Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ

ನಟ ಅಮಿತಾಭ್​ ಬಚ್ಚನ್​ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ. ಕೊಂಚವೇ ವಿಳಂಬ ಮಾಡಿದ್ದರೂ ತಾವು ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು ಎಂಬ ಅಂಶವನ್ನು ಅವರು ಬಹಿರಂಗಪಡಿಸಿದ್ದಾರೆ.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ
ಅಮಿತಾಭ್​ ಬಚ್ಚನ್​
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Mar 15, 2021 | 4:15 PM

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಅವರಿಗೆ ಈಗ 78 ವರ್ಷ ವಯಸ್ಸು. ಈಗಲೂ ಅವರು ಸಖತ್​ ಆ್ಯಕ್ಟೀವ್ ಆಗಿದ್ದಾರೆ. ಹದಿಹರೆಯದ ಹೀರೋಗಳೂ ನಾಚುವಂತೆ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಾಗಂತ ಅವರು ಸಂಪೂರ್ಣ ಆರೋಗ್ಯವಾಗಿದ್ದಾರಾ? ಖಂಡಿತಾ ಇಲ್ಲ. ಅವರೇ ಹೇಳಿಕೊಂಡಿರುವಂತೆ ಹಲವು ಅನಾರೋಗ್ಯ ಸಮಸ್ಯೆಗಳು ಅವರನ್ನು ಭಾದಿಸುತ್ತಿವೆ. ಇತ್ತೀಚೆಗೆ ಅವರ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಕೆಲವೇ ದಿನಗಳ ಹಿಂದೆ ಅವರಿಗೆ ಒಂದು ಕಣ್ಣಿನ ಆಪರೇಷನ್​ ಮಾಡಲಾಗಿತ್ತು. ಈಗ ಇನ್ನೊಂದು ಕಣ್ಣಿನ ಆಪರೇಷನ್​ ಕೂಡ ಆಗಿದೆ. ಸದ್ಯಕ್ಕೆ ಬಿಗ್​-ಬಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷ್ಯ ಮಾಡಿದ್ದರೂ ಕೂಡ ಅಮಿತಾಭ್​ ದೃಷ್ಟಿ ಕಳೆದುಕೊಳ್ಳಬೇಕಿತ್ತು. ಈ ಮಾತನ್ನು ಸ್ವತಃ ಅವರು ಬಹಿರಂಗ ಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ತಮ್ಮ ಅನುಭವವನ್ನು ಬಚ್ಚನ್​ ಹಂಚಿಕೊಂಡಿದ್ದಾರೆ.

‘ಅದ್ಭುತವಾದ ಈ ಜಗತ್ತಿನ ಬಣ್ಣ, ಗಾತ್ರ, ಆಕಾರವನ್ನು ನೋಡುತ್ತಿದ್ದೇನೆ. ಇಷ್ಟು ದಿನ ಇದನ್ನು ಮಿಸ್​ ಮಾಡಿಕೊಂಡಿದ್ದೆ. ಇದು ಜೀವನವನ್ನೇ ಬದಲಾಯಿಸುವಂತಹ ಅನುಭವ. ಡಾ. ಹಿಮಾಂಶು ಮೆಹ್ತಾ ಮತ್ತು ತಂಡದವರು ಆಧುನಿಕ ವೈದ್ಯಕೀಯ ಸೌಲಭ್ಯದಿಂದ ನನ್ನ ಸಮಸ್ಯೆ ಪರಿಹರಿಸಿದರು. ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷಿಸಿದ್ದರೂ ಕೂಡ ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು. ಹಾಗಾಗಿ ಎಲ್ಲರಿಗೂ ನನ್ನ ಸಲಹೆ ಏನೆಂದರೆ, ತುಂಬ ತಡವಾಗುವುದಕ್ಕೂ ಮುನ್ನವೇ ಕಣ್ಣಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ’ ಎಂದು ತಮ್ಮ ಬ್ಲಾಗ್​ನಲ್ಲಿ ಅಮಿತಾಭ್​ ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಸಲಹೆ ನೀಡಿದ್ದಾರೆ.

ಅಮಿತಾಭ್​ ಅವರಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿವೆ. ಅವರ ಲಿವರ್ ಕೆಲಸ ಮಾಡುತ್ತಿರುವುದು ಶೇ.25ರಷ್ಟು ಮಾತ್ರ. ಹಾಗಿದ್ದರೂ ಕೂಡ ಅವರು ಸಿನಿಮಾ ಚಟುವಟಿಕೆಗಳಲ್ಲಿ ತುಂಬ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

ಚೆಹ್ರೇ, ಜುಂಡ್​, ಬ್ರಹ್ಮಾಸ್ತ್ರ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದು ಈ ವರ್ಷವೇ ಬಿಡುಗಡೆ ಆಗಲಿವೆ. ಕಳೆದ ವರ್ಷ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಹಲವು ದಿನಗಳ ಕಾಲ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅವರು ಗುಣಮುಖರಾಗಿದ್ದರು. ಅಷ್ಟರಲ್ಲಿಯೇ ಕಣ್ಣಿನ ಸಮಸ್ಯೆ ಎದುರಾಯಿತು.

ಇದನ್ನೂ ಓದಿ: ‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ