Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಹೆಸರಿಗೆ ಡ್ರಗ್ಸ್​ ಪಾರ್ಸೆಲ್​ ಬಂದಿದೆ’ ಎಂದು ನಟಿಗೆ 5 ಲಕ್ಷ ರೂ. ವಂಚಿಸಿದ ಸೈಬರ್​ ಖದೀಮ

ಡ್ರಗ್ಸ್​ ಕೇಸ್​ನಲ್ಲಿ ಅನೇಕ ಸೆಲೆಬ್ರಿಟಿಗಳು ವಿಚಾರಣೆ ಎದುರಿಸಿದ್ದಂಟು. ಈ ವಿಚಾರದಲ್ಲಿ ಸೆಲೆಬ್ರಿಟಿಗಳಿಗೆ ಭಯ ಇದೆ. ಆ ಭಯವನ್ನೇ ಬಂಡವಾಳ ಮಾಡಿಕೊಂಡ ಸೈಬರ್​ ಖದೀಮರು ಅಂಜಲಿ ಪಾಟೀಲ್​ಗೆ ಮೋಸ ಮಾಡಿದ್ದಾರೆ. ತಮ್ಮನ್ನು ಪೊಲೀಸರು ಎಂದು ಪರಿಚಯ ಮಾಡಿಕೊಂಡ ಖದೀಮರು ನಟಿಯಿಂದ ಹಣ ವಸೂಲಿ ಮಾಡಿದ್ದಾರೆ.

‘ನಿಮ್ಮ ಹೆಸರಿಗೆ ಡ್ರಗ್ಸ್​ ಪಾರ್ಸೆಲ್​ ಬಂದಿದೆ’ ಎಂದು ನಟಿಗೆ 5 ಲಕ್ಷ ರೂ. ವಂಚಿಸಿದ ಸೈಬರ್​ ಖದೀಮ
ಅಂಜಲಿ ಪಾಟೀಲ್​
Follow us
ಮದನ್​ ಕುಮಾರ್​
|

Updated on: Jan 03, 2024 | 12:01 PM

ಹಲವು ಸೆಲೆಬ್ರಿಟಿಗಳು ಸೈಬರ್​ ಕಿಡಿಗೇಡಿಗಳಿಂದ ತೊಂದರೆ ಅನುಭವಿಸಿದ್ದಾರೆ. ಇನ್ನೂ ಕೆಲವರು ಹಣ ಕಳೆದುಕೊಂಡಿದ್ದಾರೆ. ಖ್ಯಾತ ನಟಿ ಅಂಜಲಿ ಪಾಟೀಲ್ (Anjali Patil) ಅವರಿಗೆ ಈಗ ಮೋಸ ಆಗಿದೆ. ಅವರಿಗೆ ಬರೋಬ್ಬರಿ 5.79 ಕೋಟಿ ರೂಪಾಯಿ ವಂಚನೆ ಮಾಡಲಾಗಿದೆ. ‘ನಿಮ್ಮ ಹೆಸರಿನಲ್ಲಿ ಡ್ರಗ್ಸ್​ ಪಾರ್ಸೆಲ್​ ಬಂದಿದೆ’ ಎಂದು ಹೆದರಿಸುವ ಮೂಲಕ ಸೈಬರ್​ (Cyber Crime) ಖದೀಮರು ಈ ನಟಿಗೆ ಮೋಸ ಮಾಡಿದ್ದಾರೆ. ತಮಗೆ ಈ ರೀತಿ ವಂಚನೆ ಆಗಿದೆ ಎಂಬುದು ಅಂಜಲಿ ಪಾಟೀಲ್ ಅವರಿಗೆ ತಡವಾಗಿ ಗೊತ್ತಾಗಿದೆ. ಅಷ್ಟಕ್ಕೂ ಅವರನ್ನು ಮೋಸದ ಜಾಲಕ್ಕೆ ಬೀಳಿಸಿದ್ದು ಹೇಗೆ ಎಂಬ ಬಗ್ಗೆ ಇಲ್ಲಿದೆ ವಿವರ..

ಡ್ರಗ್ಸ್​ ಕೇಸ್​ನಲ್ಲಿ ಅನೇಕ ಸೆಲೆಬ್ರಿಟಿಗಳು ವಿಚಾರಣೆ ಎದುರಿಸಿದ್ದಂಟು. ಈ ವಿಚಾರದಲ್ಲಿ ಸೆಲೆಬ್ರಿಟಿಗಳಿಗೆ ಭಯ ಇದೆ. ಆ ಭಯವನ್ನೇ ಬಂಡವಾಳ ಮಾಡಿಕೊಂಡ ಸೈಬರ್​ ಖದೀಮರು ಅಂಜಲಿ ಪಾಟೀಲ್​ಗೆ ಮೋಸ ಮಾಡಿದ್ದಾರೆ. ತಮ್ಮನ್ನು ಪೊಲೀಸರು ಎಂದು ಪರಿಚಯ ಮಾಡಿಕೊಂಡ ಖದೀಮರು ನಟಿಯಿಂದ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 854 ಕೋಟಿ ರೂ. ವಂಚನೆ ಪ್ರಕರಣ ಭೇದಿಸಿದ ಸಿಸಿಬಿ: ಆರೋಪಿಗಳು ಜನರಿಗೆ ವಂಚಿಸಿದ್ದು ಹೇಗೆ? ಇಲ್ಲಿದೆ ಸೈಬರ್​ ಕಹಾನಿ

ದೀಪಕ್​ ಶರ್ಮಾ ಎಂಬ ವ್ಯಕ್ತಿಯು ಅಂಜಲಿ ಪಾಟೀಲ್ ಅವರಿಗೆ ಕರೆ ಮಾಡಿ ‘ನಿಮ್ಮ ಆಧಾರ್​ ಕಾರ್ಡ್​ನೊಂದಿಗೆ ಡ್ರಗ್ಸ್​ ಪಾರ್ಸೆಲ್​ ಸಿಕ್ಕಿದೆ. ನೀವು ಮುಂಬೈ ಸೈಬರ್​ ಪೊಲೀಸರನ್ನು ಸಂಪರ್ಕಿಸಿ’ ಎಂದು ಹೇಳಿದ್ದಾನೆ. ನಂತರ ತಾನು ಮುಂಬೈ ಸೈಬರ್​ ಪೊಲೀಸ್​ ಅಧಿಕಾರಿ ಎಂದು ಹೇಳಿಕೊಂಡು ಬ್ಯಾನರ್ಜಿ ಎಂಬ ವ್ಯಕ್ತಿ ಅಂಜಲಿಗೆ ಕರೆ ಮಾಡಿದ್ದಾನೆ. ‘ನಿಮ್ಮ ಆಧಾರ್​ ಸಂಖ್ಯೆಗೆ ಲಿಂಕ್​ ಆಗಿರುವ ಮೂರು ಬ್ಯಾಂಕ್​ಗಳಲ್ಲಿ ಅಕ್ರಮ ಹಣ ವರ್ಗಾವಣೆ ಆಗಿದೆ. ಅದರ ಪರಿಶೀಲನೆ ಮಾಡಲು ನೀವು ನಮಗೆ 96,525 ರೂಪಾಯಿ ವರ್ಗಾವಣೆ ಮಾಡಬೇಕು’ ಎಂದು ಬೇಡಿಕೆ ಇಟ್ಟಿದ್ದಾನೆ.

ಇದನ್ನೂ ಓದಿ: Cyber Crime: ಸೈಬರ್​ ವಂಚಕರ ಜಾಲಕ್ಕೆ ಸಿಲುಕಿ 1.98 ಕೋಟಿ ರೂ. ಕಳೆದುಕೊಂಡ ಉದ್ಯಮಿ

‘ನಿಮ್ಮ ಜೊತೆ ಬ್ಯಾಂಕ್​ ಅಧಿಕಾರಿಗಳು ಕೂಡ ಶಾಮೀಲು ಆಗಿದ್ದಾರೆ’ ಎಂದು ನಟಿಗೆ ಸೈಬರ್​ ಕಿಡಿಗೇಡಿ ಹೆದರಿಸಿದ್ದಾನೆ. ಕೇಸ್​ ಕ್ಲೋಸ್​ ಮಾಡಲು 4,83,291 ರೂಪಾಯಿಯನ್ನು ನಟಿಯಿಂದ ಪಡೆದುಕೊಂಡಿದ್ದಾನೆ. ಖದೀಮರು ಹೇಳಿದ್ದನ್ನು ನಿಜ ಎಂದು ನಂಬಿ, ಪೊಲೀಸ್​ ಕೇಸ್​ ತಪ್ಪಿಸಲು ಅಂಜಲಿ ಪಾಟೀಲ್ ಅವರು ಈ ಹಣವನ್ನು ನೀಡಿದ್ದಾರೆ. ನಂತರ ತಾವು ಮೋಸ ಹೋಗಿರುವುದು ಅವರಿಗೆ ತಿಳಿದುಬಂದಿದೆ. ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ