AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸ ಆರಂಭಿಸುತ್ತಾರಂತೆ.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ
ಅಮಿತಾಭ್​-ರಾಮ್​ ಗೋಪಾಲ್​ ವರ್ಮ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 6:25 PM

Share

ನಿರ್ದೇಶಕ ರಾಮ್ ಗೋಪಾಲ್​ ವರ್ಮ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ ಟಾಲಿವುಡ್​ ಅಂಗಳದಲ್ಲಿ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಅಂದಹಾಗೆ, ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಚೆಹ್ರೆ’ ಮತ್ತು ‘ಜುಂಡ್’​ ತೆರೆಗೆ ಬರೋಕೆ ಸಿದ್ಧವಾಗಿದೆ. ‘ಬ್ರಹ್ಮಾಸ್ತ್ರ, ‘ಮೇ ಡೆ’, ‘ಗುಡ್​ ಬೈ’ ಶೂಟಿಂಗ್​ ಹಂತದಲ್ಲಿವೆ. ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸದಲ್ಲಿ ಬ್ಯುಸಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಕೊವಿಡ್​ ಕಾರಣಕ್ಕೆ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಅಮಿತಾಭ್ ಯಾರಿಂದಲೂ ದೇಣಿಗೆ ಸಂಗ್ರಹಿಸದೆ  ಸ್ವಂತ ಹಣದಲ್ಲಿ ಎಲ್ಲರಿಗೂ ಸಹಾಯ ಮಾಡಿದ್ದಾರೆ. ಅಮಿತಾಭ್​ ಕೆಲಸಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್