AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ

Anirudh Dave: ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ
ಅನಿರುದ್ಧ್​ ದವೆ
ರಾಜೇಶ್ ದುಗ್ಗುಮನೆ
| Edited By: |

Updated on:Jun 07, 2021 | 4:36 PM

Share

ಕೊವಿಡ್​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ ಕಳೆದ 36 ದಿನಗಳಿಂದ ಕೊವಿಡ್​ ವಿರುದ್ಧ ಹೋರಾಡುತ್ತಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​ನಲ್ಲಿ ತಿಳಿಸಿದ್ದು, ಈಗ ತಮ್ಮ ಆರೋಗ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿಸಿದ್ದಾರೆ.

ಅನಿರುದ್ಧ್​ ದವೆ ಅವರಿಗೆ 36 ದಿನಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಐಸಿಯುನಿಂದ ಹೊರ ಬಂದಿದ್ದಾರೆ. ಅಲ್ಲದೆ, ಅಭಿಮಾನಿಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಅನಿರುದ್ಧ್​​ ಹಾಕಿರುವ ಫೋಟೋದಲ್ಲಿ ಆಕ್ಸಿಜನ್​ ಮಾಸ್ಕ್​ ಹಾಕಿರುವುದು ಕಂಡು ಬಂದಿದೆ. ಅವರಿಗೆ ಕೊವಿಡ್ ಜತೆಗೆ ಶ್ವಾಸಕೋಶದ ಇನ್​ಫೆಕ್ಷನ್​ ಆಗಿತ್ತಂತೆ. ಈಗ ಎಲ್ಲವೂ ನಿಧಾನ ಗತಿಯಲ್ಲಿ ಕಡಿಮೆ ಆಗುತ್ತಿದೆ. ಹೆಚ್ಚು ಮಾತನಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಇನ್ನು, ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಪತ್ನಿ ಸುರಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಸುರಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

Published On - 4:35 pm, Mon, 7 June 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ