AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು.

ಹೊಸ ಮೈಲಿಗಲ್ಲು ಸೃಷ್ಟಿಸಿದ ಅನಿರುದ್ಧ-ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿ
ಮೇಘಾ ಶೆಟ್ಟಿ ಮತ್ತು ಅನಿರುದ್ಧ್​
Follow us
ರಾಜೇಶ್ ದುಗ್ಗುಮನೆ
|

Updated on: Apr 21, 2021 | 4:40 PM

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಈಗ ಹೊ ದಾಖಲೆ ಸೃಷ್ಟಿಸಿದೆ. ಧಾರಾವಾಹಿ 400 ಕಂತುಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶೇಷ ಎಂದರೆ ಟೈಟಲ್ ಸಾಂಗ್ ಯೂಟ್ಯೂಬ್​ನಲ್ಲಿ 2.4 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ದಾಖಲೆ ಸೃಷ್ಟಿಸಿದೆ. ಕನ್ನಡದ ಯಾವ ಧಾರಾವಾಹಿಯ ಟೈಟಲ್​ ಸಾಂಗ್​ ಇಷ್ಟೊಂದು ವೀಕ್ಷಣೆ ಕಂಡಿಲ್ಲ.

ಮಧ್ಯವಯಸ್ಕ ಯಶಸ್ವಿ ಉದ್ಯಮಿ ಆರ್ಯವರ್ಧನ್, ಯುವತಿ ಅನು ಸಿರಿಮನೆ ಪ್ರೇಮಕಥೆ ಧಾರಾವಾಹಿಯ ಹೈಲೈಟ್​ .ಇವರಿಬ್ಬರ ಪ್ರೇಮಕಥೆ ಶುರುವಾಗಿ ಹಲವು ಅಡ್ಡಿ ಆತಂಕಗಳನ್ನು ಎದುರಿಸಿ ಗೆಲ್ಲುತ್ತದೆ. ಈಗ ಆರ್ಯವರ್ಧನ್ ಮದುವೆಯಾಗಲು ಅನು ಒಪ್ಪಿದ್ದಾಳೆ. ಆದರೆ ಅವರ ಮದುವೆ ಸುಸೂತ್ರವಾಗುತ್ತಿಲ್ಲ. ಮುಂದೇನು ನಡೆಯುತ್ತದೆ ಎನ್ನುವುದು ವೀಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಈ ಧಾರಾವಾಹಿಯು ವಯಸ್ಸು, ಜೀವನಶೈಲಿ ಹಾಗೂ ಅಂತಸ್ತಿನಲ್ಲಿ ಆಕಾಶ ಹಾಗೂ ಭೂಮಿಯಷ್ಟು ಅಂತರವಿರುವ ನಾಯಕ, ನಾಯಕಿ ಪ್ರೇಮಕಥೆ ಎಲ್ಲರ ಮನ ಗೆದ್ದಿದೆ.

ಆರ್ಯವರ್ಧನ್ ಆಗಿ ಅನಿರುದ್ಧ ಜಟ್ಕರ್ ಹೆಚ್ಚು ಜನಪ್ರಿಯರಾದರು. ಅನು ಸಿರಿಮನೆಯಾಗಿ ಮೇಘಾ ಶೆಟ್ಟಿ ಮನೆ ಮಾತಾದರು. ಈ ಇಬ್ಬರ ಜೋಡಿಯೂ ಕನ್ನಡ ಕಿರುತೆರೆ ವೀಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಈ ಧಾರಾವಾಹಿಗೆ ಈಗ 400 ಕಂತುಗಳನ್ನು ಪೂರೈಸಿದ ಸಂಭ್ರಮ.

ಜೊತೆ ಜೊತೆಯಲಿ ಧಾರಾವಾಹಿ ತಂಡ ಮೊಟ್ಟಮೊದಲ ಬಾರಿಗೆ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್​​ನಲ್ಲಿ ಅದ್ದೂರಿಯಾಗಿ ಟ್ರೈಲರ್ ಬಿಡುಗಡೆ ಮಾಡಿಕೊಂಡಿತ್ತು. ಈ ಮೂಲಕ ಅಪಾರ ಕುತೂಹಲ, ಜನಪ್ರಿಯತೆ ಗಳಿಸಿಕೊಂಡಿತ್ತು.

ಆರೂರು ಜಗದೀಶ್ ನಿರ್ದೇಶನದ ಈ ಧಾರಾವಾಹಿಯಲ್ಲಿ ನಟಿ ವಿಜಯಲಕ್ಷ್ಮಿ ಸಿಂಗ್ ಮೊಟ್ಟಮೊದಲ ಬಾರಿಗೆ ಕಿರುತೆರೆಯಲ್ಲಿ ಶಾರದಾ ದೇವಿಯಾಗಿ ನಟಿಸಿದ್ದಾರೆ. ಅವರು ಆರ್ಯವರ್ಧನ್ ತಾಯಿಯಾಗಿ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಇದನ್ನೂ ಓದಿ: ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ