AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ, ತೆಲಂಗಾಣದ ಪ್ರವಾಹ ಸಂತ್ರಸ್ತರ ನೆರವಿಗೆ 6 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

ಮೊದಲು 2 ಕೋಟಿ ರೂಪಾಯಿ ದೇಣಿಗೆ ನೀಡಿದ ಪವನ್​ ಕಲ್ಯಾಣ್​ ಅವರು ನಂತರ ಮತ್ತೆ 4 ಕೋಟಿ ರೂಪಾಯಿಗಳನ್ನು ನೀಡುವುದಾಗಿ ತಿಳಿಸಿದ್ದಾರೆ. ಪ್ರವಾಹಕ್ಕೆ ಸಿಕ್ಕ ಅಂದಾಜು 400 ಪಂಚಾಯತ್​ಗಳಿಗೆ ಈ ಹಣದಿಂದ ಸಹಾಯ ಆಗಲಿದೆ. ತೆಲುಗು ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಕೂಡ ಕೋಟ್ಯಂತರ ರೂಪಾಯಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಆಂಧ್ರ, ತೆಲಂಗಾಣದ ಪ್ರವಾಹ ಸಂತ್ರಸ್ತರ ನೆರವಿಗೆ 6 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್
ಪವನ್​ ಕಲ್ಯಾಣ್​
ಮದನ್​ ಕುಮಾರ್​
|

Updated on: Sep 04, 2024 | 10:12 PM

Share

ಪ್ರವಾಹದಿಂದಾಗಿ ಆಂಧ್ರ ಮತ್ತು ತೆಲಂಗಾಣದಲ್ಲಿ ಜನಜೀವನ ಅಸ್ತವ್ಯಸ್ತ ಆಗಿದೆ. ಹೀಗಾಗಿ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈಗಾಗಲೇ ಚಿರಂಜೀವಿ, ರಾಮ್​ ಚರಣ್​, ಪ್ರಭಾಸ್​, ಅಲ್ಲು ಅರ್ಜುನ್​, ನಂದಮೂರಿ ಬಾಲಕೃಷ್ಣ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೋಟ್ಯಂತರ ರೂಪಾಯಿ ದೇಣಿಗೆ ನೀಡಿದ್ದಾರೆ. ಆ ಮೂಲಕ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಈಗ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ, ಟಾಲಿವುಡ್​ ನಟ ಪವನ್​ ಕಲ್ಯಾಣ್​ ಅವರು 6 ಕೋಟಿ ರೂಪಾಯಿ ದೇಣಿಗೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರರಾಗಿದ್ದಾರೆ.

ಮೊದಲು ಪವನ್​ ಕಲ್ಯಾಣ್​ ಅವರು ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ಒಂದು ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದರು. ಆ ನಂತರ ಅವರು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ, ಈ ಹಣ ಸಾಕಾಗುವುದಿಲ್ಲ ಎಂಬುದನ್ನು ಅರ್ಥ ಮಾಡಿಕೊಂಡರು. ಹಾಗಾಗಿ ಮತ್ತೆ 4 ಕೋಟಿ ರೂಪಾಯಿ ನೀಡುವುದಾಗಿ ಪವನ್​ ಕಲ್ಯಾಣ್​ ಘೋಷಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಪ್ರವಾಹಕ್ಕೆ ಸಿಲುಕಿದ 400 ಪಂಚಾಯತ್​ ಕ್ಷೇತ್ರಗಳಲ್ಲಿ ಪುನರ್​ವಸತಿ ಕಲ್ಪಿಸುವ ಸಲುವಾಗಿ ಪವನ್​ ಕಲ್ಯಾಣ್​ ನೀಡಿದ 4 ಕೋಟಿ ರೂಪಾಯಿ ಬಳಕೆ ಆಗಲಿದೆ. ‘ಪ್ರವಾಹದಿಂದ ಆಗಿರುವ ಹಾನಿ ಗಮನಿಸಿದರೆ 1 ಕೋಟಿ ರೂಪಾಯಿಯಿಂದ ಏನೂ ಸಾಧ್ಯವಾಗುವುದಿಲ್ಲ. ಹಾಗಾಗಿ ಮತ್ತೆ 4 ಕೋಟಿ ರೂಪಾಯಿ ನೀಡಲಿದ್ದೇನೆ’ ಎಂದು ಪವನ್​ ಕಲ್ಯಾಣ್​ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಕನ್ನಡ ಕಲಿಯುವ ಮನಸ್ಸಾಗಿದೆ’: ಕರುನಾಡಿಗೆ ಬಂದು ಆಸೆ ಹೇಳಿಕೊಂಡ ಪವನ್​ ಕಲ್ಯಾಣ್​

‘ನಮ್ಮ ಪಕ್ಕದ ತೆಲಂಗಾಣ ಕೂಡ ಪ್ರವಾಹದಲ್ಲಿ ಸಿಲುಕಿದೆ. ಹಾಗಾಗಿ ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದೇನೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ನಾನು ನೇರವಾಗಿ ಭೇಟಿ ಮಾಡಿ ಹಣ ನೀಡುತ್ತೇನೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಈ ಸಮಯದಲ್ಲಿ ಮಾನವೀಯತೆ ತೋರಿಸುತ್ತಿದ್ದಾರೆ’ ಎಂದು ಪವನ್​ ಕಲ್ಯಾಣ್​ ಹೇಳಿದ್ದಾರೆ. ಪ್ರವಾಹ ಪೀಡಿತ ಅನೇಕ ಪ್ರದೇಶಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್