AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲೆಕ್ಷನ್​ ವಿಚಾರದಲ್ಲಿ ಎಲ್ಲಾ ದಾಖಲೆ ಪುಡಿ ಮಾಡಿದ ‘ಅಣ್ಣಾಥೆ’; ಇಲ್ಲಿದೆ ರಜನಿ ಚಿತ್ರದ ಮೊದಲ ದಿನದ ಗಳಿಕೆ

‘ಅಣ್ಣಾಥೆ' ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ.

ಕಲೆಕ್ಷನ್​ ವಿಚಾರದಲ್ಲಿ ಎಲ್ಲಾ ದಾಖಲೆ ಪುಡಿ ಮಾಡಿದ ‘ಅಣ್ಣಾಥೆ’; ಇಲ್ಲಿದೆ ರಜನಿ ಚಿತ್ರದ ಮೊದಲ ದಿನದ ಗಳಿಕೆ
ರಜನಿಕಾಂತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 05, 2021 | 5:22 PM

Share

ರಜನಿಕಾಂತ್​ ನಟನೆಯ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತದೆ. ಅವರಿಗೆ ಇರುವ ದೊಡ್ಡ ಫ್ಯಾನ್​ಬೇಸ್​ ಇದಕ್ಕೆಲ್ಲ ಕಾರಣ. ಈಗ ದೀಪಾವಳಿ ನಿಮಿತ್ತ ನವೆಂಬರ್​ 4ರಂದು ರಿಲೀಸ್​ ಆಗಿರುವ ‘ಅಣ್ಣಾಥೆ’ ಸಿನಿಮಾ ಕಲೆಕ್ಷನ್​ ವಿಚಾರದಲ್ಲಿ ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದೆ. ಮೊದಲ ದಿನವೇ ಈ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಹಾಗಾದರೆ, ರಜನಿ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ. ಕರ್ನಾಟಕ ಹಾಗೂ ಆಂಧ್ರ ಸೇರಿ ಮತ್ತಿತರ ರಾಜ್ಯಗಳಲ್ಲೂ ಈ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಿದೆ. ಮೊದಲ ದಿನ ಈ ಚಿತ್ರ ಗಳಿಕೆ ಮಾಡಿದ್ದು ಬರೋಬ್ಬರಿ 34.92 ಕೋಟಿ ರೂ. ಎನ್ನಲಾಗಿದೆ. ಈ ಮೂಲಕ ರಜನಿ ಸಿನಿಮಾ ಎಲ್ಲಾ ದಾಖಲೆಗಳನ್ನು ಪುಡಿ ಮಾಡಿದೆ. ತಮಿಳುನಾಡಿನಲ್ಲಿ ಮೊದಲ ದಿನ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂಬ ಖ್ಯಾತಿ ‘ಅಣ್ಣಾಥೆ’ ಪಾಲಾಗಿದೆ.

ರಜನಿಕಾಂತ್‌ ನಟನೆಯ  ಈ ಹಿಂದಿನ ಚಿತ್ರಗಳು ಒಳ್ಳೆಯ ಗಳಿಕೆ ಮಾಡಿದ್ದವು. ಆದರೆ, ಈ ಮಟ್ಟದ ಕಲೆಕ್ಷನ್​ ಆಗಿರಲಿಲ್ಲ. ಅವರ ನಟನೆಯ ‘2.0′ ಸಿನಿಮಾ ಮೊದಲ ದಿನ ತಮಿಳುನಾಡಿನಲ್ಲಿ 33.58 ಕೋಟಿ ರೂ. ಗಳಿಸಿತ್ತು. ಹಾಗೆಯೇ, ದಳಪತಿ ವಿಜಯ್  ನಟನೆಯ ‘ಸರ್ಕಾರ್’ ಸಿನಿಮಾ 31.62 ಕೋಟಿ ರೂ. ಗಳಿಸಿತ್ತು. ಉಳಿದ ಯಾವ ಸಿನಿಮಾಗಳು ‘ಅಣ್ಣಾಥೆ’ ಮಟ್ಟಕ್ಕೆ ಗಳಿಕೆ ಮಾಡಿಲ್ಲ. ‘ಅಣ್ಣಾಥೆ’ ಸಿನಿಮಾ ರಜನಿ ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ಆಗಿದೆ.

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬಂದಿದೆ. ಈಗ ಸಾಲು ಸಾಲು ರಜೆ ಇರುವುದರಿಂದ ಸಿನಿಮಾ ಗಳಿಕೆ ಅನಾಯಾಸವಾಗಿ 50 ಕೋಟಿ ರೂಪಾಯಿ ದಾಟಲಿದೆ.

ಇದನ್ನೂ ಓದಿ:Puneeth Rajkumar: ಪುನೀತ್​ ಆಸ್ಪತ್ರೆಗೆ ಹೊರಟಾಗ ಮನೆಯಲ್ಲಿ ಮೂಡಿತ್ತು ಆತಂಕದ ವಾತಾವರಣ; ಇಲ್ಲಿದೆ ಸಿಸಿಟಿವಿ ದೃಶ್ಯಾವಳಿ 

ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ