AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಸ್ಟಂಟ್​ ಮಾಸ್ಟರ್ಸ್ ಈಗ ಡೈರೆಕ್ಟರ್​; ಕಮಲ್ ಹಾಸನ್ ಜೊತೆ ಕೈ ಜೋಡಿಸಿದ ಸಹೋದರರು

ಕಮಲ್ ಹಾಸನ್ ಅವರು ಸ್ಟಂಟ್ ಡೈರೆಕ್ಟರ್​​ಗಳಿಗೆ ನಿರ್ದೇಶನ ಮಾಡುವ ಅವಕಾಶ ನೀಡಿದ್ದಾರೆ. ಸಹೋದರರಾದ ಅಂಬುಮಣಿ ಹಾಗೂ ಅರಿವುಮಣಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಟೀಸರ್ ಅನಾವರಣಗೊಂಡಿದೆ.

‘ಕೆಜಿಎಫ್’ ಸ್ಟಂಟ್​ ಮಾಸ್ಟರ್ಸ್ ಈಗ ಡೈರೆಕ್ಟರ್​; ಕಮಲ್ ಹಾಸನ್ ಜೊತೆ ಕೈ ಜೋಡಿಸಿದ ಸಹೋದರರು
‘ಕೆಜಿಎಫ್’ ಸ್ಟಂಟ್​ ಮಾಸ್ಟರ್ಸ್ ಈಗ ಡೈರೆಕ್ಟರ್​; ಕಮಲ್ ಹಾಸನ್ ಜೊತೆ ಕೈ ಜೋಡಿಸಿದ ಸಹೋದರರು
ರಾಜೇಶ್ ದುಗ್ಗುಮನೆ
|

Updated on: Jan 13, 2024 | 7:06 AM

Share

ಕಮಲ್ ಹಾಸನ್ (Kamal Haasan) ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ತೊಡಗಿಕೊಂಡಿದ್ದಾರೆ. ‘ವಿಕ್ರಮ್’ ಸಿನಿಮಾ (Vikram Movie) ಹಿಟ್ ಆದ ಬಳಿಕ ಅವರಿಗೆ ಹೊಸ ಹುರುಪು ಸಿಕ್ಕಿದೆ. ಅವರು ಹಲವು ಚಿತ್ರಗಳನ್ನು ಘೋಷಣೆ ಮಾಡುತ್ತಿದ್ದಾರೆ. ಈಗ ಕಮಲ್ ಹಾಸನ್ ಅವರ 237ನೇ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಹೊಸ ಅವತಾರದಲ್ಲಿ ಕಮಲ್ ಹಾಸನ್ ಅವರು ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘KH 237’ ಎಂದು ಟೈಟಲ್ ಇಡಲಾಗಿದೆ.

ಕಮಲ್ ಹಾಸನ್ ಅವರು ಹೊಸ ಹೊಸ ಪ್ರಯೋಗ ಮಾಡುತ್ತಾರೆ. ಈ ಬಾರಿ ಅವರು ಸ್ಟಂಟ್ ಡೈರೆಕ್ಟರ್​​ಗಳಿಗೆ ನಿರ್ದೇಶನ ಮಾಡುವ ಅವಕಾಶ ನೀಡಿದ್ದಾರೆ. ಸಹೋದರರಾದ ಅಂಬುಮಣಿ ಹಾಗೂ ಅರಿವುಮಣಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಇವರು ಸಹೋದರರಾಗಿದ್ದು, ‘ಕೆಜಿಎಫ್’, ‘ಕೆಜಿಎಫ್ 2’, ‘ಸಲಾರ್’ ಸೇರಿ ಹಲವು ಸಿನಿಮಾಗಳಿಗೆ ಜಂಟಿಯಾಗಿ ಸ್ಟಂಟ್ ಕೊರಿಯೋಗ್ರಫಿ ಮಾಡಿದ್ದಾರೆ. ‘ಕೆಜಿಎಫ್’ ಚಿತ್ರದ ಸಾಹಸ ನಿರ್ದೇಶನಕ್ಕೆ ರಾಷ್ಟ್ರೀಯ ಪ್ರಶಸ್ತಿ ಕೂಡ ಲಭಿಸಿದೆ. ಅವರು ಈಗ ನಿರ್ದೇಶರಾಗುತ್ತಿದ್ದಾರೆ.

ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರಕ್ಕೆ ಅಂಬುಮಣಿ ಹಾಗೂ ಅರಿವುಮಣಿ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಸೆಟ್​​ನಲ್ಲಿ ಅವರು ಕಮಲ್ ಹಾಸನ್​ಗೆ ಕಥೆ ಹೇಳಿದ್ದಾರೆ ಎನ್ನಲಾಗಿದೆ. ‘ರಾಜ್ ಕಮಲ್ ಫಿಲ್ಮ್ಸ್​ ಇಂಟರ್​ನ್ಯಾಷನಲ್’ ಮೂಲಕ ಕಮಲ್ ಹಾಸನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೀ ಟೂ ಆರೋಪಿ ಜೊತೆ ವೇದಿಕೆ ಹಂಚಿಕೊಂಡ ಕಮಲ್ ಹಾಸನ್; ಗಾಯಕಿಯ ಅಸಮಾಧಾನ

ಕಮಲ್ ಹಾಸನ್ ಅವರು ಹೊಸ ಟೀಸರ್​ನ ಶೇರ್​ ಮಾಡಿಕೊಂಡಿದ್ದಾರೆ. ಕಮಲ್ ಹಾಸನ್ ಅವರ ಟ್ರಾನ್ಸ್​ಫಾರ್ಮೇಷನ್ ಜನರಿಗೆ ಇಷ್ಟ ಆಗಿದೆ. ಈ ಟೀಸರ್ ನೋಡಿದ ಬಳಿಕ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ. ಅಂಬುಮಣಿ ಹಾಗೂ ಅರಿವುಮಣಿ ಸಾಹಸ ನಿರ್ದೇಶಕರಾಗಿರುವುದರಿಂದ ಸಹಜವಾಗಿಯೇ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಈ ಸಿನಿಮಾ 2025ರಲ್ಲಿ ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. ಈ ಚಿತ್ರದ ಟೈಟಲ್ ಇನ್ನಷ್ಟೇ ಘೋಷಣೆ ಆಗಬೇಕಿದೆ. ಇನ್ನು, ಎಸ್ ಶಂಕರ್ ನಿರ್ದೇಶನದ ‘ಇಂಡಿಯನ್ 2’ ಏಪ್ರಿಲ್​ನಲ್ಲಿ ರಿಲೀಸ್ ಆಗಲಿದೆ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರ ಮೇ 9ರಂದು ರಿಲೀಸ್ ಆಗಲಿದೆ. ಈ ಎರಡೂ ಚಿತ್ರದಲ್ಲಿ ಕಮಲ್ ಹಾಸನ್ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು