AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್​; ಮತ್ತಷ್ಟು ವೈಲೆಂಟ್ ಆಗಿರಲಿದೆ ‘ಅನಿಮಲ್ ಪಾರ್ಕ್​​’

‘ಅನಿಮಲ್’ ಚಿತ್ರದಲ್ಲಿ ರಣಬೀರ್ ಕಪೂರ್ ಪಾತ್ರ ಹೈಲೈಟ್ ಆಗಿತ್ತು. ‘ಅನಿಮಲ್ ಪಾರ್ಕ್​’ ಸಿನಿಮಾದಲ್ಲಿ ಹಲವು ಸ್ಟಾರ್​ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಮತ್ತಷ್ಟು ವೈಲೆನ್ಸ್ ಇರಲಿದೆ ಎಂದು ಹೇಳಲಾಗುತ್ತಿದೆ.

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್​; ಮತ್ತಷ್ಟು ವೈಲೆಂಟ್ ಆಗಿರಲಿದೆ ‘ಅನಿಮಲ್ ಪಾರ್ಕ್​​’
ರಣಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on:Dec 06, 2023 | 10:34 AM

Share

‘ಅನಿಮಲ್’ ಸಿನಿಮಾ (Animal Movie) ಸೂಪರ್ ಹಿಟ್ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ. ಇದು ಸಿನಿಮಾ ತಂಡದವರ ಖುಷಿ ಹೆಚ್ಚಿಸಿದೆ. ತೆಲುಗು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಬಾಲಿವುಡ್​ನಲ್ಲಿ ಎರಡನೇ ಗೆಲುವು ಕಂಡಿದ್ದಾರೆ. ಒಂದು ವರ್ಗದ ಜನರು ಸಿನಿಮಾ ಬಗ್ಗೆ ಅಪಸ್ವರ ತೆಗೆದರೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಈಗ ಚಿತ್ರದ ಸೀಕ್ವೆಲ್ ಬಗ್ಗೆ ಭರ್ಜರಿ ಚರ್ಚೆ ಆಗುತ್ತಿದೆ.

‘ಅನಿಮಲ್’ ಸಿನಿಮಾ ಐದು ದಿನಕ್ಕೆ 283 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನದಲ್ಲೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಸಾಕಷ್ಟು ವೈಲೆಂಟ್​ ಆಗಿದೆ ಎಂದು ಅನೇಕರು ಹೇಳಿದ್ದರು. ‘ಅನಿಮಲ್’ ಸಿನಿಮಾದಲ್ಲಿ ಈ ವೈಲೆನ್ಸ್ ಇನ್ನಷ್ಟು ಹೆಚ್ಚಿದೆ. ಸಿನಿಮಾ ಗೆಲ್ಲಲು ಇದೂ ಒಂದು ಕಾರಣ.

‘ಅನಿಮಲ್’ ಸಿನಿಮಾದಲ್ಲಿ ಮಿತಿ ಮೀರಿ ಬೋಲ್ಡ್ ದೃಶ್ಯಗಳನ್ನು ತೋರಿಸಲಾಗಿದೆ. ರಶ್ಮಿಕಾ ಹಾಗೂ ತೃಪ್ತಿ ದಿಮ್ರಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈಗ ‘ಅನಿಮಲ್’ ಸಿನಿಮಾಗೆ ಸೀಕ್ವೆಲ್ ಮಾಡಲು ಸಂದೀಪ್ ರೆಡ್ಡಿ ವಂಗ ರೆಡಿ ಆಗಿದ್ದಾರೆ ಎನ್ನಲಾಗುತ್ತಿದೆ. ಅವರು ‘ಅನಿಮಲ್ ಪಾರ್ಕ್’ ಮಾಡಲು ಉತ್ಸಾಹ ತೋರಿದ್ದಾರೆ.

‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಮಾತ್ರ ಹೈಲೈಟ್ ಆಗಿದ್ದಾರೆ. ‘ಅನಿಮಲ್ ಪಾರ್ಕ್​’ ಸಿನಿಮಾದಲ್ಲಿ ಹಲವು ಸ್ಟಾರ್​ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಮತ್ತಷ್ಟು ವೈಲೆನ್ಸ್ ಇರಲಿದೆ ಎಂದು ಹೇಳಲಾಗುತ್ತಿದೆ. ‘ಅನಿಮಲ್’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಸೀಕ್ವೆಲ್ ಬಗ್ಗೆಯೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸೋಮವಾರದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್​ನಲ್ಲಿ ಪಾಸ್ ಆದ ‘ಅನಿಮಲ್’; ಊಹೆಗೂ ಮೀರಿ ಕಲೆಕ್ಷನ್

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್ ಬಂದರೆ ಅದು ಮತ್ತಷ್ಟು ಡಾರ್ಕ್ ಹಾಗೂ ವೈಲೆಂಟ್ ಆಗಿರಲಿದೆಯಂತೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗಲಿದ್ದು, ಈ ಬಗ್ಗೆ ಸಂದೀಪ್ ರೆಡ್ಡಿ ವಂಗ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Wed, 6 December 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ