ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ
ಮೇಘಾ ಶೆಟ್ಟಿ ಮತ್ತು ಅನಿರುದ್ಧ್​
Follow us
|

Updated on: Apr 21, 2021 | 4:40 PM

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಈಗ ಹೊ ದಾಖಲೆ ಸೃಷ್ಟಿಸಿದೆ. ಧಾರಾವಾಹಿ 400 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶೇಷ ಎಂದರೆ ಟೈಟಲ್ ಸಾಂಗ್ ಯೂಟ್ಯೂಬ್​ನಲ್ಲಿ 2.4 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ದಾಖಲೆ ಸೃಷ್ಟಿಸಿದೆ. ಕನ್ನಡದ ಯಾವ ಧಾರಾವಾಹಿಯ ಟೈಟಲ್​ ಸಾಂಗ್​ ಇಷ್ಟೊಂದು ವೀಕ್ಷಣೆ ಕಂಡಿಲ್ಲ.

ಮಧ್ಯವಯಸ್ಕ ಯಶಸ್ವಿ ಉದ್ಯಮಿ ಆರ್ಯವರ್ಧನ್, ಯುವತಿ ಅನು ಸಿರಿಮನೆ ಪ್ರೇಮಕಥೆ ಧಾರಾವಾಹಿಯ ಹೈಲೈಟ್​ .ಇವರಿಬ್ಬರ ಪ್ರೇಮಕಥೆ ಶುರುವಾಗಿ ಹಲವು ಅಡ್ಡಿ ಆತಂಕಗಳನ್ನು ಎದುರಿಸಿ ಗೆಲ್ಲುತ್ತದೆ. ಈಗ ಆರ್ಯವರ್ಧನ್ ಮದುವೆಯಾಗಲು ಅನು ಒಪ್ಪಿದ್ದಾಳೆ. ಆದರೆ ಅವರ ಮದುವೆ ಸುಸೂತ್ರವಾಗುತ್ತಿಲ್ಲ. ಮುಂದೇನು ನಡೆಯುತ್ತದೆ ಎನ್ನುವುದು ವೀಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಈ ಧಾರಾವಾಹಿಯು ವಯಸ್ಸು, ಜೀವನಶೈಲಿ ಹಾಗೂ ಅಂತಸ್ತಿನಲ್ಲಿ ಆಕಾಶ ಹಾಗೂ ಭೂಮಿಯಷ್ಟು ಅಂತರವಿರುವ ನಾಯಕ, ನಾಯಕಿ ಪ್ರೇಮಕಥೆ ಎಲ್ಲರ ಮನ ಗೆದ್ದಿದೆ.

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು. ಈ ಇಬ್ಬರ ಜೋಡಿಯೂ ಕನ್ನಡ ಕಿರುತೆರೆ ವೀಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಈ ಧಾರಾವಾಹಿಗೆ ಈಗ 400 ಕಂತುಗಳನ್ನು ಪೂರೈಸಿದ ಸಂಭ್ರಮ.

ಜೊತೆ ಜೊತೆಯಲಿ ಧಾರಾವಾಹಿ ತಂಡ ಮೊಟ್ಟಮೊದಲ ಬಾರಿಗೆ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್​​ನಲ್ಲಿ ಅದ್ದೂರಿಯಾಗಿ ಟ್ರೈಲರ್ ಬಿಡುಗಡೆ ಮಾಡಿಕೊಂಡಿತ್ತು. ಈ ಮೂಲಕ ಅಪಾರ ಕುತೂಹಲ, ಜನಪ್ರಿಯತೆ ಗಳಿಸಿಕೊಂಡಿತ್ತು.

ಆರೂರು ಜಗದೀಶ್ ನಿರ್ದೇಶನದ ಈ ಧಾರಾವಾಹಿಯಲ್ಲಿ ನಟಿ ವಿಜಯಲಕ್ಷ್ಮಿ ಸಿಂಗ್ ಮೊಟ್ಟಮೊದಲ ಬಾರಿಗೆ ಕಿರುತೆರೆಯಲ್ಲಿ ಶಾರದಾ ದೇವಿಯಾಗಿ ನಟಿಸಿದ್ದಾರೆ. ಅವರು ಆರ್ಯವರ್ಧನ್ ತಾಯಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಇದನ್ನೂ ಓದಿ: ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!