ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​

ದಯವಿಟ್ಟು ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬೇಡಿ. ಹೊರ ಬರುವ ಪರಿಸ್ಥಿತಿ ಬಂದರೆ ಮಾಸ್ಕ್​ ಧರಿಸಿ. ಸ್ಯಾನಿಟೈಸರ್​ ಬಳಕೆ ಮಾಡಿ ಎಂದು ಅನಿರುದ್ಧ್​ ಮನವಿ ಮಾಡಿದ್ದಾರೆ.

ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​
ನಟ ಅನಿರುದ್ಧ
Follow us
|

Updated on:Apr 24, 2021 | 7:38 PM

ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ನಿನ್ನೆಯಷ್ಟೇ ಕಿರುತೆರೆ ನಟ ಪವನ್​ ಕುಮಾರ್​ ಭಾವ ಹಾಗೂ ಭಾವನ ತಂದೆಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದರು. ಈಗ ನಟ ಅನಿರುದ್ಧ ಆಪ್ತರೊಬ್ಬರು ಕೊವಿಡ್​ಗೆ ಬಲಿಯಾಗಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರ ಹಾಕಿದ್ದಾರೆ.

ಕೊವಿಡ್​ ಸೋಂಕಿನಿಂದ ನನ್ನ ಆಪ್ತರೊಬ್ಬರು ತೀರಿ ಹೋದರು. ಅವರು ತೀರಿ ಹೋಗುವುದಕ್ಕೂ ಮೊದಲು ಆಸ್ಪತ್ರೆಯಲ್ಲಿ ಅಡ್ಮಿಟ್​ ಮಾಡಬೇಕು ಎಂದು ಪ್ರಯತ್ನ ನಡೆಸಿದೆವು. ಆದರೆ, ಆಸ್ಪತ್ರೆಗಳೆಲ್ಲ ಫುಲ್​ ಆಗಿವೆ. ಬೆಡ್​ಗಳು ಸಿಗುತ್ತಿಲ್ಲ. ಬೆಡ್​ ಸಿಕ್ಕರೂ ಐಸಿಯು ಸಿಗುತ್ತಿಲ್ಲ. ಎಲ್ಲವೂ ವ್ಯವಸ್ಥೆ ಆಯಿತು ಎಂದಿಟ್ಟುಕೊಳ್ಳಿ, ಇಂಜೆಕ್ಷನ್​ ದೊರೆಯುವುದಿಲ್ಲ. ಇವೆಲ್ಲ ಸಿಗಬೇಕು ಎಂದರೆ ತುಂಬಾನೇ ಪ್ರಭಾವ ಬೀರಬೇಕು. ಇಷ್ಟಾದರೂ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ ಎಂದು ಅನಿರುದ್ಧ ಬೇಸರ ಹೊರಹಾಕಿದ್ದಾರೆ.

ನನ್ನ ಆಪ್ತನ ಶವವನ್ನು ಬನಶಂಕರಿ ಸ್ಮಶಾನಕ್ಕೆ ತೆಗೆದುಕೊಂಡು ಹೋದೆವು. ಆದರೆ, 40 ಆ್ಯಂಬುಲೆನ್ಸ್​ಗಳು ಸಾಲುಗಟ್ಟಿ ನಿಂತಿದ್ದವು. ನಂತರ ಕೆಂಗೇರಿಗೆ ಹೋದೆವು. ಅಲ್ಲಿ 17ನೇ ನಂಬರ್​ ಸಿಕ್ತು. ಈ ರೀತಿಯ ಕೆಟ್ಟ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅನಿರುದ್ಧ್​ ಬೇಸರ ಹೊರ ಹಾಕಿದ್ದಾರೆ.

ದಯವಿಟ್ಟು ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬೇಡಿ. ಹೊರ ಬರುವ ಪರಿಸ್ಥಿತಿ ಬಂದರೆ ಮಾಸ್ಕ್​ ಧರಿಸಿ. ಸ್ಯಾನಿಟೈಸರ್​ ಬಳಕೆ ಮಾಡಿ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ ಎಂದು ಅನಿರುದ್ಧ್​​ ಮನವಿ ಮಾಡಿದ್ದಾರೆ.

ಗಟ್ಟಿಮೇಳ ಧಾರಾವಾಹಿ ನಟ ಪವನ್ ಕುಮಾರ್ ಅವರು ಭಾವ ಮತ್ತು ಭಾವನ ತಂದೆಯನ್ನು ಕೊರೊನಾದಿಂದ ಕಳೆದುಕೊಂಡಿದ್ದಾರೆ. ಆ ನೋವಿನಲ್ಲೇ ಒಂದು ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಛೀಮಾರಿ ಹಾಕಿದ್ದರು.

ಇದನ್ನೂ ಓದಿ: ಕೊರೊನಾದಿಂದ ತನ್ನವರನ್ನು ಕಳೆದುಕೊಂಡ ಯುವ ನಟ; ವಿಡಿಯೋ ನೋಡಿ ಸಿದ್ದರಾಮಯ್ಯ ಹೇಳಿದ್ದೇನು?

ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ನಿರ್ಧಾರ: ಆಕ್ಸಿಜನ್​ ಸರಬರಾಜು, ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತ

Published On - 4:51 pm, Sat, 24 April 21

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ