‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್​; ಮತ್ತಷ್ಟು ವೈಲೆಂಟ್ ಆಗಿರಲಿದೆ ‘ಅನಿಮಲ್ ಪಾರ್ಕ್​​’

‘ಅನಿಮಲ್’ ಚಿತ್ರದಲ್ಲಿ ರಣಬೀರ್ ಕಪೂರ್ ಪಾತ್ರ ಹೈಲೈಟ್ ಆಗಿತ್ತು. ‘ಅನಿಮಲ್ ಪಾರ್ಕ್​’ ಸಿನಿಮಾದಲ್ಲಿ ಹಲವು ಸ್ಟಾರ್​ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಮತ್ತಷ್ಟು ವೈಲೆನ್ಸ್ ಇರಲಿದೆ ಎಂದು ಹೇಳಲಾಗುತ್ತಿದೆ.

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್​; ಮತ್ತಷ್ಟು ವೈಲೆಂಟ್ ಆಗಿರಲಿದೆ ‘ಅನಿಮಲ್ ಪಾರ್ಕ್​​’
ರಣಬೀರ್ ಕಪೂರ್
Follow us
|

Updated on:Dec 06, 2023 | 10:34 AM

‘ಅನಿಮಲ್’ ಸಿನಿಮಾ (Animal Movie) ಸೂಪರ್ ಹಿಟ್ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಗಳಿಕೆ 300 ಕೋಟಿ ರೂಪಾಯಿ ಸಮೀಪಿಸಿದೆ. ಇದು ಸಿನಿಮಾ ತಂಡದವರ ಖುಷಿ ಹೆಚ್ಚಿಸಿದೆ. ತೆಲುಗು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಬಾಲಿವುಡ್​ನಲ್ಲಿ ಎರಡನೇ ಗೆಲುವು ಕಂಡಿದ್ದಾರೆ. ಒಂದು ವರ್ಗದ ಜನರು ಸಿನಿಮಾ ಬಗ್ಗೆ ಅಪಸ್ವರ ತೆಗೆದರೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಈಗ ಚಿತ್ರದ ಸೀಕ್ವೆಲ್ ಬಗ್ಗೆ ಭರ್ಜರಿ ಚರ್ಚೆ ಆಗುತ್ತಿದೆ.

‘ಅನಿಮಲ್’ ಸಿನಿಮಾ ಐದು ದಿನಕ್ಕೆ 283 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನದಲ್ಲೂ ಸಿನಿಮಾದ ಗಳಿಕೆ ತಗ್ಗುತ್ತಿಲ್ಲ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ‘ಅರ್ಜುನ್ ರೆಡ್ಡಿ’ ಸಿನಿಮಾದಲ್ಲಿ ಸಾಕಷ್ಟು ವೈಲೆಂಟ್​ ಆಗಿದೆ ಎಂದು ಅನೇಕರು ಹೇಳಿದ್ದರು. ‘ಅನಿಮಲ್’ ಸಿನಿಮಾದಲ್ಲಿ ಈ ವೈಲೆನ್ಸ್ ಇನ್ನಷ್ಟು ಹೆಚ್ಚಿದೆ. ಸಿನಿಮಾ ಗೆಲ್ಲಲು ಇದೂ ಒಂದು ಕಾರಣ.

‘ಅನಿಮಲ್’ ಸಿನಿಮಾದಲ್ಲಿ ಮಿತಿ ಮೀರಿ ಬೋಲ್ಡ್ ದೃಶ್ಯಗಳನ್ನು ತೋರಿಸಲಾಗಿದೆ. ರಶ್ಮಿಕಾ ಹಾಗೂ ತೃಪ್ತಿ ದಿಮ್ರಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈಗ ‘ಅನಿಮಲ್’ ಸಿನಿಮಾಗೆ ಸೀಕ್ವೆಲ್ ಮಾಡಲು ಸಂದೀಪ್ ರೆಡ್ಡಿ ವಂಗ ರೆಡಿ ಆಗಿದ್ದಾರೆ ಎನ್ನಲಾಗುತ್ತಿದೆ. ಅವರು ‘ಅನಿಮಲ್ ಪಾರ್ಕ್’ ಮಾಡಲು ಉತ್ಸಾಹ ತೋರಿದ್ದಾರೆ.

‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಮಾತ್ರ ಹೈಲೈಟ್ ಆಗಿದ್ದಾರೆ. ‘ಅನಿಮಲ್ ಪಾರ್ಕ್​’ ಸಿನಿಮಾದಲ್ಲಿ ಹಲವು ಸ್ಟಾರ್​ಗಳು ಇರಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾದಲ್ಲಿ ಮತ್ತಷ್ಟು ವೈಲೆನ್ಸ್ ಇರಲಿದೆ ಎಂದು ಹೇಳಲಾಗುತ್ತಿದೆ. ‘ಅನಿಮಲ್’ ಸಿನಿಮಾ ಕ್ಲೈಮ್ಯಾಕ್ಸ್​ನಲ್ಲಿ ಸೀಕ್ವೆಲ್ ಬಗ್ಗೆಯೂ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಸೋಮವಾರದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್​ನಲ್ಲಿ ಪಾಸ್ ಆದ ‘ಅನಿಮಲ್’; ಊಹೆಗೂ ಮೀರಿ ಕಲೆಕ್ಷನ್

‘ಅನಿಮಲ್’ ಚಿತ್ರಕ್ಕೆ ಸೀಕ್ವೆಲ್ ಬಂದರೆ ಅದು ಮತ್ತಷ್ಟು ಡಾರ್ಕ್ ಹಾಗೂ ವೈಲೆಂಟ್ ಆಗಿರಲಿದೆಯಂತೆ. ದೊಡ್ಡ ಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗಲಿದ್ದು, ಈ ಬಗ್ಗೆ ಸಂದೀಪ್ ರೆಡ್ಡಿ ವಂಗ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:34 am, Wed, 6 December 23

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ