AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಅನಿರುದ್ಧ್ ‘ಹುಕುಂ’ ಟೂರ್​ಗೆ ಕೆವಿಎನ್ ಪ್ರಸ್ತುತಿ; ಒಂದೇ ಗಂಟೆಯಲ್ಲಿ ಟಿಕೆಟ್ ಸೋಲ್ಡ್​ಔಟ್

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ‘ಹುಕುಂ’ ಟೂರ್‌ನ ಬೆಂಗಳೂರು ಕಾರ್ಯಕ್ರಮದ ಟಿಕೆಟ್‌ಗಳು ಕೇವಲ ಒಂದು ಗಂಟೆಯಲ್ಲಿ ಸಂಪೂರ್ಣ ಮಾರಾಟವಾಗಿವೆ. ಕೆವಿಎನ್ ಪ್ರಸ್ತುತ ಪಡಿಸಿದ ಈ ಕಾರ್ಯಕ್ರಮವು ಭಾರತದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ. ಅನಿರುದ್ಧ್ ಅವರ ಅಪಾರ ಜನಪ್ರಿಯತೆ ಮತ್ತು ಅಭಿಮಾನಿಗಳ ಉತ್ಸಾಹವನ್ನು ಇದು ಸಾಬೀತುಪಡಿಸುತ್ತದೆ.

ಬೆಂಗಳೂರಲ್ಲಿ ಅನಿರುದ್ಧ್ ‘ಹುಕುಂ’ ಟೂರ್​ಗೆ ಕೆವಿಎನ್ ಪ್ರಸ್ತುತಿ; ಒಂದೇ ಗಂಟೆಯಲ್ಲಿ ಟಿಕೆಟ್ ಸೋಲ್ಡ್​ಔಟ್
ಅನಿರುದ್ಧ್​-ವೆಂಕಟ್
ರಾಜೇಶ್ ದುಗ್ಗುಮನೆ
|

Updated on: Apr 12, 2025 | 1:28 PM

Share

ಖ್ಯಾತ ಗಾಯಕರು, ಸಂಗೀತ ಸಂಯೋಜಕರು ಸಿನಿಮಾ ಕೆಲಸ ಮಾಡುವುದರ ಜೊತೆಗೆ ಕಾನ್ಸರ್ಟ್​ಗಳನ್ನು ಕೂಡ ಆಯೋಜನೆ ಮಾಡುತ್ತಾರೆ. ಇದಕ್ಕೆ ತಮಿಳಿನ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ್​ ರವಿಚಂದರ್ (Anirudh Ravichander) ಕೂಡ ಹೊರತಾಗಿಲ್ಲ. ಸಾಕಷ್ಟು ಮಾಸ್ ಸಾಂಗ್​ಗಳನ್ನು ನೀಡಿದ ಅವರು ಬೆಂಗಳೂರಿನಲ್ಲಿ ಕಾನ್ಸರ್ಟ್ ಮಾಡುತ್ತಿದ್ದಾರೆ. ಇದರ ಟಿಕೆಟ್ ಕೇವಲ ಒಂದು ಗಂಟೆಯಲ್ಲಿ ಸಂಪೂರ್ಣ ಸೋಲ್ಡ್​ಔಟ್ ಆಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಅನಿರುದ್ಧ್​​ಗೆ ಇರೋ ಕ್ರೇಜ್ ಎಂಥದ್ದು ಎಂಬುದು ಸಾಬೀತಾಗಿದೆ.

2012ರಲ್ಲಿ ಬಂದ ‘ವೈ ದಿಸ್ ಕೊಲವೆರಿ..’ ಹಾಡಿನ ಮೂಲಕ ಅನಿರುದ್ಧ್ ಖ್ಯಾತಿ ಪಡೆದರು. ಮೊದಲ ಹಾಡಿನ ಮೂಲಕ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಈಗ ಅವರು ಸ್ಟಾರ್ ಹೀರೋಗಳ ಸಿನಿಮಾಗೆ ಕೆಲಸ ಮಾಡುತ್ತಿದ್ದಾರೆ. ಮಾಸ್ ಹಾಡುಗಳ ಮೂಲಕ ಅವರು ಜನಪ್ರಿಯತೆ ಪಡೆಯುತ್ತಾ ಇದ್ದಾರೆ. ಈಗ ಬೆಂಗಳೂರಿನಲ್ಲಿ ಅವರು ಮ್ಯೂಸಿಕ್ ಕಾನ್ಸರ್ಟ್ ಆಯೋಜನೆ ಮಾಡಿದ್ದು, ಇದನ್ನು ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರಸ್ತುತಪಡಿಸುತ್ತಿದೆ.

ಇದನ್ನೂ ಓದಿ
Image
‘ಓಂ’ ಚಿತ್ರದ ತಕರಾರು; ರಾಜ್​ಕುಮಾರ್ ಹೇಳಿದ ಒಂದೇ ಮಾತಿಗೆ ಎಲ್ಲರೂ ಸೈಲೆಂಟ್
Image
ಸಿಂಪತಿ ಗಳಿಸಲು ತಮಗೆ ಕಷ್ಟ ಇತ್ತು ಎಂದು ಕಥೆ ಹೇಳಿದ್ರಾ ವಿಕ್ಕಿ ಕೌಶಲ್?
Image
ಚಿತ್ರರಂಗಕ್ಕೆ ಎಂಟ್ರಿ ಕೊಡೋಕೆ ರೆಡಿ ಆದ ರವಿತೇಜ ಮಗಳು ಮೋಕ್ಷಧಾ
Image
‘ಲಕ್ಷ್ಮೀ ಬಾರಮ್ಮ’ ಕೊನೆ ಆಗುವುದಕ್ಕೂ ಮೊದಲು ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ

‘ಹುಕುಂ ಟೂರ್..’ ಎಂದು ಇದಕ್ಕೆ ನಾಮಕರಣ ಮಾಡಲಾಗಿದೆ. ಈಗಾಗಲೇ ಅನಿರುದ್ಧ್ ಅವರು ದುಬೈ, ಆಸ್ಟ್ರೇಲಿಯಾ, ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ ದೇಶಗಳಲ್ಲಿ ಅತ್ಯಂತ ಯಶಸ್ವಿಯಾಗಿ ಟೂರ್ ನಡೆಸಿಕೊಟ್ಟಿದ್ದಾರೆ. ಈ ಟೂರ್ ಈಗ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದೆ. ಬೆಂಗಳೂರಿನಲ್ಲಿ ಮೊದಲ ಶೋ ನಡೆಯಲಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ಅನಿರುದ್ಧ್ ರವಿಚಂದರ್​ಗೆ ಕಿವಿಮಾತು ಹೇಳಿದ ಎಆರ್​ ರೆಹಮಾನ್

ವಿಶೇಷ ದಾಖಲೆ:

ಮೇ 31ರಂದು ಟೆರಾಫಾರ್ಮ್ ಅರೇನಾದಲ್ಲಿ ‘ಹುಕುಂ’ ಕಾನ್ಸರ್ಟ್ ನಡೆಯಿತ್ತಿದೆ. ಇದು ಭಾರತದಲ್ಲಿ ನಡೆಯುತ್ತಿರುವ ಮೊದಲ ಹುಕುಂ ಟೂರ್. ಕೇವಲ 60 ನಿಮಿಷಗಳಲ್ಲಿ ಬರೋಬ್ಬರಿ 16 ಸಾವಿರಕ್ಕೂ ಅಧಿಕ ಟಿಕೆಟ್​ಗಳು ಮಾರಾಟವಾಗಿದೆ ಅನ್ನೋದು ವಿಶೇಷ. ಈ ವಿಚಾರವನ್ನು ಕೆವಿಎನ್ ಸಂಸ್ಥೆಯ ಮುಖ್ಯಸ್ಥ ವೆಂಕಟ್ ಕೆ. ನಾರಾಯಣ ಹೇಳಿದ್ದಾರೆ. ಈ ಮೂಲಕ ಅವರ ಬಗ್ಗೆ ಸಾಕಷ್ಟು ಕ್ರೇಜ್ ಇರೋದು ಗೊತ್ತಾಗೊದೆ.

ಮನೋರಂಜನೆ ವಿಷಯವಾಗಿ ಮತ್ತೊಂದಿಷ್ಟು ಸರ್ಪ್ರೈಸ್ಗಳು ಕೆವಿಎನ್ ಸಂಸ್ಥೆಯ ಕಡೆಯಿಂದ ಬರುವ ನಿರೀಕ್ಷೆಗಳಿವೆ.  ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಅವರು ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ