AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ವಿಚಾರ ಬಂದಾಗ ಅನಿಖಾ ಸುರೇಂದ್ರನ್ ರಿಯಾಕ್ಷನ್ ನೋಡಿ

ಅನಿಖಾ ಸುರೇಂದ್ರನ್ ಅವರ ವಯಸ್ಸು, ಗೆಳೆಯ, ಮತ್ತು ಚಲನಚಿತ್ರ ವೃತ್ತಿಜೀವನದ ಬಗ್ಗೆ ಈ ಲೇಖನ ತಿಳಿಸುತ್ತದೆ. ಬಾಲ ಕಲಾವಿದೆಯಾಗಿ ಪ್ರಾರಂಭಿಸಿದ ಅವರು 'ವಿಶ್ವಾಸಂ' ಚಿತ್ರದ ಮೂಲಕ ಖ್ಯಾತಿ ಪಡೆದರು. ಅವರ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಅವರು ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದು, ಗೆಳೆಯನ ಬಗ್ಗೆ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಬಾಯ್​ಫ್ರೆಂಡ್ ವಿಚಾರ ಬಂದಾಗ ಅನಿಖಾ ಸುರೇಂದ್ರನ್ ರಿಯಾಕ್ಷನ್ ನೋಡಿ
ಅನಿಖಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 01, 2025 | 10:59 AM

Share

ಮಲಯಾಳಂ ಹಾಗೂ ತಮಿಳು ಚಿತ್ರರಂಗದಲ್ಲೇ ತಮ್ಮದೇ ಛಾಪು ಮೂಡಿಸಿದವರು ಅನಿಖಾ ಸುರೇಂದ್ರನ್. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಅವರಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಅವರ ಸಾಮಾಜಿಕ ಜಾಲತಾಣದಲ್ಲಿ ಹಿಂಬಾಲಕರ ಸಂಖ್ಯೆ ಕೂಡ ಹೆಚ್ಚಿದ್ದಾರೆ. ಅವರು ಈಗ ಬಾಯ್​​ಫ್ರೆಂಡ್ ವಿಚಾರವಾಗಿ ಮಾತನಾಡಿದ್ದಾರೆ. ಅವರಿಗೆ ಬಾಯ್​ಫ್ರೆಂಡ್ ಇದ್ದಾನಾ? ಅವರ ಮೊಬೈಲ್ ಸಂಖ್ಯೆ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಅನಿಖಾ ಸುರೇಂದ್ರನ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. 2019ರಲ್ಲಿ ರಿಲೀಸ್ ಆದ ತಮಿಳಿನ ‘ವಿಶ್ವಾಸಂ’ ಚಿತ್ರದಲ್ಲಿ ಅವರು ಅಜಿತ್ ಹಾಗೂ ನಯನತಾರಾ ಮಗಳಿನ ಪಾತ್ರ ಮಾಡಿ ಭೇಷ್ ಎನಿಸಿಕೊಂಡರು. ಈ ಚಿತ್ರ ಸೂಪರ್ ಡೂಪರ್ ಹಿಟ್ ಆಯಿತು. ಆ ಬಳಿಕ ಅವರನ್ನು ಹಿಡಿಯುವ ಮಾತೇ ಇರಲಿಲ್ಲ.

ಈಗ ಅನಿಖಾ ಅವರು ಹೀರೋಯಿನ್ ಆಗಿ ಕಾಣಿಸಿಕೊಳ್ಳುತ್ತಾ ಇದ್ದಾರೆ. ಅವರಿಗೆ ಇನ್ನೂ 20 ವರ್ಷ ವಯಸ್ಸು. ಅವರು ಒಳ್ಳೆಯ ಸಿನಿಮಾಗಳನ್ನು ನೀಡುತ್ತಾ ಇದ್ದಾರೆ. ಜೊತೆಗೆ ಡಿಗ್ರೀ ಕೂಡ ಪಡೆಯುತ್ತಾ ಇದ್ದಾರೆ.

‘ನನಗೆ 20 ವರ್ಷ’ ಎಂದು ಅನಿಖಾ ಹೇಳಿದ್ದಾರೆ. ಮನೆಯ ಅಡ್ರೆಸ್ ಹಾಗೂ ಮೊಬೈಲ್ ನಂಬರ್ ಬಗ್ಗೆ ಕೇಳಿದಾಗ ಶಾಕ್ ಆದರು ಅನಿಖಾ. ಅವರು ಇದನ್ನು ಹೇಳಲು ನಿರಾಕರಿಸಿದರು. ಬಾಯ್​​ಫ್ರೆಂಡ್ ಇದ್ದಾನಾ ಎನ್ನುವ ವಿಚಾರ ಬಂದಾಗ ಅನಿಖಾ ಕಡೆಯಿಂದ ಇಲ್ಲ ಎನ್ನುವ ಉತ್ತರ ಬಂದಿದೆ. ಈ ಮೂಲಕ ಅವರು ಎಲ್ಲಾ ವದಂತಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಕಾಲೇಜ್​ಗೆ ಹೋಗ್ತಾ ಇರೋದಕ್ಕೆ ಪ್ರೂಫ್ ಕೊಟ್ಟ ನಟಿ ಅನಿಖಾ

ಅನಿಖಾ ಅವರು ಸದ್ಯ ತಮಿಳು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಇಲ್ಲಿ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ‘ವಾಸುವಿನ್ ಗುರ್ಬಿಂಗಳ್’ ಚಿತ್ರದಲ್ಲಿ ಅವರು ನಟಿಸುತ್ತಾ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅನಿಖಾ ಆ್ಯಕ್ಟೀವ್ ಆಗಿದ್ದಾರೆ. ಹಲವು ರೀತಿಯ ಶೂಟ್​ಗಳನ್ನು ಮಾಡಿಸುತ್ತಾ ಅವರು ಗಮನ ಸೆಳೆಯುತ್ತಾ ಇದ್ದಾರೆ. ಅವರ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಮುಂದಿನ ದಿನಗಳಲ್ಲಿ ನಾಯಕಿ ಆಗಿ ಇನ್ನಷ್ಟು ಸಿನಿಮಾಗಳನ್ನು ಅವರು ಮಾಡುವ ಅವಕಾಶ ಇದೆ. ಈ ಅವಕಾಶಗಳನ್ನು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:57 am, Sat, 1 March 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?