AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸ ಆರಂಭಿಸುತ್ತಾರಂತೆ.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ
ಅಮಿತಾಭ್​-ರಾಮ್​ ಗೋಪಾಲ್​ ವರ್ಮ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 6:25 PM

Share

ನಿರ್ದೇಶಕ ರಾಮ್ ಗೋಪಾಲ್​ ವರ್ಮ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ ಟಾಲಿವುಡ್​ ಅಂಗಳದಲ್ಲಿ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಅಂದಹಾಗೆ, ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಚೆಹ್ರೆ’ ಮತ್ತು ‘ಜುಂಡ್’​ ತೆರೆಗೆ ಬರೋಕೆ ಸಿದ್ಧವಾಗಿದೆ. ‘ಬ್ರಹ್ಮಾಸ್ತ್ರ, ‘ಮೇ ಡೆ’, ‘ಗುಡ್​ ಬೈ’ ಶೂಟಿಂಗ್​ ಹಂತದಲ್ಲಿವೆ. ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸದಲ್ಲಿ ಬ್ಯುಸಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಕೊವಿಡ್​ ಕಾರಣಕ್ಕೆ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಅಮಿತಾಭ್ ಯಾರಿಂದಲೂ ದೇಣಿಗೆ ಸಂಗ್ರಹಿಸದೆ  ಸ್ವಂತ ಹಣದಲ್ಲಿ ಎಲ್ಲರಿಗೂ ಸಹಾಯ ಮಾಡಿದ್ದಾರೆ. ಅಮಿತಾಭ್​ ಕೆಲಸಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್