೆಗಳನ್ನು ಜಯಾ ಚೆನ್ನಾಗಿ ಅಭಿವ್ಯಕ್ತಿಸುತ್ತಾರೆ’ ಎನ್ನುವ ಮೂಲಕ 1998ರಲ್ಲಿ ಪತ್ನಿಯ ಗುಣಗಾನ ಮಾಡಿದ್ದರು ಬಿಗ್​ ಬಿ.

2) ‘ಕೆಟ್ಟ ಉದ್ದೇಶ ಹೊಂದಿರುವ ವ್ಯಕ್ತಿಗಳನ್ನು ಜಯಾ ತಕ್ಷಣಕ್ಕೆ ಪತ್ತೆ ಹಚ್ಚುತ್ತಾರೆ. ಅವರಿಗೆ ಸಿಕ್ಸ್ತ್ ​ಸೆನ್ಸ್​ ಇದೆ ಎನಿಸುತ್ತದೆ. ಅದೇ ಕಾರಣಕ್ಕಾಗಿ ಅವರು ಇಂಥವರನ್ನು ಬೇಗ ಕಂಡು ಹಿಡಿಯುತ್ತಾರೆ’ ಎಂದು ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಬಚ್ಚನ್​ ಹೇಳಿದ್ದರು.

3) ‘ಇಂದಿಗೂ ನಾನು ನನ್ನ ಪತ್ನಿಗೆ ಲವ್​ ಲೆಟರ್​ ಬರೆಯುತ್ತೇನೆ’ ಎಂದು ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದ ವೇದಿಕೆಯಲ್ಲಿ ಅಮಿತಾಭ್​ ಬಚ್ಚನ್​ ಹೇಳಿದ್ದರು. ಆ ಮೂಲಕ ತಮ್ಮ ರೊಮ್ಯಾಂಟಿಕ್​ ಬಾಂಧವ್ಯದ ಬಗ್ಗೆ ಅವರು ಬಾಯಿ ಬಿಟ್ಟಿದ್ದರು.

4) ಗಂಡಂದಿರು ತಮ್ಮ ಪತ್ನಿಯ ಹೆಸರನ್ನು ಮೊಬೈಲ್​ನಲ್ಲಿ ತಮ್ಮಿಷ್ಟದಂತೆ ಸೇವ್​ ಮಾಡಿಕೊಳ್ಳುತ್ತಾರೆ. ಹಾಗಾದರೆ ಅಮಿತಾಭ್​ ಮೊಬೈಲ್​ನಲ್ಲಿ ಜಯಾ ಹೆಸರು ಹೇಗೆ ಸೇವ್​ ಆಗಿದೆ? ‘JB’ ಎಂದು ಸೇವ್​ ಮಾಡಿಕೊಂಡಿರುವುದನ್ನು ಕೂಡ ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಅಮಿತಾಭ್​ ಹೇಳಿದ್ದರು.

5) ಇಂಥ ಪತ್ನಿ ಸಿಕ್ಕಿದ್ದು ಆ ದೇವರ ಕೃಪೆ ಎಂದೇ ಅಮಿತಾಭ್​ ಹೇಳುತ್ತಾರೆ. ಈ ಬಗ್ಗೆ ಅವರು ತಮ್ಮ ಬ್ಲಾಗ್​ನಲ್ಲಿ ಬರೆದುಕೊಂಡಿದ್ದರು. ‘ಫೋಟೋ ನೋಡಿ, ಜೊತೆಯಲ್ಲಿ ಕೆಲಸ ಮಾಡಿ, ಒಟ್ಟಿಗೆ ಸಮಯ ಕಳೆದು, ಒಟ್ಟಿಗೆ ನಿರ್ಧರಿಸಿ, ಮದುವೆ ಆಗಿ, ಮಕ್ಕಳು-ಮೊಮ್ಮಕ್ಕಳನ್ನು ಪಡೆದೆವು. ಎಷ್ಟೋ ಜನರಿಗೆ ಈ ಭಾಗ್ಯ ಇರುವುದಿಲ್ಲ. ನಮಗೆ ಅದೃಷ್ಟ ನೀಡಿದ್ದಕ್ಕೆ ದೇವರಿಗೆ ಧನ್ಯವಾದ ಹೇಳಲೇ ಬೇಕು’ ಎಂದು ಅಮಿತಾಭ್​ ಬರೆದುಕೊಂಡಿದ್ದರು.

ಇದನ್ನೂ ಓದಿ:

ಅಮಿತಾಭ್​ ಫ್ಲಾಪ್​ ಹೀರೋ ಎಂದು ನಾಯಕಿಯರು ದೂರ ಸರಿದಾಗ ಮುಂದೆ ಬಂದಿದ್ದು ಜಯಾ ಬಚ್ಚನ್​; ಅಲ್ಲಿಂದ ಶುರುವಾಯ್ತು ಪ್ರೇಮ ಕಹಾನಿ

‘ನಾನು ದೇಣಿಗೆ ಕೇಳಲ್ಲ, ಕೊಡ್ತೀನಿ’; ಬೇರೆ ಸ್ಟಾರ್​ಗಳಿಗಿಂತ ಭಿನ್ನ ಹೆಜ್ಜೆ ಇಟ್ಟ ಅಮಿತಾಭ್​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ