AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್​ ಎನ್​ಟಿಆರ್​ ಎದುರು ವಿಲನ್​ ಆಗ್ತಾರಾ ಬಾಲಿವುಡ್​ ನಟ ಬಾಬಿ ಡಿಯೋಲ್​?

‘ಅನಿಮಲ್​’ ಸಿನಿಮಾದ ಯಶಸ್ಸಿನಿಂದ ಬಾಬಿ ಡಿಯೋಲ್​ ಅವರ ಇಮೇಜ್​ ಬದಲಾಯ್ತು. ನೆಗೆಟಿವ್​ ಪಾತ್ರ ಮಾಡಿ ಮಿಂಚಿದ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಟಾಲಿವುಡ್​ನಲ್ಲಿ ಅವರು ಬ್ಯಾಕ್ ಟು ಬ್ಯಾಕ್​ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ ಅಭಿನಯದ ಬಹುನಿರೀಕ್ಷಿತ ‘ದೇವರ: ಪಾರ್ಟ್​ 1’​ ಸಿನಿಮಾ ತಂಡಕ್ಕೆ ಬಾಬಿ ಡಿಯೋಲ್​ ಸೇರ್ಪಡೆ ಆಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಜೂನಿಯರ್​ ಎನ್​ಟಿಆರ್​ ಎದುರು ವಿಲನ್​ ಆಗ್ತಾರಾ ಬಾಲಿವುಡ್​ ನಟ ಬಾಬಿ ಡಿಯೋಲ್​?
ಬಾಬಿ ಡಿಯೋಲ್​, ಜೂನಿಯರ್​ ಎನ್​ಟಿಆರ್​
ಮದನ್​ ಕುಮಾರ್​
|

Updated on: Jul 25, 2024 | 9:37 PM

Share

ಟಾಲಿವುಡ್​ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ದೇವರ: ಪಾರ್ಟ್​ 1’ ಕೂಡ ಇದೆ. ಜೂನಿಯರ್​ ಎನ್​ಟಿಆರ್​ ನಟನೆಯ ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಎಕ್ಸೈಟಿಂಗ್​ ವಿಷಯ ಕೇಳಿಬಂದಿದೆ. ಈ ಚಿತ್ರದಲ್ಲಿ ಬಾಲಿವುಡ್​ ಕಲಾವಿದರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಬೇಕು ಎಂಬ ಕಾರಣಕ್ಕೆ ‘ದೇವರ: ಪಾರ್ಟ್​ 1’ ಚಿತ್ರತಂಡದವರು ಬಿ-ಟೌನ್ ಮಂದಿಗೆ ಮಣೆ ಹಾಕಿದಂತಿದೆ. ಸೈಫ್​ ಅಲಿ ಖಾನ್​, ಜಾನ್ವಿ ಕಪೂರ್​ ಬಳಿಕ ಈಗ ಬಾಬಿ ಡಿಯೋಲ್​ ಕೂಡ ಈ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಕೊರಟಾಲ ಶಿವ ಅವರು ‘ದೇವರ: ಪಾರ್ಟ್​ 1’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಐಎಂಡಿಬಿ ಪ್ರಕಟ ಮಾಡಿದ 2024ರ ಅತಿ ನಿರೀಕ್ಷಿತ ಭಾರತೀಯ ಸಿನಿಮಾಗಳ ಟಾಪ್​ 10 ಪಟ್ಟಿಯಲ್ಲಿ ‘ದೇವರ: ಪಾರ್ಟ್​ 1’ ಸಿನಿಮಾಗೆ ಮೂರನೇ ಸ್ಥಾನ ಸಿಕ್ಕಿದೆ. ಈಗ ಬಾಬಿ ಡಿಯೋಲ್​ ಕೂಡ ಈ ಸಿನಿಮಾದಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಕೇಳಿದ ಬಳಿಕ ಫ್ಯಾನ್ಸ್​ ನಿರೀಕ್ಷೆ ಹೆಚ್ಚಾಗಿದೆ.

ಎರಡು ಪಾರ್ಟ್​ಗಳಲ್ಲಿ ‘ದೇವರ’ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ನ ಕೊನೆಯಲ್ಲಿ ಬಾಬಿ ಡಿಯೋಲ್ ಅವರ ಪಾತ್ರ ಎಂಟ್ರಿ ನೀಡಲಿದೆ ಎಂಬ ಮಾತು ಕೇಳಿಬಂದಿದೆ. ಎರಡನೇ ಪಾರ್ಟ್​ನಲ್ಲಿ ಅವರ ಪಾತ್ರವೇ ಹೈಲೈಟ್​ ಆಗಲಿದೆ. ಮುಖ್ಯ ವಿಲನ್​ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಚಿತ್ರತಂಡದವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ನೀಡಬೇಕಿದೆ.

ಇದನ್ನೂ ಓದಿ: ಕಾಮಿಡಿ ಶೋ ವೇದಿಕೆಯಲ್ಲಿ ಕಣ್ಣೀರು ಹಾಕಿದ ‘ಅನಿಮಲ್​’ ನಟ ಬಾಬಿ ಡಿಯೋಲ್​

ಒಂದಷ್ಟು ವರ್ಷಗಳ ಕಾಲ ಬಾಬಿ ಡಿಯೋಲ್​ ಅವರ ವೃತ್ತಿ ಜೀವನ ಡಲ್​ ಆಗಿತ್ತು. ಆದರೆ ಕಳೆದ ವರ್ಷ ‘ಅನಿಮಲ್​’ ಸಿನಿಮಾ ಮೂಲಕ ಅವರು ಭರ್ಜರಿ ಕಮ್​ಬ್ಯಾಕ್​ ಮಾಡಿದರು. ಆ ಸಿನಿಮಾದಲ್ಲಿ ಕೂಡ ಅವರು ನೆಗೆಟಿವ್​ ಪಾತ್ರ ಮಾಡಿದ್ದರು. ಆ ಬಳಿಕ ಅಂಥ ಪಾತ್ರಗಳು ಅವರಿಗೆ ಹೇರಳವಾಗಿ ಸಿಗುತ್ತಿವೆ. ಅದರಲ್ಲೂ ಟಾಲಿವುಡ್​ನಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಪವನ್​ ಕಲ್ಯಾಣ್​ ನಟನೆಯ ‘ಹರಿ ಹರ ವೀರ ಮಲ್ಲು’ ಹಾಗೂ ಬಾಲಕೃಷ್ಣ ನಟನೆಯ 109ನೇ ಸಿನಿಮಾದಲ್ಲಿ ಕೂಡ ಬಾಬಿ ಡಿಯೋಲ್​ ಅವಕಾಶ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ