AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ

Anirudh Dave: ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ
ಅನಿರುದ್ಧ್​ ದವೆ
ರಾಜೇಶ್ ದುಗ್ಗುಮನೆ
| Edited By: |

Updated on:Jun 07, 2021 | 4:36 PM

Share

ಕೊವಿಡ್​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ ಕಳೆದ 36 ದಿನಗಳಿಂದ ಕೊವಿಡ್​ ವಿರುದ್ಧ ಹೋರಾಡುತ್ತಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​ನಲ್ಲಿ ತಿಳಿಸಿದ್ದು, ಈಗ ತಮ್ಮ ಆರೋಗ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿಸಿದ್ದಾರೆ.

ಅನಿರುದ್ಧ್​ ದವೆ ಅವರಿಗೆ 36 ದಿನಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಐಸಿಯುನಿಂದ ಹೊರ ಬಂದಿದ್ದಾರೆ. ಅಲ್ಲದೆ, ಅಭಿಮಾನಿಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಅನಿರುದ್ಧ್​​ ಹಾಕಿರುವ ಫೋಟೋದಲ್ಲಿ ಆಕ್ಸಿಜನ್​ ಮಾಸ್ಕ್​ ಹಾಕಿರುವುದು ಕಂಡು ಬಂದಿದೆ. ಅವರಿಗೆ ಕೊವಿಡ್ ಜತೆಗೆ ಶ್ವಾಸಕೋಶದ ಇನ್​ಫೆಕ್ಷನ್​ ಆಗಿತ್ತಂತೆ. ಈಗ ಎಲ್ಲವೂ ನಿಧಾನ ಗತಿಯಲ್ಲಿ ಕಡಿಮೆ ಆಗುತ್ತಿದೆ. ಹೆಚ್ಚು ಮಾತನಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಇನ್ನು, ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಪತ್ನಿ ಸುರಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಸುರಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

Published On - 4:35 pm, Mon, 7 June 21

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ