AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​

ದಯವಿಟ್ಟು ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬೇಡಿ. ಹೊರ ಬರುವ ಪರಿಸ್ಥಿತಿ ಬಂದರೆ ಮಾಸ್ಕ್​ ಧರಿಸಿ. ಸ್ಯಾನಿಟೈಸರ್​ ಬಳಕೆ ಮಾಡಿ ಎಂದು ಅನಿರುದ್ಧ್​ ಮನವಿ ಮಾಡಿದ್ದಾರೆ.

ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​
ನಟ ಅನಿರುದ್ಧ
ರಾಜೇಶ್ ದುಗ್ಗುಮನೆ
|

Updated on:Apr 24, 2021 | 7:38 PM

Share

ಕೊರೊನಾ ವೈರಸ್​ ಎರಡನೇ ಅಲೆ ಸಾಕಷ್ಟು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಕಡೆ. ನಿನ್ನೆಯಷ್ಟೇ ಕಿರುತೆರೆ ನಟ ಪವನ್​ ಕುಮಾರ್​ ಭಾವ ಹಾಗೂ ಭಾವನ ತಂದೆಯನ್ನು ಕಳೆದುಕೊಂಡು ಕಣ್ಣೀರಿಟ್ಟಿದ್ದರು. ಈಗ ನಟ ಅನಿರುದ್ಧ ಆಪ್ತರೊಬ್ಬರು ಕೊವಿಡ್​ಗೆ ಬಲಿಯಾಗಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರ ಹಾಕಿದ್ದಾರೆ.

ಕೊವಿಡ್​ ಸೋಂಕಿನಿಂದ ನನ್ನ ಆಪ್ತರೊಬ್ಬರು ತೀರಿ ಹೋದರು. ಅವರು ತೀರಿ ಹೋಗುವುದಕ್ಕೂ ಮೊದಲು ಆಸ್ಪತ್ರೆಯಲ್ಲಿ ಅಡ್ಮಿಟ್​ ಮಾಡಬೇಕು ಎಂದು ಪ್ರಯತ್ನ ನಡೆಸಿದೆವು. ಆದರೆ, ಆಸ್ಪತ್ರೆಗಳೆಲ್ಲ ಫುಲ್​ ಆಗಿವೆ. ಬೆಡ್​ಗಳು ಸಿಗುತ್ತಿಲ್ಲ. ಬೆಡ್​ ಸಿಕ್ಕರೂ ಐಸಿಯು ಸಿಗುತ್ತಿಲ್ಲ. ಎಲ್ಲವೂ ವ್ಯವಸ್ಥೆ ಆಯಿತು ಎಂದಿಟ್ಟುಕೊಳ್ಳಿ, ಇಂಜೆಕ್ಷನ್​ ದೊರೆಯುವುದಿಲ್ಲ. ಇವೆಲ್ಲ ಸಿಗಬೇಕು ಎಂದರೆ ತುಂಬಾನೇ ಪ್ರಭಾವ ಬೀರಬೇಕು. ಇಷ್ಟಾದರೂ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಿಲ್ಲ ಎಂದು ಅನಿರುದ್ಧ ಬೇಸರ ಹೊರಹಾಕಿದ್ದಾರೆ.

ನನ್ನ ಆಪ್ತನ ಶವವನ್ನು ಬನಶಂಕರಿ ಸ್ಮಶಾನಕ್ಕೆ ತೆಗೆದುಕೊಂಡು ಹೋದೆವು. ಆದರೆ, 40 ಆ್ಯಂಬುಲೆನ್ಸ್​ಗಳು ಸಾಲುಗಟ್ಟಿ ನಿಂತಿದ್ದವು. ನಂತರ ಕೆಂಗೇರಿಗೆ ಹೋದೆವು. ಅಲ್ಲಿ 17ನೇ ನಂಬರ್​ ಸಿಕ್ತು. ಈ ರೀತಿಯ ಕೆಟ್ಟ ಪರಿಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅನಿರುದ್ಧ್​ ಬೇಸರ ಹೊರ ಹಾಕಿದ್ದಾರೆ.

ದಯವಿಟ್ಟು ಯಾರೂ ಅನಾವಶ್ಯಕವಾಗಿ ಮನೆಯಿಂದ ಹೊರ ಬರಬೇಡಿ. ಹೊರ ಬರುವ ಪರಿಸ್ಥಿತಿ ಬಂದರೆ ಮಾಸ್ಕ್​ ಧರಿಸಿ. ಸ್ಯಾನಿಟೈಸರ್​ ಬಳಕೆ ಮಾಡಿ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಿ ಎಂದು ಅನಿರುದ್ಧ್​​ ಮನವಿ ಮಾಡಿದ್ದಾರೆ.

ಗಟ್ಟಿಮೇಳ ಧಾರಾವಾಹಿ ನಟ ಪವನ್ ಕುಮಾರ್ ಅವರು ಭಾವ ಮತ್ತು ಭಾವನ ತಂದೆಯನ್ನು ಕೊರೊನಾದಿಂದ ಕಳೆದುಕೊಂಡಿದ್ದಾರೆ. ಆ ನೋವಿನಲ್ಲೇ ಒಂದು ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಛೀಮಾರಿ ಹಾಕಿದ್ದರು.

ಇದನ್ನೂ ಓದಿ: ಕೊರೊನಾದಿಂದ ತನ್ನವರನ್ನು ಕಳೆದುಕೊಂಡ ಯುವ ನಟ; ವಿಡಿಯೋ ನೋಡಿ ಸಿದ್ದರಾಮಯ್ಯ ಹೇಳಿದ್ದೇನು?

ಕೊರೊನಾ ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ನಿರ್ಧಾರ: ಆಕ್ಸಿಜನ್​ ಸರಬರಾಜು, ವೈದ್ಯಕೀಯ ಉಪಕರಣಗಳ ಮೇಲೆ ಸುಂಕ ಕಡಿತ

Published On - 4:51 pm, Sat, 24 April 21

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್