AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ

ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸ ಆರಂಭಿಸುತ್ತಾರಂತೆ.

ಅಮಿತಾಭ್​-ರಾಮ್​ ಗೋಪಾಲ್​ ವರ್ಮ ಕಾಂಬಿನೇಷನ್​ನಲ್ಲಿ ಬರುತ್ತಿದೆ ಹೊಸ ಸಿನಿಮಾ
ಅಮಿತಾಭ್​-ರಾಮ್​ ಗೋಪಾಲ್​ ವರ್ಮ
ರಾಜೇಶ್ ದುಗ್ಗುಮನೆ
|

Updated on: Jun 06, 2021 | 6:25 PM

Share

ನಿರ್ದೇಶಕ ರಾಮ್ ಗೋಪಾಲ್​ ವರ್ಮ ಹಾಗೂ ಬಾಲಿವುಡ್​ ಹಿರಿಯ ನಟ ಅಮಿತಾಭ್​ ಬಚ್ಚನ್​ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಅದು ಇನ್ನೂ ಹಾಗೆಯೇ ಇದೆ ಅನ್ನೋದು ವಿಶೇಷ. ಇದರ ಪರಿಣಾಮವಾಗಿ ಈಗ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡೋಕೆ ರೆಡಿ ಆಗಿದ್ದಾರಂತೆ. ಹೀಗೊಂದು ಸುದ್ದಿ ಟಾಲಿವುಡ್​ ಅಂಗಳದಲ್ಲಿ ಹರಿದಾಡುತ್ತಿದೆ.

‘ನಿಶಬ್ದ’, ‘ರಾಮ್​ ಗೋಪಾಲ್​ ವರ್ಮ ಕಿ ಆಗ್’​, ‘ಸರ್ಕಾರ್’, ‘ಸರ್ಕಾರ್​ 2’ ಮತ್ತು ‘ಸರ್ಕಾರ್​ 3’ ಚಿತ್ರಗಳಲ್ಲಿ ಆರ್​ಜಿವಿ ಹಾಗೂ ಅಮಿತಾಭ್ ಒಟ್ಟಾಗಿ ಕೆಲಸ ಮಾಡಿದ್ದರು. ಸರ್ಕಾರ್​ 3 ಸಿನಿಮಾ 2017ರಲ್ಲಿ ತೆರೆಗೆ ಬಂದಿತ್ತು. ಇದಾದ ನಂತರ ಇಬ್ಬರೂ ಮತ್ತೆ ಒಟ್ಟಾಗಿ ಕೆಲಸ ಮಾಡಿಲ್ಲ. ಈಗ ಟಾಲಿವುಡ್​ ಅಂಗಳದಲ್ಲಿ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಅಮಿತಾಭ್​ ಹಾಗೂ ಆರ್​ಜಿವಿ​ ಮತ್ತೆ ಒಂದಾಗುತ್ತಿದ್ದಾರಂತೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

ಅಂದಹಾಗೆ, ಈ ಹೊಸ ಪ್ರಾಜೆಕ್ಟ್​ ಸೆಟ್ಟೇರೋಕೆ ಕೊಂಚ ಸಮಯ ಹಿಡಿಯಲಿದೆ ಎನ್ನಲಾಗುತ್ತಿದೆ. ಅಮಿತಾಭ್​ ಸದ್ಯ, ಸಾಕಷ್ಟು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ‘ಚೆಹ್ರೆ’ ಮತ್ತು ‘ಜುಂಡ್’​ ತೆರೆಗೆ ಬರೋಕೆ ಸಿದ್ಧವಾಗಿದೆ. ‘ಬ್ರಹ್ಮಾಸ್ತ್ರ, ‘ಮೇ ಡೆ’, ‘ಗುಡ್​ ಬೈ’ ಶೂಟಿಂಗ್​ ಹಂತದಲ್ಲಿವೆ. ಈ ಪ್ರಾಜೆಕ್ಟ್​ಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಪ್ರಾಜೆಕ್ಟ್​ ಕೆಲಸದಲ್ಲಿ ಬ್ಯುಸಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು, ವರ್ಮಾ ಲಾಕ್​ಡೌನ್​ನಲ್ಲೇ ಹೊಸ ಮುಖಗಳನ್ನು ಇಟ್ಟುಕೊಂಡು ಚಿತ್ರಗಳನ್ನು ಮಾಡುತ್ತಿದ್ದಾರೆ. ಅವರ ಎಂಟರ್​ ದಿ ಗರ್ಲ್​ ಡ್ರಾಗನ್​ ಮತ್ತು ಡೇಂಜರಸ್​ ಸಿನಿಮಾಗಳು ತೆರೆಗೆಬರೋಕೆ ಸಿದ್ಧವಾಗಿದೆ.

ಕೊವಿಡ್​ ಕಾರಣಕ್ಕೆ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಅಮಿತಾಭ್ ಯಾರಿಂದಲೂ ದೇಣಿಗೆ ಸಂಗ್ರಹಿಸದೆ  ಸ್ವಂತ ಹಣದಲ್ಲಿ ಎಲ್ಲರಿಗೂ ಸಹಾಯ ಮಾಡಿದ್ದಾರೆ. ಅಮಿತಾಭ್​ ಕೆಲಸಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ