AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?

ದೇಶದಲ್ಲಿ ಕೊವಿಡ್​ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಿದ್ದರೂ ಕೂಡ ರಜನಿಕಾಂತ್​ ಈ ಸಮಯದಲ್ಲಿ ರಿಸ್ಕ್​ ತೆಗೆದುಕೊಂಡು ಅಮೆರಿಕಕ್ಕೆ ಹೋಗಿದ್ದಾರೆ. ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ಅವರ ಫೋಟೋ, ವಿಡಿಯೋ ವೈರಲ್​ ಆಗಿದೆ.

ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?
ರಜನಿಕಾಂತ್​
ಮದನ್​ ಕುಮಾರ್​
|

Updated on: Jun 19, 2021 | 4:39 PM

Share

ಭಾರತೀಯ ಚಿತ್ರರಂಗದ ಸೂಪರ್​ ಸ್ಟಾರ್​ ರಜನಿಕಾಂತ್​ ಅವರು ಶನಿವಾರ (ಜೂ.19) ಮುಂಜಾನೆ ಸದ್ದಿಲ್ಲದೇ ವಿದೇಶಕ್ಕೆ ಹಾರಿದ್ದಾರೆ. ಇಷ್ಟು ದಿನಗಳ ಕಾಲ ದೇಶದಲ್ಲಿ ಕೊರೊನಾ ಎರಡನೇ ಅಲೆ ತಾಂಡವ ಆಡುತ್ತಿತ್ತು. ಈಗ ನಿಧಾನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ. ಈ ಸಂದರ್ಭದಲ್ಲಿ ರಜನಿಕಾಂತ್ ಅಮೆರಿಕಕ್ಕೆ ತೆರಳಿದ್ದಾರೆ. ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು, ಕೆಲವು ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ರಜನಿಕಾಂತ್​ ಜೊತೆ ಅವರ ಪತ್ನಿ ಲತಾ ಕೂಡ ಅಮೆರಿಕದ ವಿಮಾನ ಹತ್ತಿದ್ದಾರೆ.

ಅಷ್ಟಕ್ಕೂ ರಜನಿಕಾಂತ್​ ಹೀಗೆ ಏಕಾಏಕಿ ಅಮೆರಿಕಕ್ಕೆ ತೆರಳಿರುವುದು ಏಕೆ? ಯಾವುದೇ ಸಿನಿಮಾ ಶೂಟಿಂಗ್​ ಸಲುವಾಗಿ ಅವರು ಅಲ್ಲಿಗೆ ಹೋಗಿಲ್ಲ. ಬದಲಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಹೋಗಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಆರೋಗ್ಯ ತಪಾಸಣೆ ಎಂದ ಮಾತ್ರಕ್ಕೆ ಅಭಿಮಾನಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಕೂಡ ಇಲ್ಲ. ಅವರು ಚೆನ್ನಾಗಿಯೇ ಇದ್ದಾರೆ. ಸಹಜವಾಗಿ ಕೆಲವು ಚೆಕಪ್​ ಮತ್ತು ಟೆಸ್ಟ್​ ಮಾಡಿಸಿಕೊಳ್ಳಲು ಅವರು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೊವಿಡ್​ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಹಾಗಿದ್ದರೂ ಕೂಡ ರಜನಿಕಾಂತ್​ ಈ ಸಮಯದಲ್ಲಿ ರಿಸ್ಕ್​ ತೆಗೆದುಕೊಂಡು ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಿದ್ದಾರೆ ಎಂದರೆ ಏನೋ ಸಮಸ್ಯೆ ಖಂಡಿತಾ ಇರಬೇಕು ಎಂದು ಕೆಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ನಂತರದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ರಜನಿಕಾಂತ್​ ನಟಿಸುತ್ತಿದ್ದ ‘ಅಣ್ಣಾಥೆ’ ಸಿನಿಮಾದ ಕೆಲಸಗಳಿಗೆ ಕೊರೊನಾ ವೈರಸ್​ ಕಾರಣದಿಂದ ಬ್ರೇಕ್​ ಹಾಕಲಾಗಿದೆ. ರಾಜಕೀಯದ ಚಟುವಟಿಕೆಗಳಿಂದಲೂ ಅವರು ಸದ್ಯಕ್ಕೆ ಹಿಂದೆ ಸರಿದಿದ್ದಾರೆ. ರಜನಿಕಾಂತ್​ ಅಳಿಯ, ನಟ ಧನುಷ್​ ಅವರು ತಮ್ಮ ಹಾಲಿವುಡ್​ ಸಿನಿಮಾ ಶೂಟಿಂಗ್​ ಸಲುವಾಗಿ ಈ ಮೊದಲೇ ಕುಟುಂಬ ಸಮೇತ ಅಮೆರಿಕಕ್ಕೆ ತೆರಳಿದ್ದರು. ರಜನಿಕಾಂತ್​ ಅವರ ಆರೋಗ್ಯ ತಪಾಸಣೆ ವೇಳೆ ಅವರು ಜೊತೆಗಿರಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಜು.8ರಂದು ಅವರು ಭಾರತಕ್ಕೆ ವಾಪಸ್​ ಬರಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್