AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸ ಆರಂಭಿಸುತ್ತಾರಂತೆ.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ
ಅಮಿತಾಭ್​-ರಾಮ್​ ಗೋಪಾಲ್​ ವರ್ಮ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 6:25 PM

Share

ನಿರ್ದೇಶಕ ರಾಮ್ ಗೋಪಾಲ್​ ವರ್ಮ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ ಟಾಲಿವುಡ್​ ಅಂಗಳದಲ್ಲಿ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಅಂದಹಾಗೆ, ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಚೆಹ್ರೆ’ ಮತ್ತು ‘ಜುಂಡ್’​ ತೆರೆಗೆ ಬರೋಕೆ ಸಿದ್ಧವಾಗಿದೆ. ‘ಬ್ರಹ್ಮಾಸ್ತ್ರ, ‘ಮೇ ಡೆ’, ‘ಗುಡ್​ ಬೈ’ ಶೂಟಿಂಗ್​ ಹಂತದಲ್ಲಿವೆ. ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸದಲ್ಲಿ ಬ್ಯುಸಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಕೊವಿಡ್​ ಕಾರಣಕ್ಕೆ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಅಮಿತಾಭ್ ಯಾರಿಂದಲೂ ದೇಣಿಗೆ ಸಂಗ್ರಹಿಸದೆ  ಸ್ವಂತ ಹಣದಲ್ಲಿ ಎಲ್ಲರಿಗೂ ಸಹಾಯ ಮಾಡಿದ್ದಾರೆ. ಅಮಿತಾಭ್​ ಕೆಲಸಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!