AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?

ಭಾರತದ ಬಗ್ಗೆ ವಿದೇಶಿಗರಿಗೆ ತಪ್ಪು ಭಾವನೆ ಮೂಡೋದು ಬೇಡ ಅನ್ನೋದು ರಾಜಮೌಳಿ ಉದ್ದೇಶವಾಗಿತ್ತು. ಆದರೆ, ಪ್ರಾಣಿಗಳ ಹಕ್ಕುಗಳ ರಕ್ಷಣಾ ಕಾರ್ಯಕರ್ತರು ರಾಜಮೌಳಿ ವಿರುದ್ಧ ಸಿಡಿದೆದ್ದಿದ್ದಾರೆ.

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?
ರಾಜಮೌಳಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 04, 2021 | 7:18 PM

Share

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಸದಾ ವಿವಾದಗಳಿಂದ ದೂರವೇ ಇರುತ್ತಾರೆ. ಆದರೆ, ಈಗ ಅವರು ಮಾಡಿದ ಟ್ವೀಟ್​ ವಿರುದ್ಧ ಶ್ವಾನ ಪ್ರಿಯರು ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ರಾಜಮೌಳಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟಕ್ಕೂ ರಾಜಮೌಳಿ ವಿರುದ್ಧ ಅಭಿಮಾನಿಗಳು ಸಿಟ್ಟಾಗೋಕೆ ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ರಾತ್ರಿ 1 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. ಆರ್​ಟಿಪಿಸಿಆರ್​ ಟೆಸ್ಟ್​ ಸಲುವಾಗಿ ಫಾರ್ಮ್​ ತುಂಬಲು ನೀಡಿದರು. ಎಲ್ಲ ಪ್ರಯಾಣಿಕರು ನೆಲದ ಮೇಲೆ ಕುಳಿತುಕೊಂಡು, ಗೋಡೆಗೆ ಒರಗಿಸಿಕೊಂಡು ಫಾರ್ಮ್​ ತುಂಬುತ್ತಿದ್ದರು. ಅದು ಸರಿ ಎನಿಸುವುದಿಲ್ಲ. ಕನಿಷ್ಟ ಟೇಬಲ್​ ಒದಗಿಸುವುದು ಸರಳ ಸೇವೆ. ವಿಮಾನ ನಿಲ್ದಾಣದ ಒಳಗೆ ಈ ಪರಿಸ್ಥಿತಿಯಾದರೆ ಹೊರಗೆ ಬೇರೆಯದೇ ವಾತಾವರಣ ಇದೆ. ವಿಮಾನ ನಿಲ್ದಾಣದಿಂದ ಹೊರಗೆ ಬರುವ ಗೇಟ್​ನಲ್ಲಿ ಅನೇಕ ಬೀದಿ ನಾಯಿಗಳು ಕಾಣಿಸಿಕೊಳ್ಳುತ್ತಿವೆ. ವಿದೇಶದಿಂದ ಬರುವ ಅತಿಥಿಗಳು ವಿಮಾನ ನಿಲ್ದಾಣದಲ್ಲೇ ಇಂಥ ವಾತಾವರಣವನ್ನು ನೋಡಿದರೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ.’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದರು.

ಭಾರತದ ಬಗ್ಗೆ ವಿದೇಶಿಗರಿಗೆ ತಪ್ಪು ಭಾವನೆ ಮೂಡೋದು ಬೇಡ ಅನ್ನೋದು ರಾಜಮೌಳಿ ಉದ್ದೇಶವಾಗಿತ್ತು. ಆದರೆ, ಪ್ರಾಣಿಗಳ ಹಕ್ಕುಗಳ ರಕ್ಷಣಾ ಕಾರ್ಯಕರ್ತರು ರಾಜಮೌಳಿ ವಿರುದ್ಧ ಸಿಡಿದೆದ್ದಿದ್ದಾರೆ. ರಾಜಮೌಳಿ ಪ್ರಾಣಿಗಳ ಬಗ್ಗೆ ಆಡಿದ ಈ ಮಾತುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

‘ಪ್ರಾಣಿಗಳನ್ನು ಹೇಗೆ ನೋಡಿಕೊಳ್ಳುತ್ತೇವೆ ಎಂಬುದರ ಆಧಾರದಮೇಲೆ ದೇಶದ ನೈತಿಕ ಅಭಿವೃದ್ಧಿಯನ್ನು ನಿರ್ಧರಿಸಬೇಕು ಎಂದು ಗಾಂಧಿ ಅವರು ಹೇಳಿದ್ದರು. ಈ ದೇಶವನ್ನು ವಿದೇಶಿಯರಿಗೆ ಪರಿಚಯಿಸುವ ಮೊದಲು ಪ್ರತಿಯೊಬ್ಬರೂ ಈ ಒಂದು ವಿಚಾರ ನೆನಪಿಕೊಟ್ಟಳ್ಳಬೇಕು. ಭಾರತದಲ್ಲಿ ಹಲವಾರು ವಿಷಯಗಳನ್ನು ಬದಲಾಯಿಸಬೇಕಾಗಿದೆ. ಬೀದಿ ನಾಯಿಗಳು ಕಾಣುತ್ತವೆ ಎಂಬುದು ಇಲ್ಲಿ ಸಮಸ್ಯೆಯಲ್ಲ. ರಾಜಮೌಳಿಯಂತಹ ಪ್ರಖ್ಯಾತ ವ್ಯಕ್ತಿಗಳು ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಬೇಕು’ ಎಂದು ಪ್ರಾಣಿ ಹಕ್ಕುಗಳ ರಕ್ಷಣಾ ಸಂಘದ ಅಧ್ಯಕ್ಷ ಸುರೇಶ್​ ಎಂಬುವವರು ಹೇಳಿದ್ದಾರೆ.

ಇದನ್ನೂ ಓದಿ: ‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ