AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳಿ ದುಬಾರಿ ಜ್ಯುವೆಲರಿ ನೀಡಿದ ಅಮಿತಾಭ್ ಬಚ್ಚನ್

ಅಮಿತಾಭ್ ಬಚ್ಚನ್ ಅವರು ಜ್ಯುವೆಲರಿ ಶಾಪ್ ಒಂದರ ಓಪನಿಂಗ್​ಗೆ ಅಯೋಧ್ಯೆಗೆ ಆಗಮಿಸಿದ್ದರು. ಈ ವೇಳೆ ಅವರು ರಾಮ ಮಂದಿರಕ್ಕೆ ತೆರಳಿದ್ದಾರೆ. ಅವರು ರಾಮ ಮಂದಿರಕ್ಕೆ ಬರುವಾಗ ಬಿಗಿ ಭದ್ರತಯೊಂದಿಗೆ ಆಗಮಿಸಿದ್ದಾರೆ. ಕುರ್ತಾ-ಪೈಜಾಮ ಧರಿಸಿ ಅವರು ಗಮನ ಸೆಳೆದಿದ್ದಾರೆ.  ಈ ಫೋಟೋ ವೈರಲ್ ಆಗಿದೆ.

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳಿ ದುಬಾರಿ ಜ್ಯುವೆಲರಿ ನೀಡಿದ ಅಮಿತಾಭ್ ಬಚ್ಚನ್
ಅಮಿತಾಭ್ ಬಚ್ಚನ್
ರಾಜೇಶ್ ದುಗ್ಗುಮನೆ
|

Updated on:Feb 10, 2024 | 11:07 AM

Share

ಅಮಿತಾಭ್ ಬಚ್ಚನ್ (Amitabh Bachchan) ಅವರು ಫೆಬ್ರವರಿ 9ರಂದು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಈ ವೇಳೆ ರಾಮ ಮಂದಿರಕ್ಕೆ ತೆರಳಿ ಅವರು ಪೂಜೆ ಸಲ್ಲಿಕೆ ಮಾದಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಜನವರಿ 22ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಿತು. ಈ ವೇಳೆ ಅಮಿತಾಭ್ ಅವರು ಅಲ್ಲಿಗೆ ತೆರಳಿದ್ದರು. ಕೆಲವೇ ದಿನಗಳಲ್ಲಿ ಅವರು ಮತ್ತೊಮ್ಮೆ ಅಯೋಧ್ಯೆಗೆ ಆಗಮಿಸಿದ್ದಾರೆ. ಈ ವೇಳೆ ಅವರು ಕೃಷ್ಣನಿಗೆ ಜ್ಯುವೆಲರಿಗಳನ್ನು ದೇಣಿಗೆ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ.

ಅಮಿತಾಭ್ ಬಚ್ಚನ್ ಅವರು ರಾಮ ಮಂದಿರಕ್ಕೆ ಬರುವಾಗ ಸಾಕಷ್ಟು ಭದ್ರತೆಗಳೊಂದಿಗೆ ಆಗಮಿಸಿದ್ದಾರೆ. ಕುರ್ತಾ-ಪೈಜಾಮ ಧರಿಸಿ ಅವರು ಗಮನ ಸೆಳೆದಿದ್ದಾರೆ. ಕೇಸರಿ ಬಣ್ಣದ ಶಾಲನ್ನು ಕುತ್ತಿಗೆಗೆ ಹಾಕಿಕೊಂಡಿದ್ದರು. ದೇವಸ್ಥಾನದಲ್ಲಿ ಅವರು ಕೈ ಮುಗಿದು ನಿಂತಿದ್ದಾರೆ. ಅವರು ಜ್ಯುವೆಲರಿ ಶಾಪ್ ಒಂದರ ಓಪನಿಂಗ್​ಗೆ ಅಯೋಧ್ಯೆಗೆ ಆಗಮಿಸಿದ್ದರು. ಈ ವೇಳೆ ಅವರು ರಾಮ ಮಂದಿರಕ್ಕೆ ತೆರಳಿದ್ದಾರೆ. ಈ ವೇಳೆ ಚಿನ್ನದ ಸರವನ್ನು ಅವರು ನೀಡಿದ್ದಾರೆ ಎನ್ನಲಾಗಿದೆ.

ರಾಮ ಮಂದಿರದಲ್ಲಿ ಅಮಿತಾಭ್ ಬಚ್ಚನ್

ಗುರುವಾರ ಮಧ್ಯಾಹ್ನದ ವೇಳೆಗೆ ರಾಮ ಮಂದಿರಕ್ಕೆ ಭೇಟಿ ನೀಡಿದರು ಅಮಿತಾಭ್. ಸುಮಾರು ಅರ್ಧಗಂಟೆ ಅವರು ಅಲ್ಲಿಯೇ ಇದ್ದರು. ಆ ಬಳಿಕ ಅಯೋಧ್ಯೆಯ ಅಧಿಕಾರಗಳ ಜೊತೆ ಮಧ್ಯಾಹ್ನದ ಭೋಜನ ಮಾಡಿದ್ದಾರೆ. ಅಯೋಧ್ಯೆಯ ಕಮಿಷನರ್ ಗೌರವ್ ದಯಾಳ್ ಮನೆಯಲ್ಲಿ ಈ ಭೋಜನಕೂಟ ನಡೆದಿದೆ.

ಇದನ್ನೂ ಓದಿ: ಎರಡನೇ ಬಾರಿ ಅಯೋಧ್ಯೆಗೆ ಭೇಟಿ ನೀಡಿದ ‘ಬಿಗ್​ ಬಿ’ ಅಮಿತಾಭ್​ ಬಚ್ಚನ್​ 

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ಮಾಧುರಿ ದೀಕ್ಷಿತ್, ಚಿರಂಜೀವಿ, ರೋಹಿತ್ ಶೆಟ್ಟಿ, ರಿಷಬ್ ಶೆಟ್ಟಿ, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ರಣಬೀರ್ ಕಪೂರ್ ಮೊದಲಾದವರು ಭಾಗಿ ಆಗಿದ್ದರು. ಎಲ್ಲರೂ ದೇವರ ದರ್ಶನ ಪಡೆದಿದ್ದಾರೆ. ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಅಮಿತಾಭ್ ಬಚ್ಚನ್ ಅವರು ಅಯೋಧ್ಯೆಯಲ್ಲಿ 10,000 ಚದರ ಅಡಿಯ ಭೂಮಿ ಖರೀದಿ ಮಾಡಿದ್ದಾರೆ. ಇದರ ಬೆಲೆ 14.5 ಕೋಟಿ ರೂಪಾಯಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Sat, 10 February 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ