AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ
ಮೇಘಾ ಶೆಟ್ಟಿ ಮತ್ತು ಅನಿರುದ್ಧ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 4:40 PM

Share

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಈಗ ಹೊ ದಾಖಲೆ ಸೃಷ್ಟಿಸಿದೆ. ಧಾರಾವಾಹಿ 400 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶೇಷ ಎಂದರೆ ಟೈಟಲ್ ಸಾಂಗ್ ಯೂಟ್ಯೂಬ್​ನಲ್ಲಿ 2.4 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ದಾಖಲೆ ಸೃಷ್ಟಿಸಿದೆ. ಕನ್ನಡದ ಯಾವ ಧಾರಾವಾಹಿಯ ಟೈಟಲ್​ ಸಾಂಗ್​ ಇಷ್ಟೊಂದು ವೀಕ್ಷಣೆ ಕಂಡಿಲ್ಲ.

ಮಧ್ಯವಯಸ್ಕ ಯಶಸ್ವಿ ಉದ್ಯಮಿ ಆರ್ಯವರ್ಧನ್, ಯುವತಿ ಅನು ಸಿರಿಮನೆ ಪ್ರೇಮಕಥೆ ಧಾರಾವಾಹಿಯ ಹೈಲೈಟ್​ .ಇವರಿಬ್ಬರ ಪ್ರೇಮಕಥೆ ಶುರುವಾಗಿ ಹಲವು ಅಡ್ಡಿ ಆತಂಕಗಳನ್ನು ಎದುರಿಸಿ ಗೆಲ್ಲುತ್ತದೆ. ಈಗ ಆರ್ಯವರ್ಧನ್ ಮದುವೆಯಾಗಲು ಅನು ಒಪ್ಪಿದ್ದಾಳೆ. ಆದರೆ ಅವರ ಮದುವೆ ಸುಸೂತ್ರವಾಗುತ್ತಿಲ್ಲ. ಮುಂದೇನು ನಡೆಯುತ್ತದೆ ಎನ್ನುವುದು ವೀಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಈ ಧಾರಾವಾಹಿಯು ವಯಸ್ಸು, ಜೀವನಶೈಲಿ ಹಾಗೂ ಅಂತಸ್ತಿನಲ್ಲಿ ಆಕಾಶ ಹಾಗೂ ಭೂಮಿಯಷ್ಟು ಅಂತರವಿರುವ ನಾಯಕ, ನಾಯಕಿ ಪ್ರೇಮಕಥೆ ಎಲ್ಲರ ಮನ ಗೆದ್ದಿದೆ.

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು. ಈ ಇಬ್ಬರ ಜೋಡಿಯೂ ಕನ್ನಡ ಕಿರುತೆರೆ ವೀಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಈ ಧಾರಾವಾಹಿಗೆ ಈಗ 400 ಕಂತುಗಳನ್ನು ಪೂರೈಸಿದ ಸಂಭ್ರಮ.

ಜೊತೆ ಜೊತೆಯಲಿ ಧಾರಾವಾಹಿ ತಂಡ ಮೊಟ್ಟಮೊದಲ ಬಾರಿಗೆ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್​​ನಲ್ಲಿ ಅದ್ದೂರಿಯಾಗಿ ಟ್ರೈಲರ್ ಬಿಡುಗಡೆ ಮಾಡಿಕೊಂಡಿತ್ತು. ಈ ಮೂಲಕ ಅಪಾರ ಕುತೂಹಲ, ಜನಪ್ರಿಯತೆ ಗಳಿಸಿಕೊಂಡಿತ್ತು.

ಆರೂರು ಜಗದೀಶ್ ನಿರ್ದೇಶನದ ಈ ಧಾರಾವಾಹಿಯಲ್ಲಿ ನಟಿ ವಿಜಯಲಕ್ಷ್ಮಿ ಸಿಂಗ್ ಮೊಟ್ಟಮೊದಲ ಬಾರಿಗೆ ಕಿರುತೆರೆಯಲ್ಲಿ ಶಾರದಾ ದೇವಿಯಾಗಿ ನಟಿಸಿದ್ದಾರೆ. ಅವರು ಆರ್ಯವರ್ಧನ್ ತಾಯಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಇದನ್ನೂ ಓದಿ: ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

Follow Us
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ