AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಸೆ’ ಧಾರಾವಾಹಿ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ರಾ ಅಮೃತಾ ರಾಮಮೂರ್ತಿ?

ನಟಿ ಅಮೃತಾ ರಾಮಮೂರ್ತಿ ಜನಪ್ರಿಯ ಧಾರಾವಾಹಿಯೊಂದನ್ನು ತೊರೆದ ಕಾರಣ ಬಹಿರಂಗಪಡಿಸಿದ್ದಾರೆ. ಧಾರಾವಾಹಿ ಸೆಟ್‌ನಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳ ಕೊರತೆ, ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದು ಇದಕ್ಕೆ ಮುಖ್ಯ ಕಾರಣ. ವಿಲನ್ ಪಾತ್ರದ ವೈಯಕ್ತಿಕ ಪರಿಣಾಮ ಮತ್ತು ಮಾನಸಿಕ ಅಶಾಂತಿಯೂ ಅವರ ನಿರ್ಧಾರಕ್ಕೆ ಕಾರಣವಾಗಿತ್ತು.

‘ಆಸೆ’ ಧಾರಾವಾಹಿ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ರಾ ಅಮೃತಾ ರಾಮಮೂರ್ತಿ?
ಅಮೃತಾ
ರಾಜೇಶ್ ದುಗ್ಗುಮನೆ
|

Updated on: Apr 30, 2026 | 10:14 AM

Share

ನ್ಯೂಸ್ ಆ್ಯಂಕರ್ ಆಗಿ ವೃತ್ತಿ ಆರಂಭಿಸಿದ ಅಮೃತಾ ರಾಮಮೂರ್ತಿ (Amrutha Ramamoorthy) ಅವರು ನಂತರ ಕಿರುತೆರೆಯಲ್ಲಿ ಮಿಂಚಿದರು. ವಿಲನ್ ಪಾತ್ರಗಳ ಮೂಲಕ ಅವರು ಗಮನ ಸೆಳೆದರು. ಈಗ ಅವರು ಒಂದು ಜನಪ್ರಿಯ ಧಾರಾವಾಹಿ ತೊರೆದ ಬಗ್ಗೆ ಕಾರಣ ನೀಡಿದ್ದಾರೆ. ಧಾರಾವಾಹಿ ಸೆಟ್ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ಥವಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ. ಅವರು ಧಾರಾವಾಹಿ ಹೆಸರನ್ನು ಎಲ್ಲಿಯೂ ಹೇಳಿಲ್ಲ. ಅನೇಕರು ಇದು ‘ಆಸೆ’ ಧಾರಾವಾಹಿ ಇರಬಹುದು ಎಂದು ಊಹಿಸಿದ್ದಾರೆ. ಅವರು ನೀಡಿರುವ ಮಾಹಿತಿ ‘ಆಸೆ’ ಧಾರಾವಾಹಿಯನ್ನು ಹೋಲುತ್ತಿದೆ ಎಂದಿದ್ದಾರೆ.

ನ್ಯೂಸೋ ನ್ಯೂಸು ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಮೃತಾ, ‘ಮಗು ಜನಿಸಿದ ಬಳಿಕ ನೆಗೆಟಿವ್ ಪಾತ್ರವನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದೆ. ಅದು ಜನಪ್ರಿಯತೆ ತಂದುಕೊಟ್ಟಿದೆ ಎಂಬುದು ನಿಜ. ಆದರೆ, ಆ ಪಾತ್ರ ನನ್ನ ವ್ಯಕ್ತಿತ್ವಕ್ಕೆ ಸಂಪೂರ್ಣವಾಗಿ ವಿರುದ್ಧವಾಗಿ ಇರುತ್ತಿತ್ತು. ಒಂದು ಧಾರಾವಾಹಿ ನನ್ನ ಮೇಲೆ ತುಂಬಾನೇ ಪ್ರಭಾವ ಬೀರಿದೆ’ ಎಂದು ಹೇಳಿಕೊಂಡಿದ್ದಾರೆ.

‘ನೀವು ಯಾಕೆ ಅಷ್ಟು ಸುಳ್ಳು ಹೇಳ್ತೀರಾ’ ಎಂದು ಅಮೃತಾ ರಾಮಮೂರ್ತಿ ಅವರಿಗೆ ಯಾರೋ ಬಂದು ಕೇಳಿದ್ದರಂತೆ. ಅದು ಕೂಡ ಮಗುವಿನ ಎದುರಿಗೆ. ಇದು ಅಮೃತಾ ಮೇಲೆ ಸಾಕಷ್ಟು ಪ್ರಭಾವ ಬೀರಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರ ಮಗುವಿನ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದರಂತೆ. ‘ಇದು ನಿಜಕ್ಕೂ ಮನೋಜನ (ಆಸೆ ಧಾರಾವಾಹಿಯಲ್ಲಿ ಅಮೃತಾ ಮಾಡಿದ್ದ ರೋಹಿಣಿ ಪಾತ್ರಧಾರಿಯ ಪತಿ ಪಾತ್ರದ ಹೆಸರು ಮನೋಜ್) ಮಗುವಾ’ ಎಂದು ಪ್ರಶ್ನೆ ಮಾಡುತ್ತಿದ್ದಂತೆ. ಧಾರಾವಾಹಿ ಪಾತ್ರ ಎಷ್ಟು ಪ್ರಭಾವ ಬೀರುತ್ತಿದೆ ಎಂಬುದು ಅವರಿಗೆ ಆಗ ಅರಿವಾಗಿತ್ತು. ‘ನನಗೂ ವೈಯಕ್ತಿಕ ಜೀವನ ಇದೆ’ ಎಂದು ಅವರು ಹೇಳಿದ್ದಾರೆ.

‘ಆ ಧಾರಾವಾಹಿಯಲ್ಲಿ ಕಂಫರ್ಟ್ ಇರಲಿಲ್ಲ. ವ್ಯವಸ್ಥೆ ಸರಿ ಇರಲಿಲ್ಲ. ಹೀಗಾಗಿ, ನಾನು ಬಿಡುವ ನಿರ್ಧಾರ ಮಾಡಿದೆ. ಬಿಡಲು ಕಾರಣ ಲಿಸ್ಟ್ ಮಾಡಿದೆ. ಬಿಡಬೇಕು ಎಂಬ ಕಾರಣ ತುಂಬಾನೇ ದೊಡ್ಡದಿತ್ತು. ಕಥೆ ಹೀರೋ ಹಾಗೂ ವಿಲನ್ ಪಾತ್ರದ ಮೇಲೆ ಸಾಗುತ್ತಿತ್ತು. ಆದರೂ ನಾನು ಬಿಡೋಣ ಎಂದು ನಿರ್ಧರಿಸಿದೆ’ ಎಂದಿದ್ದಾರೆ ಅಮೃತಾ.

ಇದನ್ನೂ ಓದಿ: ಅಮೃತಾ ರಾಮಮೂರ್ತಿ ಫಿಟ್ನೆಸ್ ಜರ್ನಿ ಎಷ್ಟು ಟಫಿತ್ತು ನೋಡಿ

‘ಒಂದು ಬಾತ್​​ರೂಂ ಹೆಣ್ಣುಮಕ್ಕಳಿಗೆ ಪ್ರತ್ಯೇಕವಾಗಿ ಕೊಡಿ ಎಂದು ಕೇಳುತ್ತಿದ್ದೆ. ಆದರೆ, ಕೊಡಲಿಲ್ಲ. ಅದು ಪ್ರಮುಖ ಧಾರಾವಾಹಿ ಆಗಿತ್ತು. ಆ ಧಾರಾವಾಹಿ ಆದ ಬಳಿಕ ನಾನು ಕಿರುತೆರೆ ತೊರೆಯುವ ನಿರ್ಧಾರ ಮಾಡಿದ್ದೆ’ ಎಂದು ಹೇಳಿದ್ದಾರೆ. ಸದ್ಯ ಅಮೃತಾ ಅವರು ಉದಯ ಟಿವಿಯಲ್ಲಿ ಧಾರಾವಾಹಿ ಮಾಡುತ್ತಿದ್ದಾರೆ. ಅಲ್ಲಿಯೂ ಅವರದ್ದು ವಿಲನ್ ಪಾತ್ರ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ