AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಕೋಟಿ ರೂ. ದೇಣಿಗೆ ನೀಡಿ, ಮಕ್ಕಳ ದತ್ತು ಪಡೆದು, ನೂರಾರು ರೈತರ ಸಾಲ ತೀರಿಸಿದ ಅಮಿತಾಭ್​ಗೆ ಯಾಕಿಷ್ಟು ಕೆಟ್ಟ ಕಮೆಂಟ್​?

Amitabh Bachchan: ಅಮಿತಾಭ್ ಬಚ್ಚನ್​​ ಮತ್ತು ಅವರ ಇಡೀ ಫ್ಯಾಮಿಲಿಯನ್ನು ಟಾರ್ಗೆಟ್​ ಮಾಡಿ ಕೆಟ್ಟ ಪದಗಳಿಂದ ನಿಂದಿಸಲಾಗಿದೆ. ಇದರ ಬಗ್ಗೆ ಅಮಿತಾಭ್​ ಸಿಡಿದೆದ್ದಿದ್ದಾರೆ. ಇಲ್ಲಿಯವರೆಗೂ ತಾವು ಏನೇನು ಮಾಡಿದ್ದೇವೆ ಎಂಬುದನ್ನು ಇಂಚಿಂಚೂ ವಿವರಿಸಿದ್ದಾರೆ.

2 ಕೋಟಿ ರೂ. ದೇಣಿಗೆ ನೀಡಿ, ಮಕ್ಕಳ ದತ್ತು ಪಡೆದು, ನೂರಾರು ರೈತರ ಸಾಲ ತೀರಿಸಿದ ಅಮಿತಾಭ್​ಗೆ ಯಾಕಿಷ್ಟು ಕೆಟ್ಟ ಕಮೆಂಟ್​?
ಅಮಿತಾಭ್ ಬಚ್ಚನ್
ಮದನ್​ ಕುಮಾರ್​
|

Updated on: May 11, 2021 | 8:17 AM

Share

ಕೊರೊನಾ ವೈರಸ್​ನಿಂದಾಗಿ ಇಡೀ ದೇಶವೇ ತತ್ತರಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ದುಡಿಮೆ ಇಲ್ಲದೇ ಕೋಟ್ಯಂತರ ಮಂದಿ ಕಂಗೆಟ್ಟಿದ್ದಾರೆ. ಅಂಥವರಿಗೆ ಸಹಾಯ ಮಾಡಲು ಕೆಲವು ಸೆಲೆಬ್ರಿಟಿಗಳು ಮುಂದೆ ಬರುತ್ತಿರುವುದು ಶ್ಲಾಘನೀಯ. ಹಾಗಂತ ತಾವು ಮಾಡಿದ ಸಹಾಯದ ಬಗ್ಗೆ ಎಲ್ಲರೂ ಪ್ರಚಾರ ಮಾಡಿಕೊಳ್ಳೋಕೆ ಇಷ್ಟಪಡುವುದಿಲ್ಲ. ಅಂಥವರ ಸಾಲಿನಲ್ಲಿ ಅಮಿತಾಭ್​ ಬಚ್ಚನ್​ ಕೂಡ ಇದ್ದಾರೆ. ಆದರೆ ಬಿಗ್​ ಬಿ ಮಾಡಿದ ಸಮಾಜಮುಖಿ ಕೆಲಸದ ಬಗ್ಗೆ ಗೊತ್ತಿರದ ಅನೇಕರು ಕೆಟ್ಟದಾಗಿ ಕಮೆಂಟ್​ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಅಮಿತಾಭ್​ ಸದಾ ಆ್ಯಕ್ಟೀವ್​ ಆಗಿರುತ್ತಾರೆ. ಕೊವಿಡ್​ ಕಷ್ಟದ ಸಂದರ್ಭದಲ್ಲಿ ಅವರು ಯಾವುದೇ ಸಹಾಯ ಮಾಡಿಲ್ಲ ಎಂದು ಆರೋಪಿಸಿ ಅನೇಕ ನೆಟ್ಟಿಗರು ಕೆಟ್ಟ ಕಮೆಂಟ್​ಗಳ ಮೂಲಕ ನಿಂದಿಸಿದ್ದಾರೆ. ಅಮಿತಾಭ್​ ಮತ್ತು ಅವರ ಇಡೀ ಫ್ಯಾಮಿಲಿಯನ್ನು ಟಾರ್ಗೆಟ್​​ ಮಾಡಿ ಕಟು ಪದಗಳಿಂದ ನಿಂದಿಸಲಾಗಿದೆ. ಇದರ ಬಗ್ಗೆ ಅಮಿತಾಭ್​ ಸಿಡಿದೆದ್ದಿದ್ದಾರೆ. ಇಲ್ಲಿಯವರೆಗೂ ತಾವು ಏನೇನು ಮಾಡಿದ್ದೇವೆ ಎಂಬುದನ್ನು ಇಂಚಿಂಚೂ ವಿವರಿಸಿದ್ದಾರೆ.

ಕೊರೊನಾದಿಂದ ಕಂಗೆಟ್ಟಿರುವ ದೆಹಲಿಗೆ ಅಮಿತಾಬ್​ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಒಂದೂವರೆ ಸಾವಿರ ರೈತರ ಸಾಲವನ್ನು ತೀರಿಸಿದ್ದಾರೆ. ಆ ಮೂಲಕ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಿದ್ದಾರೆ. ಹುತಾತ್ಮ ಸೈನಿಕರ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡಿದ್ದಾರೆ. ಹಲವು ಆಸ್ಪತ್ರೆಗಳಿಗೆ ವೈದ್ಯಕೀಯ ಉಪಕರಣಗಳನ್ನು ನೀಡಿದ್ದಾರೆ. ಕಳೆದ ವರ್ಷ 4 ಲಕ್ಷ ಜನರಿಗೆ ಒಂದು ತಿಂಗಳ ಕಾಲ ಉಚಿತವಾಗಿ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಿದ್ದರು. ಮುಂಬೈನ 5 ಸಾವಿರ ಜನರಿಗೆ ಪ್ರತಿದಿನ ಊಟ ನೀಡಿದ್ದರು.

ಕಠಿಣ ಲಾಕ್​ಡೌನ್​ನಿಂದ ತಮ್ಮ ಊರುಗಳಿಗೆ ಬರಿಗಾಲಿನಲ್ಲಿ ನಡೆಯುತ್ತಿದ್ದ ಸಾವಿರಾರು ವಲಸೆ ಕಾರ್ಮಿಕರಿಗೆ ಅಮಿತಾಬ್​ ಚಪ್ಪಲಿಗಳನ್ನು ಕೊಡಿಸಿದ್ದರು. 30 ಬಸ್​ಗಳನ್ನು ಬುಕ್​ ಮಾಡಿ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದರು. ಹೀಗೆ ಬೆಳೆಯುತ್ತ ಸಾಗುತ್ತದೆ ಅಮಿತಾಬ್​ ಮಾಡಿರುವ ದಾನ ಧರ್ಮದ ಪಟ್ಟಿ. ಅಲ್ಲದೆ ಕೊವಿಡ್​ನಿಂದ ತಂದೆ-ತಾಯಿಯನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಅಮಿತಾಬ್​ ದತ್ತು ಪಡೆದುಕೊಂಡು, ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಇಷ್ಟೆಲ್ಲ ಮಾಡಿದ್ದನ್ನು ಬಾಯಿ ಬಿಟ್ಟು ಹೇಳಿಕೊಳ್ಳಬೇಕಾದ ಪರಿಸ್ಥಿತಿ ಬಂದಿರುವುದಕ್ಕೆ ಮುಜುಗರ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇನ್ಮೇಲಾದರೂ ಸತ್ಯ ತಿಳಿಯದೇ ಕಮೆಂಟ್​ ಮಾಡುವವರು ಸುಮ್ಮನಿರುತ್ತಾರೋ ಇಲ್ಲವೋ ಗೊತ್ತಿಲ್ಲ. ಕೆಲವೇ ದಿನಗಳ ಹಿಂದೆ ನಟ ಅಕ್ಷಯ್​ ಕುಮಾರ್​ ಅವರನ್ನೂ ಇದೇ ರೀತಿ ಟಾರ್ಗೆಟ್​ ಮಾಡಲಾಗಿತ್ತು. ಅದಕ್ಕೆ ಅವರ ಪತ್ನಿ ಟ್ವಿಂಕಲ್​ ಖನ್ನಾ ಸರಿಯಾಗಿ ತಿರುಗೇಟು ನೀಡಿದ್ದರು.

ಇದನ್ನೂ ಓದಿ:

Akshay Kumar: ಈ ಕಷ್ಟದಲ್ಲೂ ಅಕ್ಷಯ್​ ಕುಮಾರ್​ ಏನೂ ಸಹಾಯ ಮಾಡ್ತಿಲ್ವಾ? ಪತ್ನಿ ಟ್ವಿಂಕಲ್​ ಖನ್ನಾ ಕೊಟ್ರು ಖಡಕ್​ ಉತ್ತರ

ಕೊವಿಡ್​ ಸಂಕಷ್ಟಕ್ಕೆ ಅನುಷ್ಕಾ-ವಿರಾಟ್​ 2 ಕೋಟಿ ರೂ. ದೇಣಿಗೆ; ನಿಧಿ ಸಂಗ್ರಹಕ್ಕೆ ಮುಂದಾದ ದಂಪತಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ