AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ ‘ಅಣ್ಣಾಥೆ’; ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದ ರಜನಿ ಸಿನಿಮಾ

Annaatthe Movie Collection: ಇಂದು (ನವೆಂಬರ್​ 7) ಸಿನಿಮಾ ಕಲೆಕ್ಷನ್​ ಹೆಚ್ಚುವ ಸಾಧ್ಯತೆ ಇದೆ. ಇಂದು ಭಾನುವಾರ. ಅಲ್ಲದೆ, ಹಬ್ಬದ ಸಮಯ. ವೀಕೆಂಡ್​ ಆದ್ದರಿಂದ ಜನರು ಚಿತ್ರಮಂದಿರದತ್ತ ಹೆಚ್ಚು ಹೆಜ್ಜೆ ಹಾಕಿದ್ದಾರೆ. ಹೀಗಾಗಿ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ ‘ಅಣ್ಣಾಥೆ’; ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದ ರಜನಿ ಸಿನಿಮಾ
ರಜನಿಕಾಂತ್​
TV9 Web
| Edited By: |

Updated on: Nov 07, 2021 | 5:04 PM

Share

ರಜನಿಕಾಂತ್​ ನಟನೆಯ ‘ಅಣ್ಣಾಥೆ’ ದೀಪಾವಳಿ ನಿಮಿತ್ತ ನವೆಂಬರ್​ 4ರಂದು ರಿಲೀಸ್​ ಆಗಿತ್ತು. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡುತ್ತಿದೆ. ಮೊದಲ ದಿನವೇ ಅದ್ಭುತ ಗಳಿಕೆ ಮಾಡಿದ್ದ ಈ ಚಿತ್ರದ ಗಳಿಕೆ ಮೂರು ದಿನಗಳಲ್ಲಿ 150 ಕೋಟಿ ರೂಪಾಯಿ ಸಮೀಪಿಸಿದೆ. ಇದನ್ನು ಕೇಳಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ. ಶೀಘ್ರದಲ್ಲೇ ಸಿನಿಮಾ 200 ಕೋಟಿ ಕ್ಲಬ್​ ಸೇರುವ ಸಾಧ್ಯತೆ ಇದೆ.

‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ತಮಿಳುನಾಡು ಒಂದರಲ್ಲೇ 800ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ರಜನಿಕಾಂತ್ ಸಿನಿಮಾ ತೆರೆಗೆ ಬಂದಿದೆ. ಕರ್ನಾಟಕ ಹಾಗೂ ಆಂಧ್ರ ಸೇರಿ ಮತ್ತಿತರ ರಾಜ್ಯಗಳಲ್ಲೂ ಈ ಸಿನಿಮಾ ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಿದೆ. ವಿಶ್ವ ಮಟ್ಟದಲ್ಲಿ ಈ ಸಿನಿಮಾ ಮೊದಲ ದಿನ 70 ಕೋಟಿ ಗಳಿಕೆ ಮಾಡಿತ್ತು. ನವೆಂಬರ್​​ 5ರಂದು ಸಿನಿಮಾ 42.6 ಕೋಟಿ ರೂಪಾಯಿ, ನವೆಂಬರ್​ 6ರಂದು ಚಿತ್ರ 33.71 ಕೋಟಿ ಗಳಿಸಿದೆ. ಈ ಮೂಲಕ ಸಿನಿಮಾದ ಒಟ್ಟೂ ಗಳಿಕೆ 146.53 ಆಗಿದೆ.

ಇಂದು (ನವೆಂಬರ್​ 7) ಸಿನಿಮಾ ಕಲೆಕ್ಷನ್​ ಹೆಚ್ಚುವ ಸಾಧ್ಯತೆ ಇದೆ. ಇಂದು ಭಾನುವಾರ. ಅಲ್ಲದೆ, ಹಬ್ಬದ ಸಮಯ. ವೀಕೆಂಡ್​ ಆದ್ದರಿಂದ ಜನರು ಚಿತ್ರಮಂದಿರದತ್ತ ಹೆಚ್ಚು ಹೆಜ್ಜೆ ಹಾಕಿದ್ದಾರೆ. ಹೀಗಾಗಿ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಇಂದಿನ ಕಲೆಕ್ಷನ್​ ಸೇರಿದರೆ ಸಿನಿಮಾದ ಗಳಿಕೆ 150 ಕೋಟಿ ರೂಪಾಯಿ ದಾಟಲಿದೆ. ಶೀಘ್ರವೇ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ.

‘ಅಣ್ಣಾಥೆ’ ಸಿನಿಮಾವನ್ನು ಸನ್​ ಪಿಕ್ಚರ್ಸ್​ ನಿರ್ಮಾಣ ಮಾಡಿದೆ. ರಜನಿಕಾಂತ್​, ಕೀರ್ತಿ ಸುರೇಶ್​, ನಯನತಾರಾ, ಮೀನಾ, ಖುಷ್ಬು, ಪ್ರಕಾಶ್ ರಾಜ್, ಜಗಪತಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ದೀಪಾವಳಿ ನಿಮಿತ್ತ ಈ ಸಿನಿಮಾ ನವೆಂಬರ್​ 4ರಂದು ತೆರೆಗೆ ಬಂದಿದೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: Tamilrockersನಲ್ಲಿ ಅಕ್ಷಯ್​ ಕುಮಾರ್​ ನಟನೆಯ ‘ಸೂರ್ಯವಂಶಿ’ ಸಿನಿಮಾ ಲೀಕ್

ಕಲೆಕ್ಷನ್​ ವಿಚಾರದಲ್ಲಿ ಎಲ್ಲಾ ದಾಖಲೆ ಪುಡಿ ಮಾಡಿದ ‘ಅಣ್ಣಾಥೆ’; ಇಲ್ಲಿದೆ ರಜನಿ ಚಿತ್ರದ ಮೊದಲ ದಿನದ ಗಳಿಕೆ

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ