AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?

ಭಾರತದ ಬಗ್ಗೆ ವಿದೇಶಿಗರಿಗೆ ತಪ್ಪು ಭಾವನೆ ಮೂಡೋದು ಬೇಡ ಅನ್ನೋದು ರಾಜಮೌಳಿ ಉದ್ದೇಶವಾಗಿತ್ತು. ಆದರೆ, ಪ್ರಾಣಿಗಳ ಹಕ್ಕುಗಳ ರಕ್ಷಣಾ ಕಾರ್ಯಕರ್ತರು ರಾಜಮೌಳಿ ವಿರುದ್ಧ ಸಿಡಿದೆದ್ದಿದ್ದಾರೆ.

ರಾಜಮೌಳಿ ವಿರುದ್ಧ ಸಿಡಿದೆದ್ದ ಶ್ವಾನಪ್ರಿಯರು; ಅಸಲಿಗೆ ಇಲ್ಲಿ ತಪ್ಪು ಯಾರದ್ದು?
ರಾಜಮೌಳಿ
TV9 Web
| Edited By: |

Updated on: Jul 04, 2021 | 7:18 PM

Share

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಸದಾ ವಿವಾದಗಳಿಂದ ದೂರವೇ ಇರುತ್ತಾರೆ. ಆದರೆ, ಈಗ ಅವರು ಮಾಡಿದ ಟ್ವೀಟ್​ ವಿರುದ್ಧ ಶ್ವಾನ ಪ್ರಿಯರು ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ರಾಜಮೌಳಿ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟಕ್ಕೂ ರಾಜಮೌಳಿ ವಿರುದ್ಧ ಅಭಿಮಾನಿಗಳು ಸಿಟ್ಟಾಗೋಕೆ ಕಾರಣ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ರಾತ್ರಿ 1 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. ಆರ್​ಟಿಪಿಸಿಆರ್​ ಟೆಸ್ಟ್​ ಸಲುವಾಗಿ ಫಾರ್ಮ್​ ತುಂಬಲು ನೀಡಿದರು. ಎಲ್ಲ ಪ್ರಯಾಣಿಕರು ನೆಲದ ಮೇಲೆ ಕುಳಿತುಕೊಂಡು, ಗೋಡೆಗೆ ಒರಗಿಸಿಕೊಂಡು ಫಾರ್ಮ್​ ತುಂಬುತ್ತಿದ್ದರು. ಅದು ಸರಿ ಎನಿಸುವುದಿಲ್ಲ. ಕನಿಷ್ಟ ಟೇಬಲ್​ ಒದಗಿಸುವುದು ಸರಳ ಸೇವೆ. ವಿಮಾನ ನಿಲ್ದಾಣದ ಒಳಗೆ ಈ ಪರಿಸ್ಥಿತಿಯಾದರೆ ಹೊರಗೆ ಬೇರೆಯದೇ ವಾತಾವರಣ ಇದೆ. ವಿಮಾನ ನಿಲ್ದಾಣದಿಂದ ಹೊರಗೆ ಬರುವ ಗೇಟ್​ನಲ್ಲಿ ಅನೇಕ ಬೀದಿ ನಾಯಿಗಳು ಕಾಣಿಸಿಕೊಳ್ಳುತ್ತಿವೆ. ವಿದೇಶದಿಂದ ಬರುವ ಅತಿಥಿಗಳು ವಿಮಾನ ನಿಲ್ದಾಣದಲ್ಲೇ ಇಂಥ ವಾತಾವರಣವನ್ನು ನೋಡಿದರೆ ಭಾರತದ ಬಗ್ಗೆ ಒಳ್ಳೆಯ ಭಾವನೆ ಮೂಡುವುದಿಲ್ಲ.’ ಎಂದು ರಾಜಮೌಳಿ ಟ್ವೀಟ್​ ಮಾಡಿದ್ದರು.

ಭಾರತದ ಬಗ್ಗೆ ವಿದೇಶಿಗರಿಗೆ ತಪ್ಪು ಭಾವನೆ ಮೂಡೋದು ಬೇಡ ಅನ್ನೋದು ರಾಜಮೌಳಿ ಉದ್ದೇಶವಾಗಿತ್ತು. ಆದರೆ, ಪ್ರಾಣಿಗಳ ಹಕ್ಕುಗಳ ರಕ್ಷಣಾ ಕಾರ್ಯಕರ್ತರು ರಾಜಮೌಳಿ ವಿರುದ್ಧ ಸಿಡಿದೆದ್ದಿದ್ದಾರೆ. ರಾಜಮೌಳಿ ಪ್ರಾಣಿಗಳ ಬಗ್ಗೆ ಆಡಿದ ಈ ಮಾತುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

‘ಪ್ರಾಣಿಗಳನ್ನು ಹೇಗೆ ನೋಡಿಕೊಳ್ಳುತ್ತೇವೆ ಎಂಬುದರ ಆಧಾರದಮೇಲೆ ದೇಶದ ನೈತಿಕ ಅಭಿವೃದ್ಧಿಯನ್ನು ನಿರ್ಧರಿಸಬೇಕು ಎಂದು ಗಾಂಧಿ ಅವರು ಹೇಳಿದ್ದರು. ಈ ದೇಶವನ್ನು ವಿದೇಶಿಯರಿಗೆ ಪರಿಚಯಿಸುವ ಮೊದಲು ಪ್ರತಿಯೊಬ್ಬರೂ ಈ ಒಂದು ವಿಚಾರ ನೆನಪಿಕೊಟ್ಟಳ್ಳಬೇಕು. ಭಾರತದಲ್ಲಿ ಹಲವಾರು ವಿಷಯಗಳನ್ನು ಬದಲಾಯಿಸಬೇಕಾಗಿದೆ. ಬೀದಿ ನಾಯಿಗಳು ಕಾಣುತ್ತವೆ ಎಂಬುದು ಇಲ್ಲಿ ಸಮಸ್ಯೆಯಲ್ಲ. ರಾಜಮೌಳಿಯಂತಹ ಪ್ರಖ್ಯಾತ ವ್ಯಕ್ತಿಗಳು ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವ ಮೊದಲು ಯೋಚಿಸಬೇಕು’ ಎಂದು ಪ್ರಾಣಿ ಹಕ್ಕುಗಳ ರಕ್ಷಣಾ ಸಂಘದ ಅಧ್ಯಕ್ಷ ಸುರೇಶ್​ ಎಂಬುವವರು ಹೇಳಿದ್ದಾರೆ.

ಇದನ್ನೂ ಓದಿ: ‘ಅವರನ್ನು ನೆಲದಲ್ಲಿ ಕೂರಿಸಿದ್ರು, ಬೀದಿ ನಾಯಿ ತೋರಿಸಿದ್ರು’; ನಿರ್ದೇಶಕ ರಾಜಮೌಳಿ ತೀವ್ರ ಬೇಸರ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ