AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ

Anirudh Dave: ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಲಾಕ್​ಡೌನ್​ ಜಾರಿ ಆದಾಗಿನಿಂದಲೂ ಐಸಿಯುನಲ್ಲೇ ಇದ್ದ ಖ್ಯಾತ ಕಿರುತೆರೆ ನಟ
ಅನಿರುದ್ಧ್​ ದವೆ
ರಾಜೇಶ್ ದುಗ್ಗುಮನೆ
| Edited By: |

Updated on:Jun 07, 2021 | 4:36 PM

Share

ಕೊವಿಡ್​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ ಕಳೆದ 36 ದಿನಗಳಿಂದ ಕೊವಿಡ್​ ವಿರುದ್ಧ ಹೋರಾಡುತ್ತಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​ನಲ್ಲಿ ತಿಳಿಸಿದ್ದು, ಈಗ ತಮ್ಮ ಆರೋಗ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ತಿಳಿಸಿದ್ದಾರೆ.

ಅನಿರುದ್ಧ್​ ದವೆ ಅವರಿಗೆ 36 ದಿನಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದ್ದು, ಐಸಿಯುನಿಂದ ಹೊರ ಬಂದಿದ್ದಾರೆ. ಅಲ್ಲದೆ, ಅಭಿಮಾನಿಗಳಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಅನಿರುದ್ಧ್​​ ಹಾಕಿರುವ ಫೋಟೋದಲ್ಲಿ ಆಕ್ಸಿಜನ್​ ಮಾಸ್ಕ್​ ಹಾಕಿರುವುದು ಕಂಡು ಬಂದಿದೆ. ಅವರಿಗೆ ಕೊವಿಡ್ ಜತೆಗೆ ಶ್ವಾಸಕೋಶದ ಇನ್​ಫೆಕ್ಷನ್​ ಆಗಿತ್ತಂತೆ. ಈಗ ಎಲ್ಲವೂ ನಿಧಾನ ಗತಿಯಲ್ಲಿ ಕಡಿಮೆ ಆಗುತ್ತಿದೆ. ಹೆಚ್ಚು ಮಾತನಾಡದಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಇನ್ನು, ಇಷ್ಟು ಬೇಗ ಗುಣಮುಖರಾಗಲು ಅಭಿಮಾನಿಗಳ ಹಾರೈಕೆಯೇ ಕಾರಣ ಎಂದು ಅನಿರುದ್ಧ್​ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಎಲ್ಲಾ ಅಭಿಮಾನಿಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ಪತ್ನಿ ಸುರಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಸುರಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

Published On - 4:35 pm, Mon, 7 June 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?