AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ವಿರುದ್ಧ ಆಂಧ್ರ ಪ್ರತಿ ಪಕ್ಷಗಳ ವಾಗ್ದಾಳಿ

Pawan Kalyan: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಹಲವಾರು ಅಡೆ-ತಡೆಗಳ ಬಳಿಕ ಜೂನ್ 12 ರಂದು ಬಿಡುಗಡೆ ಆಗಲಿದೆ. ಇದೀಗ ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಕಾರಣವಾಗಿರಿಸಿಕೊಂಡು ಆಂಧ್ರ ವಿಪಕ್ಷದ ಕೆಲ ನಾಯಕರು ಪವನ್ ಕಲ್ಯಾಣ್ ಹಾಗೂ ‘ಹರಿ ಹರ ವೀರ ಮಲ್ಲು’ ಸಿನಿಮಾದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿನಿಮಾ ಫ್ಲಾಪ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

‘ಹರಿ ಹರ ವೀರ ಮಲ್ಲು’ ವಿರುದ್ಧ ಆಂಧ್ರ ಪ್ರತಿ ಪಕ್ಷಗಳ ವಾಗ್ದಾಳಿ
Hari Hara Veera Mallu
ಮಂಜುನಾಥ ಸಿ.
|

Updated on: Jun 05, 2025 | 12:32 PM

Share

ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ನಟಿಸಿರುವ ‘ಹರಿ ಹರ ವೀರ ಮಲ್ಲು’ ಸಿನಿಮಾ ಹಲವು ಅಡೆ ತಡೆಗಳ ಬಳಿಕ ಕೊನೆಗೂ ಬಿಡುಗಡೆ ಆಗುತ್ತಿದೆ. ಸಿನಿಮಾ ಜೂನ್ 12 ರಂದು ತೆರೆಗೆ ಬರಲಿದೆ. ಸಿನಿಮಾ ಸುಮಾರು ಐದು ವರ್ಷಗಳ ಕಾಲ ಚಿತ್ರೀಕರಣಗೊಂಡಿದೆ. ಹಲವು ಅಡೆ-ತಡೆಗಳನ್ನು ದಾಟಿ ಬಿಡುಗಡೆ ಹೊಸ್ತಿಲಿಗೆ ಬಂದು ನಿಂತಿದೆ. ಇದೀಗ ಸಿನಿಮಾ ವಿರುದ್ಧ ಹಾಗೂ ಪವನ್ ಕಲ್ಯಾಣ್ ವಿರುದ್ಧ ಪ್ರತಿ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.

ವೈಸಿಆರ್​ಸಿಪಿಯ ಕೆಲ ಮುಖಂಡರು ಇದೀಗ ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಕಾರಣವಾಗಿ ಇರಿಸಿಕೊಂಡು ಪವನ ಕಲ್ಯಾಣ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಪವನ್ ಕಲ್ಯಾಣ್​ ತನ್ನ ರಾಜಕೀಯ ಲಾಭಕ್ಕಾಗಿ ಸಿನಿಮಾ ಅನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ವೈಸಿಆರ್​ಸಿಪಿ ಮುಖಂಡ, ಮಾಜಿ ಸಚಿವ ಪೆರ್ನಿ ನಾನಿ ಆರೋಪಿಸಿದ್ದಾರೆ. ಮಾತ್ರವಲ್ಲದೆ ಸಿನಿಮಾ ನಿರ್ಮಾಪಕರ ಹಣವನ್ನು ಸಹ ಹಾಳು ಮಾಡಿದ್ದಾರೆ. ರಾಜಕೀಯ ಪ್ರಭಾವ ಬಳಸಿ ಚಿತ್ರಮಂದಿರಗಳ ಮಾಲೀಕರ ಮೇಲೆ ಒತ್ತಡ ಹೇರಿ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

‘ಸಿನಿಮಾಗಳ ಮೇಲೆ ಸರ್ಕಾರಕ್ಕೆ ಯಾವ ಅಧಿಕಾರವೂ ಇಲ್ಲ ಎಂದು ಈ ಹಿಂದೆ ಪವನ್ ಕಲ್ಯಾಣ್ ಆರೋಪ ಮಾಡಿದ್ದರು. ಆದರೆ ಈಗ ಅವರೇ ಸಿನಿಮಾಗಳ ವ್ಯವಹಾರದಲ್ಲಿ ಮೂಗು ತೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚಿತ್ರಮಂದಿರಗಳ ಮಾಲೀಕರ ಸಂಕಷ್ಟವನ್ನು ಅವರ ಬೇಡಿಕೆಯನ್ನು ಪವನ್ ಕಲ್ಯಾಣ್ ಪರಿಗಣನೆಗೆ ತೆಗೆದುಕೊಂಡಿಲ್ಲ. ತಮ್ಮ ವೈಯಕ್ತಿಕ ಲಾಭಕ್ಕಾಗಿ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ಮಾತ್ರವಲ್ಲದೆ, ‘ಹರಿ ಹರ ವೀರ ಮಲ್ಲು’ ಸಿನಿಮಾ ಅಟ್ಟರ್ ಫ್ಲಾಪ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮತ್ತೊಬ್ಬ ಮಾಜಿ ಮಂತ್ರಿ ಅಂಬಾಟಿ ರಾಮ್​ಬಾಬು ಸಹ ಸಿನಿಮಾ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ:ಯೂಟ್ಯೂಬರ್ ಬಂಧನ, ಬೆಂಬಲಕ್ಕೆ ಬಂದ ಪವನ್ ಕಲ್ಯಾಣ್, ಕಂಗನಾ

‘ಹರಿ ಹರ ವೀರ ಮಲ್ಲು’ ಸಿನಿಮಾ ಮೊಘಲ್ ದೊರೆಯ ವಿರುದ್ಧ ಹೋರಾಡಿದ ವ್ಯಕ್ತಿಯ ಕತೆಯಾಗಿದ್ದು, ಸಿನಿಮಾದ ಮೊದಲ ಕೆಲ ಭಾಗವನ್ನು ಕ್ರಿಶ್ ನಿರ್ದೇಶನ ಮಾಡಿದ್ದಾರೆ. ಆದರೆ ಅವರು ಸಿನಿಮಾ ಬಿಟ್ಟು ಹೊರನಡೆದು ಆ ಬಳಿಕ ಮತ್ತೊಬ್ಬ ನಿರ್ದೇಶಕ ಸಿನಿಮಾ ಪೂರ್ತಿ ಮಾಡಿದ್ದಾರೆ. ಸಿನಿಮಾ ಐದು ವರ್ಷದ ಹಿಂದೆ ಪ್ರಾರಂಭವಾಗಿದ್ದು, ಪವನ್ ಕಲ್ಯಾಣ್ ಅವರ ಚುನಾವಣೆ ಪ್ರಚಾರ ಆ ಬಳಿಕ ಅವರು ಉಪ ಮುಖ್ಯಮಂತ್ರಿಯಾಗಿ ಆಡಳಿತದಲ್ಲಿ ಬ್ಯುಸಿ ಆದ ಕಾರಣ ಚಿತ್ರೀಕರಣ ನೆನೆಗುದಿಗೆ ಬಿದ್ದು ಅಂತಿಮವಾಗಿ ಜೂನ್ 12 ಕ್ಕೆ ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಜೂನ್ 8 ರಂದು ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ