AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?

Anirudh Ravichander: ‘ಜೈಲರ್’ ಚಿತ್ರದ ಬಿಜಿಎಂ ಗಮನ ಸೆಳೆದಿದೆ. ಈ ಚಿತ್ರದ ‘ಕಾವಾಲಾ..’ ಹಾಡು ಯೂಟ್ಯೂಬ್​ನಲ್ಲಿ ಬಹುಕೋಟಿ ವೀಕ್ಷಣೆ ಕಂಡಿದೆ. ಇದಕ್ಕೆಲ್ಲ ಕಾರಣ ಆಗಿರೋದು ಅನಿರುದ್ಧ್ ರವಿಚಂದರ್ ಅವರ ಮಾಂತ್ರಿಕ ಮ್ಯೂಸಿಕ್. ಅವರಿಗೆ ಈಗ ದುಬಾರಿ ಉಡುಗೊರೆ ಸಿಕ್ಕಿದೆ.

‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?
ಅನಿರುದ್ಧ ರವಿಚಂದರ್-ಕಲಾನಿಧಿ ಮಾರನ್
ರಾಜೇಶ್ ದುಗ್ಗುಮನೆ
|

Updated on:Sep 06, 2023 | 10:01 AM

Share

‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಸಿನಿಮಾ ಬೀಗಿದೆ. ಈ ಚಿತ್ರದ ಗೆಲುವಿಗೆ ಕಾರಣರಾದ ಎಲ್ಲರಿಗೂ ಸನ್ ಪಿಕ್ಚರ್ಸ್​​ ಮಾಲೀಕ ಕಲಾನಿಧಿ ಮಾರನ್ (Kalanithi Maran) ಅವರು ಉಡುಗೊರೆ ನೀಡುತ್ತಿದ್ದಾರೆ. ಈ ಮೂಲಕ ತಮಗೆ ಲಾಭ ತಂದುಕೊಟ್ಟ ಎಲ್ಲರಿಗೆ ಅವರು ಈ ರೀತಿಯಲ್ಲಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ‘ಜೈಲರ್’ ಸಿನಿಮಾ ಹಿಟ್ ಆಗಲು ಮ್ಯೂಸಿಕ್ ಕೂಡ ಕಾರಣ ಆಗಿತ್ತು. ಈ ಕಾರಣಕ್ಕೆ ಚಿತ್ರದ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರಿಗೆ ಕಲಾನಿಧಿ ಮಾರನ್ ದುಬಾರಿ ಉಡುಗೊರೆ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಜೈಲರ್’ ಚಿತ್ರದ ಬಿಜಿಎಂ ಗಮನ ಸೆಳೆದಿದೆ. ಈ ಚಿತ್ರದ ‘ಕಾವಾಲಾ..’ ಹಾಡು ಯೂಟ್ಯೂಬ್​ನಲ್ಲಿ ಬಹುಕೋಟಿ ವೀಕ್ಷಣೆ ಕಂಡಿದೆ. ಇದಕ್ಕೆಲ್ಲ ಕಾರಣ ಆಗಿರೋದು ಅನಿರುದ್ಧ್ ರವಿಚಂದರ್ ಅವರ ಮಾಂತ್ರಿಕ ಮ್ಯೂಸಿಕ್. ಈ ಕಾರಣದಿಂದಲೇ ಕಲಾನಿಧಿ ಮಾರನ್ ಅವರು ಪೋರ್ಷಾ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ವಿಶೇಷ ಎಂದರೆ ಅನಿರುದ್ಧ್​ ಎದುರು ಮೂರು ಕಾರಗಳನ್ನು ಆಯ್ಕೆಯಾಗಿ ನೀಡಲಾಗಿತ್ತು. ಬಿಎಂಡಬ್ಲ್ಯೂ ಎಕ್ಸ್​5, ಬಿಎಂಡಬ್ಲ್ಯೂ ಐಎಕ್ಸ್​ ಹಾಗೂ ಪೋರ್ಷಾ ಮಕಾನ್ ಕಾರನ್ನು ಇಡಲಾಗಿತ್ತು. ಎಲ್ಲಾ ಕಾರುಗಳನ್ನು ಒಮ್ಮೆ ಏರಿ ಬಂದರು ಅನಿರುದ್ಧ್. ಆ ಬಳಿಕ ಪೋರ್ಷಾ ಎಸ್​ಯುವಿನ ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೋರ್ಷಾ ಮಕಾನ್ ಹೈ ಎಂಡ್​ಗೆ 1.92 ಕೋಟಿ ರೂಪಾಯಿ ಇದೆ. ಈಗ ಅನಿರುದ್ಧ್​ ಅವರಿಗೆ ನೀಡಿರೋದು ಹೈಎಂಡ್​ಕಾರು  ಎನ್ನಲಾಗುತ್ತಿದೆ. ದೊಡ್ಡ ಮೊತ್ತದ ಸಂಭಾವನೆ ಜೊತೆಗೆ ಅನಿರುದ್ಧ್​ ಅವರಿಗೆ ದುಬಾರಿ ಕಾರು ಕೂಡ ಸಿಕ್ಕಿದೆ. ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: ರಜನೀಕಾಂತ್ ಬಳಿಕ ಜೈಲರ್ ನಿರ್ದೇಶಕನಿಗೂ ಕಾರು, ಹಣ ಉಡುಗೊರೆ ಕೊಟ್ಟ ನಿರ್ಮಾಪಕ

ಈ ಮೊದಲು ‘ಜೈಲರ್’ ಸಿನಿಮಾದ ಹೀರೋ ರಜನಿಕಾಂತ್​ಗೆ ದೊಡ್ಡ ಮೊತ್ತದ ಚೆಕ್ ನೀಡಿದ್ದರು ಕಲಾನಿಧಿ ಮಾರನ್. ಕಲೆಕ್ಷನ್ ಮೊತ್ತದ ಒಂದಷ್ಟು ಭಾಗವನ್ನು ರಜನಿಗೆ ನೀಡಲಾಗಿತ್ತು. ಇದರ ಜೊತೆಗೆ ಬಿಎಂಡಬ್ಲ್ಯು ಕಾರನ್ನು ಸಹ ಉಡುಗೊರೆ ಆಗಿ ನೀಡಲಾಗಿತ್ತು. ಅದೇ ರೀತಿ ನಿರ್ದೇಶಕ ನೆಲ್ಸನ್ ದಿಲೀಪ್​ ಕುಮಾರ್​ಗೂ ಕಾರು ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:59 am, Wed, 6 September 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!