AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಕ್ರಿಕೆಟರ್ ನನಗೆ ಬೆತ್ತಲೆ ಫೋಟೋ ಕಳುಹಿಸಿದ’; ಶೋನಲ್ಲಿ ಟ್ರಾನ್ಸ್​ಜೆಂಡರ್ ಸೆಲೆಬ್ರಿಟಿ ಆರೋಪ

ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್, ಈಗ ಅನಾಯಾ ಎಂಬ ಹೆಸರಿನಿಂದ ಟ್ರಾನ್ಸ್ ಜೆಂಡರ್ ಆಗಿ ಗುರುತಿಸಿಕೊಂಡಿದ್ದಾರೆ.ಅನಾಯಾ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಲು ಪ್ರಯತ್ನಿಸುತ್ತಿದ್ದಾರೆ. ‘ರೈಸ್ ಆ್ಯಂಡ್ ಫಾಲ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿರುವ ಅನಾಯಾ, ಪ್ರಸಿದ್ಧ ಕ್ರಿಕೆಟರ್ ಒಬ್ಬರು ತಮಗೆ ಬೆತ್ತಲೆ ಚಿತ್ರ ಕಳುಹಿಸಿದ್ದಾರೆಂದು ಬಹಿರಂಗಪಡಿಸಿದ್ದಾರೆ.

‘ಆ ಕ್ರಿಕೆಟರ್ ನನಗೆ ಬೆತ್ತಲೆ ಫೋಟೋ ಕಳುಹಿಸಿದ’; ಶೋನಲ್ಲಿ ಟ್ರಾನ್ಸ್​ಜೆಂಡರ್ ಸೆಲೆಬ್ರಿಟಿ ಆರೋಪ
ಅನಾಯಾ
ರಾಜೇಶ್ ದುಗ್ಗುಮನೆ
|

Updated on:Sep 10, 2025 | 12:39 PM

Share

ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ ಆರ್ಯನ್ ಈಗ ಹುಡುಗಿಯಾಗಿ ಬದಲಾಗಿದ್ದಾರೆ. ಅವರು ತಮ್ಮ ಹೆಸರನ್ನು ಅನಾಯಾ (Anaya)  ಎಂದು ಬದಲಿಸಿಕೊಂಡಿದ್ದಾರೆ. ಅವರು ಅಮೇಜಾನ್ ಎಂಎಕ್ಸ್​​ ಪ್ಲೇಯರ್ ಹೋಸ್ಟ್ ಮಾಡುತ್ತಿರುವ ‘ರೈಸ್ ಆ್ಯಂಡ್ ಫಾಲ್’ ಶೋಗೆ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಜೀವನದಲ್ಲಿ ನಡೆದ ಒಂದು ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಅವರಿಗೆ ಕ್ರಿಕೆಟರ್ ಒಬ್ಬರು ಬೆತ್ತಲೆ ಫೋಟೋ ಕಳುಹಿಸಿದ್ದರಂತೆ.

ಅನಾಯಾ ಹುಟ್ಟುವಾಗ ಹುಡುಗನೇ ಆಗಿದ್ದರು. ಆದರೆ, ಬೆಳೆಯುತ್ತಾ ಬಂದಂತೆ ಅವರಲ್ಲಿ ಹಾರ್ಮೋನ್​​ಗಳಲ್ಲಿ ಬದಲಾವಣೆ ಆಗುತ್ತಾ ಬಂತು. ಹೀಗಾಗಿ, ಅವರು ಹುಡುಗಿಯಾಗಿ ಬದಲಾದರು. ಅವರು ಈಗ ರಿಯಾಲಿಟಿ ಶೋ ಮೂಲಕ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಅವರು ಒಂದು ವಿಚಾರ ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ
Image
Video: ‘ತಡ ಮಾಡದೇ ಮಗು ಮಾಡಿಕೊಳ್ಳಿ’ ಎಂದು ಸಲಹೆ; ಓಕೆ ಎಂದ ಅನುಶ್ರೀ
Image
ರಜನಿಕಾಂತ್ ಉದಾಹರಣೆ ನೀಡಿ ಅಮಿತಾಭ್ ಬಚ್ಚನ್​​ಗೆ ಪಾಠ ಮಾಡಿದ ನೆಟ್ಟಿಗರು
Image
‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್
Image
ಸುಧಾರಾಣಿ ಬಿಗ್ ಬಾಸ್​ಗೆ ಬರ್ತಾರೆ ಎಂದವರಿಗೆ ಉತ್ತರಿಸಿದ ನಟಿ

‘ನಾನು ನವೆಂಬರ್​ನಲ್ಲಿ ಎಲ್ಲರ ಎದುರು ಕಾಣಿಸಿಕೊಂಡೆ. ಡಿಸೆಂಬರ್-ಜನವರಿ ವೇಳೆಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​​ಗಳನ್ನು ಪೋಸ್ಟ್ ಮಾಡಲು ಆರಂಭಿಸಿದೆ. ಮನಸ್ಸಿಗೆ ಏನೆಲ್ಲ ತೋಚುತ್ತದೆಯೋ ಅದನ್ನು ಹಾಕುತ್ತಿದ್ದೆ. ಓರ್ವ ಕ್ರಿಕೆಟರ್ ನನ್ನ ಜೊತೆ ಮಾತನಾಡಲು ಆರಂಭಿಸಿದ’ ಎಂದಿದ್ದಾರೆ ಅನಾಯಾ.

‘ಅವನು ನೇರವಾಗಿ ಆ ರೀತಿಯ ಫೋಟೋ’ ಎಂದು ಅನಾಯಾ ಹೇಳಿದ್ದಾರೆ. ‘ಯಾವ ರೀತಿಯ ಫೋಟೋ? ಬೆತ್ತಲೆ ಫೋಟೋನಾ’ ಎಂದು ಸಹ ಸ್ಪರ್ಧಿ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಅನಾಯಾ ‘ಅರ್ಥ ಮಾಡಿಕೊಳ್ಳಿ’ ಎಂದಿದ್ದಾರೆ. ಮತ್ತೊಬ್ಬರು, ‘ಆ ಕ್ರಿಕೆಟರ್ ಎಲ್ಲರಿಗೂ ಗೊತ್ತಾ’ ಎಂದು ಕೇಳಿದಾಗ, ‘ಅವರು ಎಲ್ಲರಿಗೂ ಗೊತ್ತು’ ಎಂದು ಅನಾಯಾ ಹೇಳಿದ್ದಾರೆ. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಅನಾಯಾ ಅವರಿಗೆ ಬೆತ್ತಲೆ ಫೋಟೋ ಕಳುಹಿಸಿದ ಆ ಕ್ರಿಕೆಟರ್ ಯಾರು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಾ ಇದೆ.

ಇದನ್ನೂ ಓದಿ: ಹುಡುಗಿಯಾಗಿ ಬದಲಾದ ಅನಯಾ ಬಂಗಾರ್​ಗೆ ಬಿಗ್ ಶಾಕ್ ನೀಡಿದ ಇಸಿಬಿ

ಅನಾಯಾ ಇಂಗ್ಲೆಂಡ್ ಮಹಿಳಾ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದರು. ಆದರೆ, ಟ್ರಾನ್ಸ್​ಜೆಂಡರ್​ಗಳಿಗೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಸ್ಪಷ್ಟಪಡಿಸಿತ್ತು. ಈಗ ಅವರು ರಿಯಾಲಿಟಿ ಶೋಗೆ ಬಂದು ಹೈಲೈಟ್ ಆಗುವ ಪ್ರಯತ್ನದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:38 pm, Wed, 10 September 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ