AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ

Movie ticket price: ಕರ್ನಾಟಕ ಸರ್ಕಾರ ಏಕರೂಪ ಟಿಕೆಟ್ ದರ ತರುವ ಪ್ರಯತ್ನ ಮಾಡಿತ್ತು ಆದರೆ ಕೆಲವು ನಿರ್ಮಾಣ ಸಂಸ್ಥೆಗಳು ಅಡ್ಡಗಾಲು ಹಾಕಿದ್ದರಿಂದ ಆದೇಶಕ್ಕೆ ತಡೆ ಬಿದ್ದಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ವ್ಯವಸ್ಥೆ ತರಲು ಅಲ್ಲಿನ ಸರ್ಕಾರ ಸಜ್ಜಾಗಿದೆ. ಈಗಾಗಲೇ ಸಂಬಂಧಪಟ್ಟವರೊಡನೆ ಸಭೆ ಸಹ ನಡೆದಿದೆ.

ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ
Theater
ಮಂಜುನಾಥ ಸಿ.
|

Updated on: Dec 26, 2025 | 7:04 PM

Share

ಸಿನಿಮಾ (Cinema) ಟಿಕೆಟ್ ದರಗಳ ಬಗ್ಗೆ ಇತ್ತೀಚೆಗೆ ಹಲವು ರಾಜ್ಯಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಚರ್ಚೆ ಜೋರಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರವನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆ ನೀಡಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ಕೂಗು ಕೇಳಿ ಬರುತ್ತಿದೆ. ಹೊಸ ಸಿನಿಮಾಗಳು ಬಿಡುಗಡೆ ಆದಾಗಲೆಲ್ಲ ಸಿನಿಮಾ ಟಿಕೆಟ್ ದರಗಳನ್ನು ಏರಿಸಲಾಗುತ್ತಿತ್ತು, ಇದರಿಂದ ಜನ ಬೇಸತ್ತು ಹೋಗಿದ್ದರು. ಇದಕ್ಕೆಲ್ಲ ಅಂತ್ಯ ಹಾಡಲು ಆಂಧ್ರ ಸರ್ಕಾರ ಮುಂದಾಗಿದೆ.

ಆಂಧ್ರ ಮತ್ತು ತೆಲಂಗಾಣಗಳಲ್ಲಿ ಟಿಕೆಟ್ ದರಗಳು ತುಸು ಕಡಿಮೆಯೇ ಇವೆ. ಆದರೆ ಪ್ರತಿ ಬಾರಿ ದೊಡ್ಡ ಬಜೆಟ್​ನ ಸಿನಿಮಾಗಳು ಬಿಡುಗಡೆ ಆಗುವ ಸಮಯದಲ್ಲೆಲ್ಲ ಟಿಕೆಟ್ ದರಗಳನ್ನು ಐದು ದಿನ, ಒಂದು ವಾರ ಹೀಗೆ ಹೆಚ್ಚಿಸಲಾಗುತ್ತದೆ. ಇದಕ್ಕೆ ಸಿನಿಮಾ ತಂಡಗಳು ಸರ್ಕಾರದ ಬಳಿ ಅರ್ಜಿ ಹಾಕಿ ಅನುಮತಿಯನ್ನು ಪಡೆದುಕೊಳ್ಳುತ್ತವೆ. ಆದರೆ ಪ್ರತಿ ಬಾರಿ ಹೀಗೆ ಟಿಕೆಟ್ ದರ ಏರಿಕೆ ಮಾಡಿದಾಗಲೂ ಸಿನಿಮಾ ಪ್ರೇಮಿಗಳು ಟೀಕೆ ಮಾಡುತ್ತಿದ್ದರು. ಇದೇ ಕಾರಣಕ್ಕೆ ಇದಕ್ಕೆ ಅಂತ್ಯ ಹಾಡಲು ಆಂಧ್ರ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ:ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಆಂಧ್ರ ಪ್ರದೇಶದ ಸಿನಿಮಾಟೊಗ್ರಫಿ ಸಚಿವ ಕಂಡುಲ ದುರ್ಗೇಶ್ ಈ ಬಗ್ಗೆ ಮಾತನಾಡಿದ್ದು, ‘ಏಕರೂಪ ಟಿಕೆಟ್ ದರವನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿವೆ. ಟಿಕೆಟ್ ದರಗಳು ಸಿನಿಮಾ ರಂಗ ಹಾಗೂ ಪ್ರೇಕ್ಷಕರ ಇಬ್ಬರಿಗೂ ಅನುಕೂಲಕರವಾಗಿ ಇರುವಂತೆ ನೋಡಿಕೊಳ್ಳಲಾಗುತ್ತದೆ’ ಎಂದಿದ್ದಾರೆ. ಸಿನಿಮಾಟೊಗ್ರಫಿ ಸಚಿವರು ಈಗಾಗಲೇ ಕೆಲವು ಪ್ರಮುಖ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ತೆಲುಗು ಚಿತ್ರರಂಗದ ಕೆಲ ಪ್ರಮುಖರು ಸಹ ಭಾಗವಹಿಸಿದ್ದರು.

ಪದೇ ಪದೇ ಟಿಕೆಟ್ ದರ ಹೆಚ್ಚಳದ ಬಗ್ಗೆ ಸಿನಿಮಾ ಪ್ರೇಮಿಗಳು ಮಾತ್ರವಲ್ಲ ಕೆಲ ಸಿನಿಮಾ ಮಂದಿ ಸಹ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಟಿಕೆಟ್ ದರ ಹೆಚ್ಚಳದಿಂದ ಸಣ್ಣ ಸಿನಿಮಾಗಳಿಗೆ ಭಾರಿ ಹಾನಿ ಆಗುತ್ತಿದೆ. ಜನ ಹಣವನ್ನು ದೊಡ್ಡ ಸಿನಿಮಾಗಳಿಗೆ ಖರ್ಚು ಮಾಡಿ, ಸಣ್ಣ ಸಿನಿಮಾಗಳು ಬಂದಾಗ ನಿರ್ಲಕ್ಷ್ಯ ತೋರುತ್ತಿದ್ದಾರೆ ಅಲ್ಲದೆ, ಈ ರೀತಿ ಕೆಲವು ಸಿನಿಮಾಗಳಿಗೆ ಮಾತ್ರವೇ ಟಿಕೆಟ್ ದರ ಹೆಚ್ಚಿಸುವುದು, ಬೇರೆ ಸಿನಿಮಾ ತಂಡಗಳಿಗೆ ಮಾಡುವ ಅನ್ಯಾಯದಂತೆ ತೋರುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಇದೀಗ ಸರ್ಕಾರ, ಇದಕ್ಕೊಂದು ಅಂತ್ಯ ಹಾಡಲು ಮುಂದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'