AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​

ದಯವಿಟ್ಟು ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬೇಡಿ. ಹೊರ ಬರುವ ಪರಿಸ್ಥಿತಿ ಬಂದರೆ ಮಾಸ್ಕ್​ ಧರಿಸಿ. ಸ್ಯಾನಿಟೈಸರ್​ ಬಳಕೆ ಮಾಡಿ ಎಂದು ಅನಿರುದ್ಧ್​ ಮನವಿ ಮಾಡಿದ್ದಾರೆ.

ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​
ನಟ ಅನಿರುದ್ಧ
ರಾಜೇಶ್ ದುಗ್ಗುಮನೆ
|

Updated on:Apr 24, 2021 | 7:38 PM

Share

ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ನಿನ್ನೆಯಷ್ಟೇ ಕಿರುತೆರೆ ನಟ ಪವನ್​ ಕುಮಾರ್​ ಭಾವ ಹಾಗೂ ಭಾವನ ತಂದೆಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದರು. ಈಗ ನಟ ಅನಿರುದ್ಧ ಆಪ್ತರೊಬ್ಬರು ಕೊವಿಡ್​ಗೆ ಬಲಿಯಾಗಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರ ಹಾಕಿದ್ದಾರೆ.

ಕೊವಿಡ್​ ಸೋಂಕಿನಿಂದ ನನ್ನ ಆಪ್ತರೊಬ್ಬರು ತೀರಿ ಹೋದರು. ಅವರು ತೀರಿ ಹೋಗುವುದಕ್ಕೂ ಮೊದಲು ಆಸ್ಪತ್ರೆಯಲ್ಲಿ ಅಡ್ಮಿಟ್​ ಮಾಡಬೇಕು ಎಂದು ಪ್ರಯತ್ನ ನಡೆಸಿದೆವು. ಆದರೆ, ಆಸ್ಪತ್ರೆಗಳೆಲ್ಲ ಫುಲ್​ ಆಗಿವೆ. ಬೆಡ್​ಗಳು ಸಿಗುತ್ತಿಲ್ಲ. ಬೆಡ್​ ಸಿಕ್ಕರೂ ಐಸಿಯು ಸಿಗುತ್ತಿಲ್ಲ. ಎಲ್ಲವೂ ವ್ಯವಸ್ಥೆ ಆಯಿತು ಎಂದಿಟ್ಟುಕೊಳ್ಳಿ, ಇಂಜೆಕ್ಷನ್​ ದೊರೆಯುವುದಿಲ್ಲ. ಇವೆಲ್ಲ ಸಿಗಬೇಕು ಎಂದರೆ ತುಂಬಾನೇ ಪ್ರಭಾವ ಬೀರಬೇಕು. ಇಷ್ಟಾದರೂ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ ಎಂದು ಅನಿರುದ್ಧ ಬೇಸರ ಹೊರಹಾಕಿದ್ದಾರೆ.

ನನ್ನ ಆಪ್ತನ ಶವವನ್ನು ಬನಶಂಕರಿ ಸ್ಮಶಾನಕ್ಕೆ ತೆಗೆದುಕೊಂಡು ಹೋದೆವು. ಆದರೆ, 40 ಆ್ಯಂಬುಲೆನ್ಸ್​ಗಳು ಸಾಲುಗಟ್ಟಿ ನಿಂತಿದ್ದವು. ನಂತರ ಕೆಂಗೇರಿಗೆ ಹೋದೆವು. ಅಲ್ಲಿ 17ನೇ ನಂಬರ್​ ಸಿಕ್ತು. ಈ ರೀತಿಯ ಕೆಟ್ಟ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅನಿರುದ್ಧ್​ ಬೇಸರ ಹೊರ ಹಾಕಿದ್ದಾರೆ.

ದಯವಿಟ್ಟು ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬೇಡಿ. ಹೊರ ಬರುವ ಪರಿಸ್ಥಿತಿ ಬಂದರೆ ಮಾಸ್ಕ್​ ಧರಿಸಿ. ಸ್ಯಾನಿಟೈಸರ್​ ಬಳಕೆ ಮಾಡಿ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ ಎಂದು ಅನಿರುದ್ಧ್​​ ಮನವಿ ಮಾಡಿದ್ದಾರೆ.

ಗಟ್ಟಿಮೇಳ ಧಾರಾವಾಹಿ ನಟ ಪವನ್ ಕುಮಾರ್ ಅವರು ಭಾವ ಮತ್ತು ಭಾವನ ತಂದೆಯನ್ನು ಕೊರೊನಾದಿಂದ ಕಳೆದುಕೊಂಡಿದ್ದಾರೆ. ಆ ನೋವಿನಲ್ಲೇ ಒಂದು ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಛೀಮಾರಿ ಹಾಕಿದ್ದರು.

ಇದನ್ನೂ ಓದಿ: ಕೊರೊನಾದಿಂದ ತನ್ನವರನ್ನು ಕಳೆದುಕೊಂಡ ಯುವ ನಟ; ವಿಡಿಯೋ ನೋಡಿ ಸಿದ್ದರಾಮಯ್ಯ ಹೇಳಿದ್ದೇನು?

ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ನಿರ್ಧಾರ: ಆಕ್ಸಿಜನ್​ ಸರಬರಾಜು, ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತ

Published On - 4:51 pm, Sat, 24 April 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ