AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರ ಪಾಲಿನ ಕಾವಲುಗಾರ’; ಮಗನ ಕಿಡ್ನ್ಯಾಪ್ ಮಾಡಿದವರಿಗೆ ಗೌತಮ್ ಎಚ್ಚರಿಕೆ

Amruthadhare Serial: ಅಮೃತಧಾರೆ ಧಾರಾವಾಹಿಯಲ್ಲಿ 5 ವರ್ಷದ ಲೀಪ್ ನಂತರ ಗೌತಮ್-ಭೂಮಿಕಾ ಬೇರೆಯಾಗಿದ್ದರು. ಈಗ ಕುಶಾಲನಗರದಲ್ಲಿ ಮಗ ಆಕಾಶನ್ ಕಿಡ್ನ್ಯಾಪ್ ಆಗಿದ್ದು, ಗೌತಮ್ ಆತನನ್ನು ರಕ್ಷಿಸಿದ್ದಾನೆ. ಭೂಮಿಕಾ ಎದುರಿಸಿದ MLAಗೆ ಗೌತಮ್ ಖಡಕ್ ಉತ್ತರ ನೀಡಿದ್ದು, ಇಬ್ಬರೂ ಮತ್ತೆ ಒಂದಾಗುವ ಸುಳಿವು ನೀಡಿದೆ.

‘ಅವರ ಪಾಲಿನ ಕಾವಲುಗಾರ’; ಮಗನ ಕಿಡ್ನ್ಯಾಪ್ ಮಾಡಿದವರಿಗೆ ಗೌತಮ್ ಎಚ್ಚರಿಕೆ
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 29, 2025 | 8:37 AM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ ಫ್ಯಾನ್ಸ್​ಗೆ ಇಷ್ಟ ಆಗುವ  ರೀತಿಯಲ್ಲಿ ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಈಗಾಗಲೇ ಕಥೆ ಐದು ವರ್ಷ ಮುಂದಕ್ಕೆ ಹೋಗಿದೆ. ಗೌತಮ್ ಹಾಗೂ ಭೂಮಿಕಾ ಬೇರೆ ಆಗಿದ್ದಾರೆ. ಈಗ ಇವರನ್ನು ಒಂದು ಮಾಡುವ ರೀತಿಯಲ್ಲಿ ಕಥೆ ಮೂಡಿ ಬರುತ್ತಿದೆ. ಹೀಗಿರುವಾಗಲೇ ಗೌತಮ್ ಹಾಗೂ ಭೂಮಿಕಾ ಮಗ ಆಕಾಶನ್​ ಕಿಡ್ನ್ಯಾಪ್ ಮಾಡಲಾಗಿದೆ. ಅವನನ್ನು ಗೌತಮ್ ಕಾಪಾಡಿದ್ದಾನೆ. ಅಲ್ಲದೆ ಅಮ್ಮ ಮಗನ ಕಾಪಾಡುವ ಕಾವಲುಗಾರ ಎಂದು ಹೇಳಿದ್ದಾನೆ.

ಸದ್ಯ ‘ಅಮೃತಧಾರೆ’ ಧಾರಾವಾಹಿಯ ಕಥೆ ಸಾಗುತ್ತಿರುವುದು ಕುಶಾಲನಗರದಲ್ಲಿ. ಗೌತಮ್ ಭೂಮಿಕಾನಾ ಹುಡುಕುತ್ತಾ ಅಲ್ಲಿಗೆ ಹೋಗಿದ್ದಾನೆ. ಈ ವೇಳೆ ಆತನಿಗೆ ಭೂಮಿಕಾ ಹಾಗೂ ಮಗ ಸಿಕ್ಕಿದ್ದಾರೆ. ಇಬ್ಬರನ್ನೂ ಮತ್ತೆ ಸೇರಿಸಲು ವಿಧಿಯೇ ಸಂಚು ರೂಪಿಸಿದೆ ಎಂದೇ ಹೇಳಬಹುದು. ಇಬ್ಬರೂ ಹಾಯಾಗಿ ದೂರದಿಂದಲೇ ಖುಷಿ ಪಡುವಾಗ ಇವರ ಮಧ್ಯೆ ಎಂಎಲ್​ಎ ಆಗಮನ ಆಗಿದೆ.

ಇದನ್ನೂ ಓದಿ
Image
ನಾನು ಬಾಲ್ಯದಲ್ಲಿ ಕುಂದಾಪುರದ ಬಗ್ಗೆ ಕೇಳಿದ ಕಥೆ ಸಿನಿಮಾ ಆಗಿದೆ; JR NTR
Image
‘ಇನ್ಮುಂದೆ ಈ ರೀತಿಯ ವಿಡಿಯೋ ಬರಲ್ಲ’ ಎಂದ ಮಮ್ಮಿ ಅಶೋಕ್
Image
‘ಬಿಗ್ ಬಾಸ್’ ಮನೆ ಪ್ರವೇಶಿಸಿದ ಎಲ್ಲಾ ಸ್ಪರ್ಧಿಗಳ ಫೋಟೋ, ಹೆಸರು, ವಿವರ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಆ ಭಾಗದ ಎಂಎಲ್​ಎಯ ವಿರೋಧವನ್ನು ಭೂಮಿಕಾ ಕಟ್ಟಿಕೊಂಡಳು. ಎಂಎಲ್​ಎ ಮಗ ಕೆಟ್ಟ ಅಭ್ಯಾಸ ರೂಢಿಸಿಕೊಂಡಿದ್ದಾನೆ ಎಂದು ಆತನಿಗೆ ಎಚ್ಚರಿಸೋ ಕೆಲಸ ಮಾಡಿದಳು ಭೂಮಿಕಾ. ಇದು ತಪ್ಪು ಎಂದು ಆತನಿಗೆ ಭೂಮಿಕಾ ಹೇಳಿದಳು. ಇದು ಎಂಎಲ್​ಎ ಕೋಪಕ್ಕೆ ಕಾರಣ ಆಗಿದೆ. ಈ ಕಾರಣಕ್ಕೆ ಭೂಮಿಕಾ ಮಗನ ಕಿಡ್ನ್ಯಾಪ್ ಮಾಡಲಾಗಿದೆ.

View this post on Instagram

A post shared by Zee Kannada (@zeekannada)

ಕಿಡ್ನ್ಯಾಪ್ ಮಾಡುತ್ತಿದ್ದಂತೆ ಗೌತಮ್ ಅವರ ರಕ್ಷಣೆಗೆ ಹೋಗಿದ್ದಾನೆ. ಮಗುವನ್ನು ರಕ್ಷಣೆ ಮಾಡಿದ್ದಾನೆ. ‘ನಿನಗೂ ಇವರಿಗೂ ಏನು ಸಂಬಂಧ’ ಎಂದು ಎಂಎಲ್​ಎ ಕೇಳಿದ್ದಾನೆ. ಇದಕ್ಕೆ ಉತ್ತರಿಸಿದ ಗೌತಮ್, ‘ಗಂಡ ಹೆಂಡತಿ ಸಂಬಂಧ, ಅಪ್ಪ ಮಗನ ಸಂಬಂಧ. ಅವರನ್ನು ಕಾಪಾಡೋ ಕಾವಲುಗಾರ’ ಎಂದು ಗೌತಮ್ ಹೇಳಿದ್ದಾನೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಕಥೆಯಲ್ಲಿ ಗೌತಮ್ ಸಿಎಂ ಅಥವಾ ಇನ್ಯಾವುದೋ ಹಿರಿಯ ರಾಜಕಾರಣಿಗೆ ಕರೆ ಮಾಡಬಹುದು. ಕರೆ ಮಾಡಿ, ಎಂಎಲ್​ಎ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು. ಈ ಬಗ್ಗೆ ವೀಕ್ಷಕರಿಗೆ ಕುತೂಹಲ ಮೂಡಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಇವರು ಬೇಗ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ