AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿಗೆ ಎರಡು ಮದುವೆ ಮತ್ತು ಸಂಸಾರದ ದುರಂತ ಅಂತ್ಯ, ಈಗ ಲಿವ್​-ಇನ್ ರಿಲೇಶನ್​ಶಿಪ್

ಪ್ರಸಿದ್ಧ ಮಲಯಾಳಂ ನಟಿ ಅಂಜು ಅರವಿಂದ್ ಅವರು ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಬಹಿರಂಗಪಡಿಸಿದ್ದಾರೆ. ಎರಡು ವಿಫಲ ಮದುವೆಗಳ ನಂತರ, ಅವರು ಐದು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿ ಸಂತೋಷದಿಂದ ಇದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನೃತ್ಯ ಅಕಾಡೆಮಿಯನ್ನು ನಡೆಸುತ್ತಿರುವ ಅವರು, ತಮ್ಮ ಸಂಗಾತಿ ಸಂಜಯ್ ಅಂಬಾಲ ಪರಂಬತ್ ಜೊತೆಗಿನ ಪ್ರೇಮಕಥೆಯನ್ನು ಹಂಚಿಕೊಂಡಿದ್ದಾರೆ.

ಖ್ಯಾತ ನಟಿಗೆ ಎರಡು ಮದುವೆ ಮತ್ತು ಸಂಸಾರದ ದುರಂತ ಅಂತ್ಯ, ಈಗ ಲಿವ್​-ಇನ್ ರಿಲೇಶನ್​ಶಿಪ್
ಅಂಜು
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 03, 2025 | 10:13 AM

Share

ದಕ್ಷಿಣದಲ್ಲಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಇವರು, ಮೋಹನ್​ಲಾಲ್ (Mohanlal), ಮಮ್ಮೂಟ್ಟಿ, ರಜನಿಕಾಂತ್ ಜೊತೆ ತೆರೆ ಹಂಚಿಕೊಂಡರು. ಅವರೇ ಅಂಜು ಅರವಿಂದ್. ಅವರು ಮಲಯಾಳಂ ನಟಿ. ಸದ್ಯ ಬೆಂಗಳೂರಿನಲ್ಲಿ ಇದ್ದಾರೆ. ಅವರು ಡ್ಯಾನ್ಸರ್ ಕೂಡ ಹೌದು. ಅಂಜು ಅವರು ಇತ್ತೀಚೆಗೆ ಸಂದರ್ಶನದಲ್ಲಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದರು. ಅವರ ವೈಯಕ್ತಿಕ ಜೀವನದ ವಿಚಾರಗಳನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ.

ಅಂಜು ಅವರು ಎರಡು ಬಾರಿ ಮದುವೆ ಆದರು. ಆದರೆ, ಎರಡೂ ಮದುವೆ ದುರಂತ ಅಂತ್ಯ ಕಂಡಿತು. ಮೊದಲ ಪತಿ ವಿಚ್ಛೇದನ ಪಡೆದರೆ ಎರಡನೇ ಪತಿ ನಿಧನ ಹೊಂದಿದರು. ಈಗ ಅವರು ಕಳೆದ ಐದು ವರ್ಷಗಳಿಂದ ಲಿವ್​-ಇನ್ ರಿಲೇಶನ್​ಶಿಪ್​ನಲ್ಲಿ ಇದ್ದಾರೆ ಮತ್ತು ಈಗ ಅವರು ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ.

‘ನನ್ನ ಮೊದಲ ಮದುವೆ ವಿಚ್ಛೇದನದಲ್ಲಿ ಕೊನೆಗೊಂಡಿತು. ನನಗೆ ಎರಡನೇ ಮದುವೆಯಾಯಿತು, ಆದರೆ ನನ್ನ ಪತಿ ತೀರಿಕೊಂಡರು. ನಾನು ಪ್ರಸ್ತುತ ಲಿವ್-ಇನ್ ಸಂಬಂಧದಲ್ಲಿದ್ದೇನೆ. ನನ್ನ ಸಂಗಾತಿಯ ಹೆಸರು ಸಂಜಯ್ ಅಂಬಾಲ ಪರಂಬತ್. ಕಳೆದ ಐದು ವರ್ಷಗಳಿಂದ ನಾವು ಸಂತೋಷದಿಂದ ಒಟ್ಟಿಗೆ ವಾಸಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನೃತ್ಯ ಶಿಕ್ಷಕಿಯಾಗಿ ನನಗೆ ಸ್ಥಾನ ನೀಡಿದರು. ನಾನು 8 ನೇ ತರಗತಿಯಲ್ಲಿದ್ದಾಗ ಸಂಜಯ್ ನನ್ನ ಮೊದಲ ಕ್ರಶ್ ಆಗಿದ್ದರು. ನಮ್ಮ ಕಥೆಯನ್ನು ಚಲನಚಿತ್ರವಾಗಿ ಮಾಡಬಹುದು’ ಎಂದು ಹೇಳಿಕೊಂಡರು.

ಇದನ್ನೂ ಓದಿ
Image
ತಮಿಳಿಗರಿಗೆ ಕಮಲ್ ಅಭಿಮಾನಿಗಳಿಂದ ಓಪನ್ ಪತ್ರ; ಎಚ್ಚರಿಕೆಯ ಸಂದೇಶ ರವಾನೆ
Image
‘ನಾನು ಕರ್ನಾಟಕದವನು, ನನ್ನ ಅವ್ವ ಇಲ್ಲೇ ಇರೋದು’: ಇಳಯರಾಜ ಕನ್ನಡ ಪ್ರೇಮ
Image
ಒಟಿಟಿಯಲ್ಲಿ ರಿಲೀಸ್ ಆದ ಈ ಕಾಮಿಡಿ ಚಿತ್ರವನ್ನು ಮಿಸ್ ಮಾಡಲೇಬೇಡಿ
Image
ಹೈ-ಟೀ ಸಮಾರಂಭದಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಅನಂತ್ ನಾಗ್​

ಇದನ್ನೂ ಓದಿ: ಮಗನಿಗಾಗಿ ಒಂದಾದ ಧನುಷ್, ಐಶ್ವರ್ಯಾ ರಜನಿಕಾಂತ್; ಫೋಟೋ ವೈರಲ್

‘ನಾವಿಬ್ಬರೂ ಒಟ್ಟಿಗೆ ನೋಡಿದ 96 ಸಿನಿಮಾ (ಸಿ ಪ್ರೇಮ್ ಕುಮಾರ್ ನಿರ್ದೇಶನದ ಮತ್ತು ವಿಜಯ್ ಸೇತುಪತಿ ಮತ್ತು ತ್ರಿಶಾ ಕೃಷ್ಣನ್ ನಟನೆಯ ಚಿತ್ರ) ತುಂಬಾ ಇಷ್ಟವಾಯಿತು. ಆ ಸಿನಿಮಾ ನೋಡಿದಾಗ ನನ್ನ ಶಾಲಾ ದಿನಗಳು ನೆನಪಾದವು. ಸಂಜಯ್ ಕೂಡ ಒಬ್ಬ ಡ್ಯಾನ್ಸರ್. ಅವರು ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರು. ಈಗ ನಿವೃತ್ತರಾಗಿದ್ದಾರೆ. ನಾವು ಮೊದಲು ಭೇಟಿಯಾದದ್ದು ನೃತ್ಯ ತರಗತಿಯಲ್ಲಿ. ಆಗ ಮೊಬೈಲ್ ಫೋನ್‌ಗಳು ಇರಲಿಲ್ಲ. ಹೀಗಾಗಿ, ನಾವು ಬೇರೆ ಬೇರೆಯಾದೆವು. ಆದರೆ ಕೊನೆಗೆ ನಾವು ಪರಸ್ಪರ ದಾರಿ ಕಂಡುಕೊಂಡೆವು. ಬೆಂಗಳೂರಿನಲ್ಲಿರುವ ನನ್ನ ನೃತ್ಯ ಅಕಾಡೆಮಿಗೆ ಅವರೇ ಹೆಸರಿಟ್ಟರು. ಇದನ್ನು ಅಂಜು ಅರವಿಂದ್ ಅಕಾಡೆಮಿ ಆಫ್ ಡ್ಯಾನ್ಸ್ ಎಂದು ಕರೆಯಲಾಗುತ್ತದೆ’ ಎಂದಿದ್ದಾರೆ ಅವರು. ಈ ನಟಿ ಕನ್ನಡದಲ್ಲೂ ಕೆಲ ಸಿನಿಮಾ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!