ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ

ನಟ ಅಮಿತಾಭ್​ ಬಚ್ಚನ್​ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ. ಕೊಂಚವೇ ವಿಳಂಬ ಮಾಡಿದ್ದರೂ ತಾವು ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು ಎಂಬ ಅಂಶವನ್ನು ಅವರು ಬಹಿರಂಗಪಡಿಸಿದ್ದಾರೆ.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ
ಅಮಿತಾಭ್​ ಬಚ್ಚನ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 15, 2021 | 4:15 PM

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಅವರಿಗೆ ಈಗ 78 ವರ್ಷ ವಯಸ್ಸು. ಈಗಲೂ ಅವರು ಸಖತ್​ ಆ್ಯಕ್ಟೀವ್ ಆಗಿದ್ದಾರೆ. ಹದಿಹರೆಯದ ಹೀರೋಗಳೂ ನಾಚುವಂತೆ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಾಗಂತ ಅವರು ಸಂಪೂರ್ಣ ಆರೋಗ್ಯವಾಗಿದ್ದಾರಾ? ಖಂಡಿತಾ ಇಲ್ಲ. ಅವರೇ ಹೇಳಿಕೊಂಡಿರುವಂತೆ ಹಲವು ಅನಾರೋಗ್ಯ ಸಮಸ್ಯೆಗಳು ಅವರನ್ನು ಭಾದಿಸುತ್ತಿವೆ. ಇತ್ತೀಚೆಗೆ ಅವರ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಕೆಲವೇ ದಿನಗಳ ಹಿಂದೆ ಅವರಿಗೆ ಒಂದು ಕಣ್ಣಿನ ಆಪರೇಷನ್​ ಮಾಡಲಾಗಿತ್ತು. ಈಗ ಇನ್ನೊಂದು ಕಣ್ಣಿನ ಆಪರೇಷನ್​ ಕೂಡ ಆಗಿದೆ. ಸದ್ಯಕ್ಕೆ ಬಿಗ್​-ಬಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷ್ಯ ಮಾಡಿದ್ದರೂ ಕೂಡ ಅಮಿತಾಭ್​ ದೃಷ್ಟಿ ಕಳೆದುಕೊಳ್ಳಬೇಕಿತ್ತು. ಈ ಮಾತನ್ನು ಸ್ವತಃ ಅವರು ಬಹಿರಂಗ ಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ತಮ್ಮ ಅನುಭವವನ್ನು ಬಚ್ಚನ್​ ಹಂಚಿಕೊಂಡಿದ್ದಾರೆ.

‘ಅದ್ಭುತವಾದ ಈ ಜಗತ್ತಿನ ಬಣ್ಣ, ಗಾತ್ರ, ಆಕಾರವನ್ನು ನೋಡುತ್ತಿದ್ದೇನೆ. ಇಷ್ಟು ದಿನ ಇದನ್ನು ಮಿಸ್​ ಮಾಡಿಕೊಂಡಿದ್ದೆ. ಇದು ಜೀವನವನ್ನೇ ಬದಲಾಯಿಸುವಂತಹ ಅನುಭವ. ಡಾ. ಹಿಮಾಂಶು ಮೆಹ್ತಾ ಮತ್ತು ತಂಡದವರು ಆಧುನಿಕ ವೈದ್ಯಕೀಯ ಸೌಲಭ್ಯದಿಂದ ನನ್ನ ಸಮಸ್ಯೆ ಪರಿಹರಿಸಿದರು. ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷಿಸಿದ್ದರೂ ಕೂಡ ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು. ಹಾಗಾಗಿ ಎಲ್ಲರಿಗೂ ನನ್ನ ಸಲಹೆ ಏನೆಂದರೆ, ತುಂಬ ತಡವಾಗುವುದಕ್ಕೂ ಮುನ್ನವೇ ಕಣ್ಣಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ’ ಎಂದು ತಮ್ಮ ಬ್ಲಾಗ್​ನಲ್ಲಿ ಅಮಿತಾಭ್​ ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಸಲಹೆ ನೀಡಿದ್ದಾರೆ.

ಅಮಿತಾಭ್​ ಅವರಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿವೆ. ಅವರ ಲಿವರ್ ಕೆಲಸ ಮಾಡುತ್ತಿರುವುದು ಶೇ.25ರಷ್ಟು ಮಾತ್ರ. ಹಾಗಿದ್ದರೂ ಕೂಡ ಅವರು ಸಿನಿಮಾ ಚಟುವಟಿಕೆಗಳಲ್ಲಿ ತುಂಬ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

ಚೆಹ್ರೇ, ಜುಂಡ್​, ಬ್ರಹ್ಮಾಸ್ತ್ರ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದು ಈ ವರ್ಷವೇ ಬಿಡುಗಡೆ ಆಗಲಿವೆ. ಕಳೆದ ವರ್ಷ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಹಲವು ದಿನಗಳ ಕಾಲ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅವರು ಗುಣಮುಖರಾಗಿದ್ದರು. ಅಷ್ಟರಲ್ಲಿಯೇ ಕಣ್ಣಿನ ಸಮಸ್ಯೆ ಎದುರಾಯಿತು.

ಇದನ್ನೂ ಓದಿ: ‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ