AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ

ನಟ ಅಮಿತಾಭ್​ ಬಚ್ಚನ್​ ಅವರು ತಮ್ಮ ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ. ಕೊಂಚವೇ ವಿಳಂಬ ಮಾಡಿದ್ದರೂ ತಾವು ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು ಎಂಬ ಅಂಶವನ್ನು ಅವರು ಬಹಿರಂಗಪಡಿಸಿದ್ದಾರೆ.

ಸ್ವಲ್ಪ ಯಾಮಾರಿದ್ರೂ ಅಮಿತಾಭ್​ ಕಣ್ಣು ಕಳೆದುಕೊಳ್ಳಬೇಕಿತ್ತು! ಇದು ಎಲ್ಲರೂ ಎಚ್ಚರಿಕೆ ವಹಿಸಬೇಕಾದ ವಿಷಯ
ಅಮಿತಾಭ್​ ಬಚ್ಚನ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 15, 2021 | 4:15 PM

Share

ಭಾರತೀಯ ಚಿತ್ರರಂಗದ ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಅವರಿಗೆ ಈಗ 78 ವರ್ಷ ವಯಸ್ಸು. ಈಗಲೂ ಅವರು ಸಖತ್​ ಆ್ಯಕ್ಟೀವ್ ಆಗಿದ್ದಾರೆ. ಹದಿಹರೆಯದ ಹೀರೋಗಳೂ ನಾಚುವಂತೆ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಹಾಗಂತ ಅವರು ಸಂಪೂರ್ಣ ಆರೋಗ್ಯವಾಗಿದ್ದಾರಾ? ಖಂಡಿತಾ ಇಲ್ಲ. ಅವರೇ ಹೇಳಿಕೊಂಡಿರುವಂತೆ ಹಲವು ಅನಾರೋಗ್ಯ ಸಮಸ್ಯೆಗಳು ಅವರನ್ನು ಭಾದಿಸುತ್ತಿವೆ. ಇತ್ತೀಚೆಗೆ ಅವರ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ಕೆಲವೇ ದಿನಗಳ ಹಿಂದೆ ಅವರಿಗೆ ಒಂದು ಕಣ್ಣಿನ ಆಪರೇಷನ್​ ಮಾಡಲಾಗಿತ್ತು. ಈಗ ಇನ್ನೊಂದು ಕಣ್ಣಿನ ಆಪರೇಷನ್​ ಕೂಡ ಆಗಿದೆ. ಸದ್ಯಕ್ಕೆ ಬಿಗ್​-ಬಿ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷ್ಯ ಮಾಡಿದ್ದರೂ ಕೂಡ ಅಮಿತಾಭ್​ ದೃಷ್ಟಿ ಕಳೆದುಕೊಳ್ಳಬೇಕಿತ್ತು. ಈ ಮಾತನ್ನು ಸ್ವತಃ ಅವರು ಬಹಿರಂಗ ಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ತಮ್ಮ ಅನುಭವವನ್ನು ಬಚ್ಚನ್​ ಹಂಚಿಕೊಂಡಿದ್ದಾರೆ.

‘ಅದ್ಭುತವಾದ ಈ ಜಗತ್ತಿನ ಬಣ್ಣ, ಗಾತ್ರ, ಆಕಾರವನ್ನು ನೋಡುತ್ತಿದ್ದೇನೆ. ಇಷ್ಟು ದಿನ ಇದನ್ನು ಮಿಸ್​ ಮಾಡಿಕೊಂಡಿದ್ದೆ. ಇದು ಜೀವನವನ್ನೇ ಬದಲಾಯಿಸುವಂತಹ ಅನುಭವ. ಡಾ. ಹಿಮಾಂಶು ಮೆಹ್ತಾ ಮತ್ತು ತಂಡದವರು ಆಧುನಿಕ ವೈದ್ಯಕೀಯ ಸೌಲಭ್ಯದಿಂದ ನನ್ನ ಸಮಸ್ಯೆ ಪರಿಹರಿಸಿದರು. ಈ ಸಮಸ್ಯೆಯನ್ನು ಸ್ವಲ್ಪವೇ ನಿರ್ಲಕ್ಷಿಸಿದ್ದರೂ ಕೂಡ ದೃಷ್ಟಿ ಕಳೆದುಕೊಳ್ಳಬೇಕಾಗುತ್ತಿತ್ತು. ಹಾಗಾಗಿ ಎಲ್ಲರಿಗೂ ನನ್ನ ಸಲಹೆ ಏನೆಂದರೆ, ತುಂಬ ತಡವಾಗುವುದಕ್ಕೂ ಮುನ್ನವೇ ಕಣ್ಣಿನ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ’ ಎಂದು ತಮ್ಮ ಬ್ಲಾಗ್​ನಲ್ಲಿ ಅಮಿತಾಭ್​ ಬರೆದುಕೊಂಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಅವರು ಸಲಹೆ ನೀಡಿದ್ದಾರೆ.

ಅಮಿತಾಭ್​ ಅವರಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳಿವೆ. ಅವರ ಲಿವರ್ ಕೆಲಸ ಮಾಡುತ್ತಿರುವುದು ಶೇ.25ರಷ್ಟು ಮಾತ್ರ. ಹಾಗಿದ್ದರೂ ಕೂಡ ಅವರು ಸಿನಿಮಾ ಚಟುವಟಿಕೆಗಳಲ್ಲಿ ತುಂಬ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಅವರಿಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ.

ಚೆಹ್ರೇ, ಜುಂಡ್​, ಬ್ರಹ್ಮಾಸ್ತ್ರ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದು ಈ ವರ್ಷವೇ ಬಿಡುಗಡೆ ಆಗಲಿವೆ. ಕಳೆದ ವರ್ಷ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಹಲವು ದಿನಗಳ ಕಾಲ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅವರು ಗುಣಮುಖರಾಗಿದ್ದರು. ಅಷ್ಟರಲ್ಲಿಯೇ ಕಣ್ಣಿನ ಸಮಸ್ಯೆ ಎದುರಾಯಿತು.

ಇದನ್ನೂ ಓದಿ: ‘ಅನಾರೋಗ್ಯ..ಸರ್ಜರಿ’: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ಪೋಸ್ಟ್​ ನೋಡಿ ಅಭಿಮಾನಿಗಳಲ್ಲಿ ಆತಂಕ​

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!