AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ 55 ದಿನ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ

ಅನಿರುದ್ಧ್​ ದವೆ ಅವರಿಗೆ ಎರಡು ತಿಂಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಯಿತು.

ಆಸ್ಪತ್ರೆಯಲ್ಲಿ 55 ದಿನ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ
55 ದಿನ ಆಸ್ಪತ್ರೆಯಲ್ಲಿ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ
TV9 Web
| Edited By: |

Updated on:Jun 25, 2021 | 6:08 PM

Share

ಕೊವಿಡ್ ಎರಡನೇ ಅಲೆ​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ 55 ದಿನ ಕೊವಿಡ್​ ವಿರುದ್ಧ ಹೋರಾಡಿದ್ದಾರೆ. ಕೊನೆಗೂ ಅವರು ಕೊವಿಡ್​ನಿಂದ ಚೇತಸಿಕೊಂಡು ಆಸ್ಪತ್ರೆಯಿಂದ ಹೊರ ಬಂದಿದ್ದು ಸಂತಸ ಹೊರ ಹಾಕಿದ್ದಾರೆ.

ಅನಿರುದ್ಧ್​ ದವೆ ಅವರಿಗೆ ಎರಡು ತಿಂಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಯಿತು. ಸುಮಾರು 36 ದಿನಗಳ ಕಾಲ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡ ಕಾರಣ, ಐಸಿಯುನಿಂದ ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು.

55 ದಿನಗಳ ನಂತರ ಅವರ ಆರೋಗ್ಯ ಸಂಪೂರ್ಣ ಚೇತರಿಕೆ ಕಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಅವರು, ‘55 ದಿನಗಳ ನಂತರ ನಾನು ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿದ್ದೇನೆ. ಎಲ್ಲರಿಗೂ ಧನ್ಯವಾದಗಳು. ಆಮ್ಲಜನಕದ ಸಿಲಿಂಡರ್​ ಇಲ್ಲ. ಈಗ ನನ್ನದೇ ಆದ ಉಸಿರಾಟ. ನಾನು ಜೀವಕ್ಕೆ ಮರಳುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.  ಅವರು ಚೇತರಿಕೆ ಕಂಡಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಆಸ್ಪತ್ರೆಯಲ್ಲಿರುವಾಗಲೇ ಪತ್ನಿ ಶುಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಶುಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: Corona Vaccine: ಎರಡು ಡೋಸ್​ ಕೊರೊನಾ ಲಸಿಕೆ ಪಡೆದವರಿಗೆ ಶುಭಸುದ್ದಿ: ಐಸಿಎಂಆರ್​ ಅಧ್ಯಯನದ ಪ್ರಾಥಮಿಕ ವರದಿ

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​

Published On - 6:07 pm, Fri, 25 June 21

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!