AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?

ದೇಶದಲ್ಲಿ ಕೊವಿಡ್​ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಿದ್ದರೂ ಕೂಡ ರಜನಿಕಾಂತ್​ ಈ ಸಮಯದಲ್ಲಿ ರಿಸ್ಕ್​ ತೆಗೆದುಕೊಂಡು ಅಮೆರಿಕಕ್ಕೆ ಹೋಗಿದ್ದಾರೆ. ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ಅವರ ಫೋಟೋ, ವಿಡಿಯೋ ವೈರಲ್​ ಆಗಿದೆ.

ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?
ರಜನಿಕಾಂತ್​
ಮದನ್​ ಕುಮಾರ್​
|

Updated on: Jun 19, 2021 | 4:39 PM

Share

ಭಾರತೀಯ ಚಿತ್ರರಂಗದ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಶನಿವಾರ (ಜೂ.19) ಮುಂಜಾನೆ ಸದ್ದಿಲ್ಲದೇ ವಿದೇಶಕ್ಕೆ ಹಾರಿದ್ದಾರೆ. ಇಷ್ಟು ದಿನಗಳ ಕಾಲ ದೇಶದಲ್ಲಿ ಕೊರೊನಾ ಎರಡನೇ ಅಲೆ ತಾಂಡವ ಆಡುತ್ತಿತ್ತು. ಈಗ ನಿಧಾನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ. ಈ ಸಂದರ್ಭದಲ್ಲಿ ರಜನಿಕಾಂತ್ ಅಮೆರಿಕಕ್ಕೆ ತೆರಳಿದ್ದಾರೆ. ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಕೆಲವು ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ರಜನಿಕಾಂತ್​ ಜೊತೆ ಅವರ ಪತ್ನಿ ಲತಾ ಕೂಡ ಅಮೆರಿಕದ ವಿಮಾನ ಹತ್ತಿದ್ದಾರೆ.

ಅಷ್ಟಕ್ಕೂ ರಜನಿಕಾಂತ್​ ಹೀಗೆ ಏಕಾಏಕಿ ಅಮೆರಿಕಕ್ಕೆ ತೆರಳಿರುವುದು ಏಕೆ? ಯಾವುದೇ ಸಿನಿಮಾ ಶೂಟಿಂಗ್​ ಸಲುವಾಗಿ ಅವರು ಅಲ್ಲಿಗೆ ಹೋಗಿಲ್ಲ. ಬದಲಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಹೋಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆರೋಗ್ಯ ತಪಾಸಣೆ ಎಂದ ಮಾತ್ರಕ್ಕೆ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಕೂಡ ಇಲ್ಲ. ಅವರು ಚೆನ್ನಾಗಿಯೇ ಇದ್ದಾರೆ. ಸಹಜವಾಗಿ ಕೆಲವು ಚೆಕಪ್​ ಮತ್ತು ಟೆಸ್ಟ್​ ಮಾಡಿಸಿಕೊಳ್ಳಲು ಅವರು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊವಿಡ್​ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಿದ್ದರೂ ಕೂಡ ರಜನಿಕಾಂತ್​ ಈ ಸಮಯದಲ್ಲಿ ರಿಸ್ಕ್​ ತೆಗೆದುಕೊಂಡು ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಿದ್ದಾರೆ ಎಂದರೆ ಏನೋ ಸಮಸ್ಯೆ ಖಂಡಿತಾ ಇರಬೇಕು ಎಂದು ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ನಂತರದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ರಜನಿಕಾಂತ್​ ನಟಿಸುತ್ತಿದ್ದ ‘ಅಣ್ಣಾಥೆ’ ಸಿನಿಮಾದ ಕೆಲಸಗಳಿಗೆ ಕೊರೊನಾ ವೈರಸ್​ ಕಾರಣದಿಂದ ಬ್ರೇಕ್​ ಹಾಕಲಾಗಿದೆ. ರಾಜಕೀಯದ ಚಟುವಟಿಕೆಗಳಿಂದಲೂ ಅವರು ಸದ್ಯಕ್ಕೆ ಹಿಂದೆ ಸರಿದಿದ್ದಾರೆ. ರಜನಿಕಾಂತ್​ ಅಳಿಯ, ನಟ ಧನುಷ್​ ಅವರು ತಮ್ಮ ಹಾಲಿವುಡ್​ ಸಿನಿಮಾ ಶೂಟಿಂಗ್​ ಸಲುವಾಗಿ ಈ ಮೊದಲೇ ಕುಟುಂಬ ಸಮೇತ ಅಮೆರಿಕಕ್ಕೆ ತೆರಳಿದ್ದರು. ರಜನಿಕಾಂತ್​ ಅವರ ಆರೋಗ್ಯ ತಪಾಸಣೆ ವೇಳೆ ಅವರು ಜೊತೆಗಿರಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಜು.8ರಂದು ಅವರು ಭಾರತಕ್ಕೆ ವಾಪಸ್​ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ