AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ
ಮೇಘಾ ಶೆಟ್ಟಿ ಮತ್ತು ಅನಿರುದ್ಧ್​
ರಾಜೇಶ್ ದುಗ್ಗುಮನೆ
|

Updated on: Apr 21, 2021 | 4:40 PM

Share

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಈಗ ಹೊ ದಾಖಲೆ ಸೃಷ್ಟಿಸಿದೆ. ಧಾರಾವಾಹಿ 400 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶೇಷ ಎಂದರೆ ಟೈಟಲ್ ಸಾಂಗ್ ಯೂಟ್ಯೂಬ್​ನಲ್ಲಿ 2.4 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ದಾಖಲೆ ಸೃಷ್ಟಿಸಿದೆ. ಕನ್ನಡದ ಯಾವ ಧಾರಾವಾಹಿಯ ಟೈಟಲ್​ ಸಾಂಗ್​ ಇಷ್ಟೊಂದು ವೀಕ್ಷಣೆ ಕಂಡಿಲ್ಲ.

ಮಧ್ಯವಯಸ್ಕ ಯಶಸ್ವಿ ಉದ್ಯಮಿ ಆರ್ಯವರ್ಧನ್, ಯುವತಿ ಅನು ಸಿರಿಮನೆ ಪ್ರೇಮಕಥೆ ಧಾರಾವಾಹಿಯ ಹೈಲೈಟ್​ .ಇವರಿಬ್ಬರ ಪ್ರೇಮಕಥೆ ಶುರುವಾಗಿ ಹಲವು ಅಡ್ಡಿ ಆತಂಕಗಳನ್ನು ಎದುರಿಸಿ ಗೆಲ್ಲುತ್ತದೆ. ಈಗ ಆರ್ಯವರ್ಧನ್ ಮದುವೆಯಾಗಲು ಅನು ಒಪ್ಪಿದ್ದಾಳೆ. ಆದರೆ ಅವರ ಮದುವೆ ಸುಸೂತ್ರವಾಗುತ್ತಿಲ್ಲ. ಮುಂದೇನು ನಡೆಯುತ್ತದೆ ಎನ್ನುವುದು ವೀಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಈ ಧಾರಾವಾಹಿಯು ವಯಸ್ಸು, ಜೀವನಶೈಲಿ ಹಾಗೂ ಅಂತಸ್ತಿನಲ್ಲಿ ಆಕಾಶ ಹಾಗೂ ಭೂಮಿಯಷ್ಟು ಅಂತರವಿರುವ ನಾಯಕ, ನಾಯಕಿ ಪ್ರೇಮಕಥೆ ಎಲ್ಲರ ಮನ ಗೆದ್ದಿದೆ.

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು. ಈ ಇಬ್ಬರ ಜೋಡಿಯೂ ಕನ್ನಡ ಕಿರುತೆರೆ ವೀಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಈ ಧಾರಾವಾಹಿಗೆ ಈಗ 400 ಕಂತುಗಳನ್ನು ಪೂರೈಸಿದ ಸಂಭ್ರಮ.

ಜೊತೆ ಜೊತೆಯಲಿ ಧಾರಾವಾಹಿ ತಂಡ ಮೊಟ್ಟಮೊದಲ ಬಾರಿಗೆ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್​​ನಲ್ಲಿ ಅದ್ದೂರಿಯಾಗಿ ಟ್ರೈಲರ್ ಬಿಡುಗಡೆ ಮಾಡಿಕೊಂಡಿತ್ತು. ಈ ಮೂಲಕ ಅಪಾರ ಕುತೂಹಲ, ಜನಪ್ರಿಯತೆ ಗಳಿಸಿಕೊಂಡಿತ್ತು.

ಆರೂರು ಜಗದೀಶ್ ನಿರ್ದೇಶನದ ಈ ಧಾರಾವಾಹಿಯಲ್ಲಿ ನಟಿ ವಿಜಯಲಕ್ಷ್ಮಿ ಸಿಂಗ್ ಮೊಟ್ಟಮೊದಲ ಬಾರಿಗೆ ಕಿರುತೆರೆಯಲ್ಲಿ ಶಾರದಾ ದೇವಿಯಾಗಿ ನಟಿಸಿದ್ದಾರೆ. ಅವರು ಆರ್ಯವರ್ಧನ್ ತಾಯಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಇದನ್ನೂ ಓದಿ: ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್