AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ

Anirudh Dave: ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ
ಅನಿರುದ್ಧ್​ ದವೆ
ರಾಜೇಶ್ ದುಗ್ಗುಮನೆ
| Edited By: |

Updated on:Jun 07, 2021 | 4:36 PM

Share

ಕೊವಿಡ್​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ ಕಳೆದ 36 ದಿನಗಳಿಂದ ಕೊವಿಡ್​ ವಿರುದ್ಧ ಹೋರಾಡುತ್ತಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​ನಲ್ಲಿ ತಿಳಿಸಿದ್ದು, ಈಗ ತಮ್ಮ ಆರೋಗ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿಸಿದ್ದಾರೆ.

ಅನಿರುದ್ಧ್​ ದವೆ ಅವರಿಗೆ 36 ದಿನಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಐಸಿಯುನಿಂದ ಹೊರ ಬಂದಿದ್ದಾರೆ. ಅಲ್ಲದೆ, ಅಭಿಮಾನಿಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಅನಿರುದ್ಧ್​​ ಹಾಕಿರುವ ಫೋಟೋದಲ್ಲಿ ಆಕ್ಸಿಜನ್​ ಮಾಸ್ಕ್​ ಹಾಕಿರುವುದು ಕಂಡು ಬಂದಿದೆ. ಅವರಿಗೆ ಕೊವಿಡ್ ಜತೆಗೆ ಶ್ವಾಸಕೋಶದ ಇನ್​ಫೆಕ್ಷನ್​ ಆಗಿತ್ತಂತೆ. ಈಗ ಎಲ್ಲವೂ ನಿಧಾನ ಗತಿಯಲ್ಲಿ ಕಡಿಮೆ ಆಗುತ್ತಿದೆ. ಹೆಚ್ಚು ಮಾತನಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಇನ್ನು, ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಪತ್ನಿ ಸುರಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಸುರಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

Published On - 4:35 pm, Mon, 7 June 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ