AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ
ಮೇಘಾ ಶೆಟ್ಟಿ ಮತ್ತು ಅನಿರುದ್ಧ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 4:40 PM

Share

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಈಗ ಹೊ ದಾಖಲೆ ಸೃಷ್ಟಿಸಿದೆ. ಧಾರಾವಾಹಿ 400 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶೇಷ ಎಂದರೆ ಟೈಟಲ್ ಸಾಂಗ್ ಯೂಟ್ಯೂಬ್​ನಲ್ಲಿ 2.4 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ದಾಖಲೆ ಸೃಷ್ಟಿಸಿದೆ. ಕನ್ನಡದ ಯಾವ ಧಾರಾವಾಹಿಯ ಟೈಟಲ್​ ಸಾಂಗ್​ ಇಷ್ಟೊಂದು ವೀಕ್ಷಣೆ ಕಂಡಿಲ್ಲ.

ಮಧ್ಯವಯಸ್ಕ ಯಶಸ್ವಿ ಉದ್ಯಮಿ ಆರ್ಯವರ್ಧನ್, ಯುವತಿ ಅನು ಸಿರಿಮನೆ ಪ್ರೇಮಕಥೆ ಧಾರಾವಾಹಿಯ ಹೈಲೈಟ್​ .ಇವರಿಬ್ಬರ ಪ್ರೇಮಕಥೆ ಶುರುವಾಗಿ ಹಲವು ಅಡ್ಡಿ ಆತಂಕಗಳನ್ನು ಎದುರಿಸಿ ಗೆಲ್ಲುತ್ತದೆ. ಈಗ ಆರ್ಯವರ್ಧನ್ ಮದುವೆಯಾಗಲು ಅನು ಒಪ್ಪಿದ್ದಾಳೆ. ಆದರೆ ಅವರ ಮದುವೆ ಸುಸೂತ್ರವಾಗುತ್ತಿಲ್ಲ. ಮುಂದೇನು ನಡೆಯುತ್ತದೆ ಎನ್ನುವುದು ವೀಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಈ ಧಾರಾವಾಹಿಯು ವಯಸ್ಸು, ಜೀವನಶೈಲಿ ಹಾಗೂ ಅಂತಸ್ತಿನಲ್ಲಿ ಆಕಾಶ ಹಾಗೂ ಭೂಮಿಯಷ್ಟು ಅಂತರವಿರುವ ನಾಯಕ, ನಾಯಕಿ ಪ್ರೇಮಕಥೆ ಎಲ್ಲರ ಮನ ಗೆದ್ದಿದೆ.

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು. ಈ ಇಬ್ಬರ ಜೋಡಿಯೂ ಕನ್ನಡ ಕಿರುತೆರೆ ವೀಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಈ ಧಾರಾವಾಹಿಗೆ ಈಗ 400 ಕಂತುಗಳನ್ನು ಪೂರೈಸಿದ ಸಂಭ್ರಮ.

ಜೊತೆ ಜೊತೆಯಲಿ ಧಾರಾವಾಹಿ ತಂಡ ಮೊಟ್ಟಮೊದಲ ಬಾರಿಗೆ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್​​ನಲ್ಲಿ ಅದ್ದೂರಿಯಾಗಿ ಟ್ರೈಲರ್ ಬಿಡುಗಡೆ ಮಾಡಿಕೊಂಡಿತ್ತು. ಈ ಮೂಲಕ ಅಪಾರ ಕುತೂಹಲ, ಜನಪ್ರಿಯತೆ ಗಳಿಸಿಕೊಂಡಿತ್ತು.

ಆರೂರು ಜಗದೀಶ್ ನಿರ್ದೇಶನದ ಈ ಧಾರಾವಾಹಿಯಲ್ಲಿ ನಟಿ ವಿಜಯಲಕ್ಷ್ಮಿ ಸಿಂಗ್ ಮೊಟ್ಟಮೊದಲ ಬಾರಿಗೆ ಕಿರುತೆರೆಯಲ್ಲಿ ಶಾರದಾ ದೇವಿಯಾಗಿ ನಟಿಸಿದ್ದಾರೆ. ಅವರು ಆರ್ಯವರ್ಧನ್ ತಾಯಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಇದನ್ನೂ ಓದಿ: ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ