AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ 55 ದಿನ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ

ಅನಿರುದ್ಧ್​ ದವೆ ಅವರಿಗೆ ಎರಡು ತಿಂಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಯಿತು.

ಆಸ್ಪತ್ರೆಯಲ್ಲಿ 55 ದಿನ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ
55 ದಿನ ಆಸ್ಪತ್ರೆಯಲ್ಲಿ ಕೊವಿಡ್​ ವಿರುದ್ಧ​ ಹೋರಾಟ ನಡೆಸಿ ಗೆದ್ದು ಬಂದ ಕಿರುತೆರೆ ನಟ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 25, 2021 | 6:08 PM

ಕೊವಿಡ್ ಎರಡನೇ ಅಲೆ​ ಸಾಕಷ್ಟು ತೊಂದರೆಗಳನ್ನು ಉಂಟು ಮಾಡಿದೆ. ಚಿತ್ರರಂಗದ ಅನೇಕರು ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹಿಂದಿಯ ಖ್ಯಾತ ಕಿರುತೆರೆ ನಟ ಅನಿರುದ್ಧ್​ ದವೆ ಕೂಡ 55 ದಿನ ಕೊವಿಡ್​ ವಿರುದ್ಧ ಹೋರಾಡಿದ್ದಾರೆ. ಕೊನೆಗೂ ಅವರು ಕೊವಿಡ್​ನಿಂದ ಚೇತಸಿಕೊಂಡು ಆಸ್ಪತ್ರೆಯಿಂದ ಹೊರ ಬಂದಿದ್ದು ಸಂತಸ ಹೊರ ಹಾಕಿದ್ದಾರೆ.

ಅನಿರುದ್ಧ್​ ದವೆ ಅವರಿಗೆ ಎರಡು ತಿಂಗಳ ಹಿಂದೆ ಕೊವಿಡ್​ ಪಾಸಿಟಿವ್​ ಆಗಿತ್ತು. ಹೀಗಾಗಿ, ಅವರು ಮನೆಯಲ್ಲೇ ಕ್ವಾರಂಟೈನ್​ ಆದರು. ಆದರೆ, ಆರೋಗ್ಯ ತೀವ್ರವಾಗಿ ಹದಗೆಟ್ಟ ಕಾರಣ ಅವರನ್ನು ಐಸಿಯುಗೆ ಶಿಫ್ಟ್​ ಮಾಡಲಾಯಿತು. ಸುಮಾರು 36 ದಿನಗಳ ಕಾಲ ಅವರು ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡ ಕಾರಣ, ಐಸಿಯುನಿಂದ ಸಾಮಾನ್ಯ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು.

55 ದಿನಗಳ ನಂತರ ಅವರ ಆರೋಗ್ಯ ಸಂಪೂರ್ಣ ಚೇತರಿಕೆ ಕಂಡಿದೆ. ಈ ಬಗ್ಗೆ ಬರೆದುಕೊಂಡಿರುವ ಅವರು, ‘55 ದಿನಗಳ ನಂತರ ನಾನು ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿದ್ದೇನೆ. ಎಲ್ಲರಿಗೂ ಧನ್ಯವಾದಗಳು. ಆಮ್ಲಜನಕದ ಸಿಲಿಂಡರ್​ ಇಲ್ಲ. ಈಗ ನನ್ನದೇ ಆದ ಉಸಿರಾಟ. ನಾನು ಜೀವಕ್ಕೆ ಮರಳುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.  ಅವರು ಚೇತರಿಕೆ ಕಂಡಿರುವ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಆಸ್ಪತ್ರೆಯಲ್ಲಿರುವಾಗಲೇ ಪತ್ನಿ ಶುಭಿ ಅಹೂಜಾ ಅವರ ಜನ್ಮದಿನದಂದು ಅನಿರುದ್ಧ್ ಪೋಸ್ಟ್​ ಒಂದನ್ನು ಮಾಡಿದ್ದರು. ಈ ಪೋಸ್ಟ್​ನಲ್ಲಿ ಅವರು ಶುಭಿಗೆ ಬರ್ತ್​ಡೇ ವಿಶ್ ಮಾಡಿದ್ದರು. ಅಲ್ಲದೆ, ಈ ಸಂದರ್ಭದಲ್ಲಿ ಅವರು ತುಂಬಾನೇ ಸ್ಟ್ರಾಂಗ್​ ಆಗಿ ನಿಂತಿದ್ದಕ್ಕೆ ಧನ್ಯವಾದ ಅರ್ಪಿಸಿದ್ದರು.

ಇದನ್ನೂ ಓದಿ: Corona Vaccine: ಎರಡು ಡೋಸ್​ ಕೊರೊನಾ ಲಸಿಕೆ ಪಡೆದವರಿಗೆ ಶುಭಸುದ್ದಿ: ಐಸಿಎಂಆರ್​ ಅಧ್ಯಯನದ ಪ್ರಾಥಮಿಕ ವರದಿ

ಅವಾಚ್ಯ ಶಬ್ದಗಳಿಂದ ಬೈದು, ಬೆದರಿಕೆ ಹಾಕಿದ ಪ್ರಕರಣ; ಬಾಲಿವುಡ್ ನಟಿ ಅರೆಸ್ಟ್​

Published On - 6:07 pm, Fri, 25 June 21

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ