AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?

Anirudh Ravichander: ‘ಜೈಲರ್’ ಚಿತ್ರದ ಬಿಜಿಎಂ ಗಮನ ಸೆಳೆದಿದೆ. ಈ ಚಿತ್ರದ ‘ಕಾವಾಲಾ..’ ಹಾಡು ಯೂಟ್ಯೂಬ್​ನಲ್ಲಿ ಬಹುಕೋಟಿ ವೀಕ್ಷಣೆ ಕಂಡಿದೆ. ಇದಕ್ಕೆಲ್ಲ ಕಾರಣ ಆಗಿರೋದು ಅನಿರುದ್ಧ್ ರವಿಚಂದರ್ ಅವರ ಮಾಂತ್ರಿಕ ಮ್ಯೂಸಿಕ್. ಅವರಿಗೆ ಈಗ ದುಬಾರಿ ಉಡುಗೊರೆ ಸಿಕ್ಕಿದೆ.

‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?
ಅನಿರುದ್ಧ ರವಿಚಂದರ್-ಕಲಾನಿಧಿ ಮಾರನ್
ರಾಜೇಶ್ ದುಗ್ಗುಮನೆ
|

Updated on:Sep 06, 2023 | 10:01 AM

Share

‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಸಿನಿಮಾ ಬೀಗಿದೆ. ಈ ಚಿತ್ರದ ಗೆಲುವಿಗೆ ಕಾರಣರಾದ ಎಲ್ಲರಿಗೂ ಸನ್ ಪಿಕ್ಚರ್ಸ್​​ ಮಾಲೀಕ ಕಲಾನಿಧಿ ಮಾರನ್ (Kalanithi Maran) ಅವರು ಉಡುಗೊರೆ ನೀಡುತ್ತಿದ್ದಾರೆ. ಈ ಮೂಲಕ ತಮಗೆ ಲಾಭ ತಂದುಕೊಟ್ಟ ಎಲ್ಲರಿಗೆ ಅವರು ಈ ರೀತಿಯಲ್ಲಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ‘ಜೈಲರ್’ ಸಿನಿಮಾ ಹಿಟ್ ಆಗಲು ಮ್ಯೂಸಿಕ್ ಕೂಡ ಕಾರಣ ಆಗಿತ್ತು. ಈ ಕಾರಣಕ್ಕೆ ಚಿತ್ರದ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರಿಗೆ ಕಲಾನಿಧಿ ಮಾರನ್ ದುಬಾರಿ ಉಡುಗೊರೆ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

‘ಜೈಲರ್’ ಚಿತ್ರದ ಬಿಜಿಎಂ ಗಮನ ಸೆಳೆದಿದೆ. ಈ ಚಿತ್ರದ ‘ಕಾವಾಲಾ..’ ಹಾಡು ಯೂಟ್ಯೂಬ್​ನಲ್ಲಿ ಬಹುಕೋಟಿ ವೀಕ್ಷಣೆ ಕಂಡಿದೆ. ಇದಕ್ಕೆಲ್ಲ ಕಾರಣ ಆಗಿರೋದು ಅನಿರುದ್ಧ್ ರವಿಚಂದರ್ ಅವರ ಮಾಂತ್ರಿಕ ಮ್ಯೂಸಿಕ್. ಈ ಕಾರಣದಿಂದಲೇ ಕಲಾನಿಧಿ ಮಾರನ್ ಅವರು ಪೋರ್ಷಾ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ವಿಶೇಷ ಎಂದರೆ ಅನಿರುದ್ಧ್​ ಎದುರು ಮೂರು ಕಾರಗಳನ್ನು ಆಯ್ಕೆಯಾಗಿ ನೀಡಲಾಗಿತ್ತು. ಬಿಎಂಡಬ್ಲ್ಯೂ ಎಕ್ಸ್​5, ಬಿಎಂಡಬ್ಲ್ಯೂ ಐಎಕ್ಸ್​ ಹಾಗೂ ಪೋರ್ಷಾ ಮಕಾನ್ ಕಾರನ್ನು ಇಡಲಾಗಿತ್ತು. ಎಲ್ಲಾ ಕಾರುಗಳನ್ನು ಒಮ್ಮೆ ಏರಿ ಬಂದರು ಅನಿರುದ್ಧ್. ಆ ಬಳಿಕ ಪೋರ್ಷಾ ಎಸ್​ಯುವಿನ ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪೋರ್ಷಾ ಮಕಾನ್ ಹೈ ಎಂಡ್​ಗೆ 1.92 ಕೋಟಿ ರೂಪಾಯಿ ಇದೆ. ಈಗ ಅನಿರುದ್ಧ್​ ಅವರಿಗೆ ನೀಡಿರೋದು ಹೈಎಂಡ್​ಕಾರು  ಎನ್ನಲಾಗುತ್ತಿದೆ. ದೊಡ್ಡ ಮೊತ್ತದ ಸಂಭಾವನೆ ಜೊತೆಗೆ ಅನಿರುದ್ಧ್​ ಅವರಿಗೆ ದುಬಾರಿ ಕಾರು ಕೂಡ ಸಿಕ್ಕಿದೆ. ಎಲ್ಲರೂ ಅವರಿಗೆ ಶುಭಾಶಯ ಕೋರುತ್ತಿದ್ದಾರೆ.

ಇದನ್ನೂ ಓದಿ: ರಜನೀಕಾಂತ್ ಬಳಿಕ ಜೈಲರ್ ನಿರ್ದೇಶಕನಿಗೂ ಕಾರು, ಹಣ ಉಡುಗೊರೆ ಕೊಟ್ಟ ನಿರ್ಮಾಪಕ

ಈ ಮೊದಲು ‘ಜೈಲರ್’ ಸಿನಿಮಾದ ಹೀರೋ ರಜನಿಕಾಂತ್​ಗೆ ದೊಡ್ಡ ಮೊತ್ತದ ಚೆಕ್ ನೀಡಿದ್ದರು ಕಲಾನಿಧಿ ಮಾರನ್. ಕಲೆಕ್ಷನ್ ಮೊತ್ತದ ಒಂದಷ್ಟು ಭಾಗವನ್ನು ರಜನಿಗೆ ನೀಡಲಾಗಿತ್ತು. ಇದರ ಜೊತೆಗೆ ಬಿಎಂಡಬ್ಲ್ಯು ಕಾರನ್ನು ಸಹ ಉಡುಗೊರೆ ಆಗಿ ನೀಡಲಾಗಿತ್ತು. ಅದೇ ರೀತಿ ನಿರ್ದೇಶಕ ನೆಲ್ಸನ್ ದಿಲೀಪ್​ ಕುಮಾರ್​ಗೂ ಕಾರು ಸಿಕ್ಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:59 am, Wed, 6 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು