AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ

ನಟ ಅಮಿತಾಭ್​ ಬಚ್ಚನ್​ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ. ಕೊಂಚವೇ ವಿಳಂಬ ಮಾಡಿದ್ದರೂ ತಾವು ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು ಎಂಬ ಅಂಶವನ್ನು ಅವರು ಬಹಿರಂಗಪಡಿಸಿದ್ದಾರೆ.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ
ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
| Edited By: |

Updated on: Mar 15, 2021 | 4:15 PM

Share

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಅವರಿಗೆ ಈಗ 78 ವರ್ಷ ವಯಸ್ಸು. ಈಗಲೂ ಅವರು ಸಖತ್​ ಆ್ಯಕ್ಟೀವ್ ಆಗಿದ್ದಾರೆ. ಹದಿಹರೆಯದ ಹೀರೋಗಳೂ ನಾಚುವಂತೆ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಾಗಂತ ಅವರು ಸಂಪೂರ್ಣ ಆರೋಗ್ಯವಾಗಿದ್ದಾರಾ? ಖಂಡಿತಾ ಇಲ್ಲ. ಅವರೇ ಹೇಳಿಕೊಂಡಿರುವಂತೆ ಹಲವು ಅನಾರೋಗ್ಯ ಸಮಸ್ಯೆಗಳು ಅವರನ್ನು ಭಾದಿಸುತ್ತಿವೆ. ಇತ್ತೀಚೆಗೆ ಅವರ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಕೆಲವೇ ದಿನಗಳ ಹಿಂದೆ ಅವರಿಗೆ ಒಂದು ಕಣ್ಣಿನ ಆಪರೇಷನ್​ ಮಾಡಲಾಗಿತ್ತು. ಈಗ ಇನ್ನೊಂದು ಕಣ್ಣಿನ ಆಪರೇಷನ್​ ಕೂಡ ಆಗಿದೆ. ಸದ್ಯಕ್ಕೆ ಬಿಗ್​-ಬಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷ್ಯ ಮಾಡಿದ್ದರೂ ಕೂಡ ಅಮಿತಾಭ್​ ದೃಷ್ಟಿ ಕಳೆದುಕೊಳ್ಳಬೇಕಿತ್ತು. ಈ ಮಾತನ್ನು ಸ್ವತಃ ಅವರು ಬಹಿರಂಗ ಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ತಮ್ಮ ಅನುಭವವನ್ನು ಬಚ್ಚನ್​ ಹಂಚಿಕೊಂಡಿದ್ದಾರೆ.

‘ಅದ್ಭುತವಾದ ಈ ಜಗತ್ತಿನ ಬಣ್ಣ, ಗಾತ್ರ, ಆಕಾರವನ್ನು ನೋಡುತ್ತಿದ್ದೇನೆ. ಇಷ್ಟು ದಿನ ಇದನ್ನು ಮಿಸ್​ ಮಾಡಿಕೊಂಡಿದ್ದೆ. ಇದು ಜೀವನವನ್ನೇ ಬದಲಾಯಿಸುವಂತಹ ಅನುಭವ. ಡಾ. ಹಿಮಾಂಶು ಮೆಹ್ತಾ ಮತ್ತು ತಂಡದವರು ಆಧುನಿಕ ವೈದ್ಯಕೀಯ ಸೌಲಭ್ಯದಿಂದ ನನ್ನ ಸಮಸ್ಯೆ ಪರಿಹರಿಸಿದರು. ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷಿಸಿದ್ದರೂ ಕೂಡ ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು. ಹಾಗಾಗಿ ಎಲ್ಲರಿಗೂ ನನ್ನ ಸಲಹೆ ಏನೆಂದರೆ, ತುಂಬ ತಡವಾಗುವುದಕ್ಕೂ ಮುನ್ನವೇ ಕಣ್ಣಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ’ ಎಂದು ತಮ್ಮ ಬ್ಲಾಗ್​ನಲ್ಲಿ ಅಮಿತಾಭ್​ ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಸಲಹೆ ನೀಡಿದ್ದಾರೆ.

ಅಮಿತಾಭ್​ ಅವರಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿವೆ. ಅವರ ಲಿವರ್ ಕೆಲಸ ಮಾಡುತ್ತಿರುವುದು ಶೇ.25ರಷ್ಟು ಮಾತ್ರ. ಹಾಗಿದ್ದರೂ ಕೂಡ ಅವರು ಸಿನಿಮಾ ಚಟುವಟಿಕೆಗಳಲ್ಲಿ ತುಂಬ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

ಚೆಹ್ರೇ, ಜುಂಡ್​, ಬ್ರಹ್ಮಾಸ್ತ್ರ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದು ಈ ವರ್ಷವೇ ಬಿಡುಗಡೆ ಆಗಲಿವೆ. ಕಳೆದ ವರ್ಷ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಹಲವು ದಿನಗಳ ಕಾಲ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅವರು ಗುಣಮುಖರಾಗಿದ್ದರು. ಅಷ್ಟರಲ್ಲಿಯೇ ಕಣ್ಣಿನ ಸಮಸ್ಯೆ ಎದುರಾಯಿತು.

ಇದನ್ನೂ ಓದಿ: ‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​