AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವರ ಪಾಲಿನ ಕಾವಲುಗಾರ’; ಮಗನ ಕಿಡ್ನ್ಯಾಪ್ ಮಾಡಿದವರಿಗೆ ಗೌತಮ್ ಎಚ್ಚರಿಕೆ

Amruthadhare Serial: ಅಮೃತಧಾರೆ ಧಾರಾವಾಹಿಯಲ್ಲಿ 5 ವರ್ಷದ ಲೀಪ್ ನಂತರ ಗೌತಮ್-ಭೂಮಿಕಾ ಬೇರೆಯಾಗಿದ್ದರು. ಈಗ ಕುಶಾಲನಗರದಲ್ಲಿ ಮಗ ಆಕಾಶನ್ ಕಿಡ್ನ್ಯಾಪ್ ಆಗಿದ್ದು, ಗೌತಮ್ ಆತನನ್ನು ರಕ್ಷಿಸಿದ್ದಾನೆ. ಭೂಮಿಕಾ ಎದುರಿಸಿದ MLAಗೆ ಗೌತಮ್ ಖಡಕ್ ಉತ್ತರ ನೀಡಿದ್ದು, ಇಬ್ಬರೂ ಮತ್ತೆ ಒಂದಾಗುವ ಸುಳಿವು ನೀಡಿದೆ.

‘ಅವರ ಪಾಲಿನ ಕಾವಲುಗಾರ’; ಮಗನ ಕಿಡ್ನ್ಯಾಪ್ ಮಾಡಿದವರಿಗೆ ಗೌತಮ್ ಎಚ್ಚರಿಕೆ
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 29, 2025 | 8:37 AM

Share

‘ಅಮೃತಧಾರೆ’ ಧಾರಾವಾಹಿಯಲ್ಲಿ ಫ್ಯಾನ್ಸ್​ಗೆ ಇಷ್ಟ ಆಗುವ  ರೀತಿಯಲ್ಲಿ ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಈಗಾಗಲೇ ಕಥೆ ಐದು ವರ್ಷ ಮುಂದಕ್ಕೆ ಹೋಗಿದೆ. ಗೌತಮ್ ಹಾಗೂ ಭೂಮಿಕಾ ಬೇರೆ ಆಗಿದ್ದಾರೆ. ಈಗ ಇವರನ್ನು ಒಂದು ಮಾಡುವ ರೀತಿಯಲ್ಲಿ ಕಥೆ ಮೂಡಿ ಬರುತ್ತಿದೆ. ಹೀಗಿರುವಾಗಲೇ ಗೌತಮ್ ಹಾಗೂ ಭೂಮಿಕಾ ಮಗ ಆಕಾಶನ್​ ಕಿಡ್ನ್ಯಾಪ್ ಮಾಡಲಾಗಿದೆ. ಅವನನ್ನು ಗೌತಮ್ ಕಾಪಾಡಿದ್ದಾನೆ. ಅಲ್ಲದೆ ಅಮ್ಮ ಮಗನ ಕಾಪಾಡುವ ಕಾವಲುಗಾರ ಎಂದು ಹೇಳಿದ್ದಾನೆ.

ಸದ್ಯ ‘ಅಮೃತಧಾರೆ’ ಧಾರಾವಾಹಿಯ ಕಥೆ ಸಾಗುತ್ತಿರುವುದು ಕುಶಾಲನಗರದಲ್ಲಿ. ಗೌತಮ್ ಭೂಮಿಕಾನಾ ಹುಡುಕುತ್ತಾ ಅಲ್ಲಿಗೆ ಹೋಗಿದ್ದಾನೆ. ಈ ವೇಳೆ ಆತನಿಗೆ ಭೂಮಿಕಾ ಹಾಗೂ ಮಗ ಸಿಕ್ಕಿದ್ದಾರೆ. ಇಬ್ಬರನ್ನೂ ಮತ್ತೆ ಸೇರಿಸಲು ವಿಧಿಯೇ ಸಂಚು ರೂಪಿಸಿದೆ ಎಂದೇ ಹೇಳಬಹುದು. ಇಬ್ಬರೂ ಹಾಯಾಗಿ ದೂರದಿಂದಲೇ ಖುಷಿ ಪಡುವಾಗ ಇವರ ಮಧ್ಯೆ ಎಂಎಲ್​ಎ ಆಗಮನ ಆಗಿದೆ.

ಇದನ್ನೂ ಓದಿ
Image
ನಾನು ಬಾಲ್ಯದಲ್ಲಿ ಕುಂದಾಪುರದ ಬಗ್ಗೆ ಕೇಳಿದ ಕಥೆ ಸಿನಿಮಾ ಆಗಿದೆ; JR NTR
Image
‘ಇನ್ಮುಂದೆ ಈ ರೀತಿಯ ವಿಡಿಯೋ ಬರಲ್ಲ’ ಎಂದ ಮಮ್ಮಿ ಅಶೋಕ್
Image
‘ಬಿಗ್ ಬಾಸ್’ ಮನೆ ಪ್ರವೇಶಿಸಿದ ಎಲ್ಲಾ ಸ್ಪರ್ಧಿಗಳ ಫೋಟೋ, ಹೆಸರು, ವಿವರ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಆ ಭಾಗದ ಎಂಎಲ್​ಎಯ ವಿರೋಧವನ್ನು ಭೂಮಿಕಾ ಕಟ್ಟಿಕೊಂಡಳು. ಎಂಎಲ್​ಎ ಮಗ ಕೆಟ್ಟ ಅಭ್ಯಾಸ ರೂಢಿಸಿಕೊಂಡಿದ್ದಾನೆ ಎಂದು ಆತನಿಗೆ ಎಚ್ಚರಿಸೋ ಕೆಲಸ ಮಾಡಿದಳು ಭೂಮಿಕಾ. ಇದು ತಪ್ಪು ಎಂದು ಆತನಿಗೆ ಭೂಮಿಕಾ ಹೇಳಿದಳು. ಇದು ಎಂಎಲ್​ಎ ಕೋಪಕ್ಕೆ ಕಾರಣ ಆಗಿದೆ. ಈ ಕಾರಣಕ್ಕೆ ಭೂಮಿಕಾ ಮಗನ ಕಿಡ್ನ್ಯಾಪ್ ಮಾಡಲಾಗಿದೆ.

View this post on Instagram

A post shared by Zee Kannada (@zeekannada)

ಕಿಡ್ನ್ಯಾಪ್ ಮಾಡುತ್ತಿದ್ದಂತೆ ಗೌತಮ್ ಅವರ ರಕ್ಷಣೆಗೆ ಹೋಗಿದ್ದಾನೆ. ಮಗುವನ್ನು ರಕ್ಷಣೆ ಮಾಡಿದ್ದಾನೆ. ‘ನಿನಗೂ ಇವರಿಗೂ ಏನು ಸಂಬಂಧ’ ಎಂದು ಎಂಎಲ್​ಎ ಕೇಳಿದ್ದಾನೆ. ಇದಕ್ಕೆ ಉತ್ತರಿಸಿದ ಗೌತಮ್, ‘ಗಂಡ ಹೆಂಡತಿ ಸಂಬಂಧ, ಅಪ್ಪ ಮಗನ ಸಂಬಂಧ. ಅವರನ್ನು ಕಾಪಾಡೋ ಕಾವಲುಗಾರ’ ಎಂದು ಗೌತಮ್ ಹೇಳಿದ್ದಾನೆ.

ಇದನ್ನೂ ಓದಿ: ರಾಕೆಟ್ ರೀತಿ ಏರಿತು ‘ಅಮೃತಧಾರೆ’ ಟಿಆರ್​ಪಿ; ಟಾಪ್ ಐದರಿಂದ ‘ನಾ ನಿನ್ನ ಬಿಡಲಾರೆ’ ಔಟ್

ಕಥೆಯಲ್ಲಿ ಗೌತಮ್ ಸಿಎಂ ಅಥವಾ ಇನ್ಯಾವುದೋ ಹಿರಿಯ ರಾಜಕಾರಣಿಗೆ ಕರೆ ಮಾಡಬಹುದು. ಕರೆ ಮಾಡಿ, ಎಂಎಲ್​ಎ ಅನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಬಹುದು. ಈ ಬಗ್ಗೆ ವೀಕ್ಷಕರಿಗೆ ಕುತೂಹಲ ಮೂಡಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಇವರು ಬೇಗ ಒಂದಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್