AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿದ್ದ ಚಿತ್ರಮಂದಿರಗಳ ವಹಿವಾಟಿಗೆ ಮರುಜೀವ ನೀಡಿದ ಅಣ್ಣಾಥೆ, ಸೂರ್ಯವಂಶಿ, ಎಟರ್ನಲ್ಸ್​

ಅಣ್ಣಾಥೆ, ಸೂರ್ಯವಂಶಿ ಮತ್ತು ಎಟರ್ನಲ್ಸ್​ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿವೆ. ಆ ಮೂಲಕ ನಿರ್ಮಾಪಕರು ಓಟಿಟಿ ಬದಲು ಮತ್ತೆ ಚಿತ್ರಮಂದಿರಗಳ ಕಡೆಗೆ ಮನಸ್ಸು ಮಾಡುವಂತಾಗಿದೆ.

ಮಂಕಾಗಿದ್ದ ಚಿತ್ರಮಂದಿರಗಳ ವಹಿವಾಟಿಗೆ ಮರುಜೀವ ನೀಡಿದ ಅಣ್ಣಾಥೆ, ಸೂರ್ಯವಂಶಿ, ಎಟರ್ನಲ್ಸ್​
ಅಣ್ಣಾಥೆ, ಸೂರ್ಯವಂಶಿ, ಎಟರ್ನಲ್ಸ್​
Follow us
TV9 Web
| Updated By: ಮದನ್​ ಕುಮಾರ್​

Updated on: Nov 11, 2021 | 2:44 PM

ಕೊರೊನಾ ಹಾವಳಿ ಶುರುವಾದ ಬಳಿಕ ಜಗತ್ತಿನಲ್ಲಿ ಅನೇಕ ಬದಲಾವಣೆಗಳಾದವು. ಪ್ರತಿ ದಿನ ಕೋಟ್ಯಂತರ ರೂಪಾಯಿ ವ್ಯವಹಾರ ಮಾಡುತ್ತಿದ್ದ ಉದ್ಯಮಗಳೆಲ್ಲ ನೆಲಕಚ್ಚಿದ್ದವು. ಚಿತ್ರಮಂದಿರಗಳ ಬ್ಯುಸಿನೆಸ್​ ಮೇಲೆ ಲಾಕ್​ಡೌನ್​ ತೀವ್ರ ಥರದಲ್ಲಿ ಕೆಟ್ಟ ಪರಿಣಾಮ ಬೀರಿತ್ತು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಎರಡನೇ ಲಾಕ್​ಡೌನ್​ ಎದುರಾಗಿತ್ತು. ಈಗ ಕೊರೊನಾ ಕಾಟ ನಿಧಾನಕ್ಕೆ ಕಡಿಮೆ ಆಗಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಲಾಗಿದೆ. ಇದೆಲ್ಲದರ ಪರಿಣಾಮವಾಗಿ ಚಿತ್ರಮಂದಿರಗಳ ವಹಿವಾಟು ಗಣನೀಯವಾಗಿ ಚೇತರಿಕೆ ಕಂಡಿದೆ. ಅದರಲ್ಲೂ ರಜನಿಕಾಂತ್​ ನಟನೆಯ ‘ಅಣ್ಣಾಥೆ’ (Annaatthe), ಅಕ್ಷಯ್​ ಕುಮಾರ್​ ಅಭಿನಯದ ‘ಸೂರ್ಯವಂಶಿ’ (Sooryavanshi) ಹಾಗೂ ಹಾಲಿವುಡ್​ನ ಎಟರ್ನಲ್ಸ್​ (Eternals) ಸಿನಿಮಾಗಳು ನಿಜಕ್ಕೂ ಮೋಡಿ ಮಾಡಿವೆ. ನೂರಾರು ಕೋಟಿ ರೂಪಾಯಿ ಗಳಿಸುವ ಮೂಲಕ ಚಿತ್ರಮಂದಿರಗಳಲ್ಲಿ ಮತ್ತೆ ಹಳೇ ಚಾರ್ಮ್​ ಮರಳುವಂತಾಗಿದೆ.

‘ಅಣ್ಣಾಥೆ’ ಬೊಕ್ಕಸಕ್ಕೆ 200 ಕೋಟಿ ರೂ.!

ಈ ವರ್ಷದ ದೀಪಾವಳಿಯಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳು ತೆರೆಕಂಡವು. ನ.4ರಂದು ರಜನಿಕಾಂತ್​ ಅಭಿನಯದ ‘ಅಣ್ಣಾಥೆ’ ಚಿತ್ರ ತೆರೆಕಂಡು ಧೂಳೆಬ್ಬಿಸಿತು. ಒಂದು ವಾರದಲ್ಲಿ ಈ ಸಿನಿಮಾ ವಿಶ್ವಾದ್ಯಂತ 200 ಕೋಟಿ ರೂ. ಗಳಿಸಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ರಜನಿಕಾಂತ್​ ಜೊತೆ ಕೀರ್ತಿ ಸುರೇಶ್​, ನಯನತಾರಾ, ಜಗಪತಿ ಬಾಬು, ಪ್ರಕಾಶ್​ ರಾಜ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಸದ್ಯ ತಮಿಳುನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಗಲ್ಲಾಪೆಟ್ಟಿಗೆ ಗಳಿಕೆ ಸ್ವಲ್ಪ ಕುಸಿದಿದೆ.

‘ಸೂರ್ಯವಂಶಿ’ ಮೂಲಕ ಗೆದ್ದು ಬೀಗಿದ ಅಕ್ಷಯ್​ ಕುಮಾರ್​!

ನಟ ಅಕ್ಷಯ್​ ಕುಮಾರ್​ ಅವರಿಗೆ ‘ಸೂರ್ಯವಂಶಿ’ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ. ಕಳೆದ 18 ತಿಂಗಳಿನಿಂದ ಬಾಲಿವುಡ್​ನಲ್ಲಿ ಯಾವುದೇ ಸಿನಿಮಾ ಈ ಮಟ್ಟಿಗಿನ ಯಶಸ್ಸು ಕಂಡಿರಲಿಲ್ಲ. ಕೇವಲ 5 ದಿನದಲ್ಲಿ ‘ಸೂರ್ಯವಂಶಿ’ ಸಿನಿಮಾ 100 ಕೋಟಿ ರೂ. ಬಾಚಿಕೊಂಡಿದೆ. ರೋಹಿತ್​ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ನಟಿಸಿದ್ದಾರೆ. ಅಜಯ್​ ದೇವಗನ್​, ರಣವೀರ್​ ಸಿಂಗ್​ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳನ್ನು ಹೊಂದಿರುವ ಈ ಚಿತ್ರಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ.​

ಹಾಲಿವುಡ್​ನ ‘ಎಟರ್ನಲ್ಸ್​’ ಸಿನಿಮಾ ಕೂಡ ಸದ್ದಿಲ್ಲದೇ ಉತ್ತಮ ಕಮಾಯಿ ಮಾಡಿದೆ. ಮಲ್ಟಿಪ್ಲೆಕ್ಸ್​ನಲ್ಲಿ ಈ ಸಿನಿಮಾವನ್ನು ಜನರು ಮುಗಿಬಿದ್ದು ನೋಡಿದ್ದಾರೆ. ಅನೇಕ ಕಡೆಗಳಲ್ಲಿ ಇನ್ನೂ ಶೇ.50ರಷ್ಟು ಆಸನಭರ್ತಿಗೆ ಮಾತ್ರ ಅವಕಾಶ ಇದೆ. ಹಾಗಿದ್ದರೂ ಕೂಡ ಈ ಎಲ್ಲ ಸಿನಿಮಾಗಳು ಉತ್ತಮ ಕಲೆಕ್ಷನ್​ ಮಾಡಿರುವುದರಿಂದ ಥಿಯೇಟರ್​ ಬ್ಯುಸಿನೆಸ್​ ಚೇತರಿಕೆ ಕಂಡಿದೆ. ಹಲವು ಸಿನಿಮಾಗಳು ಓಟಿಟಿ ಮೊರೆ ಹೋಗುತ್ತಿರುವ ಈ ಸಂದರ್ಭದಲ್ಲಿ ಅಣ್ಣಾಥೆ, ಸೂರ್ಯವಂಶಿ ಮತ್ತು ಎಟರ್ನಲ್ಸ್​ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿದ್ದು, ನಿರ್ಮಾಪಕರು ಮತ್ತೆ ಚಿತ್ರಮಂದಿರಗಳ ಕಡೆಗೆ ಮನಸ್ಸು ಮಾಡುವಂತಾಗಿದೆ.

ಇದನ್ನೂ ಓದಿ:

Keerthy Suresh: ‘ಅಣ್ಣಾಥೆ’ ಚಿತ್ರದಲ್ಲಿ ರಜನಿಕಾಂತ್​ ತಂಗಿ ಪಾತ್ರ ಮಾಡಲು 2 ಕೋಟಿ ರೂ. ಪಡೆದ ನಟಿ ಕೀರ್ತಿ ಸುರೇಶ್​

Sooryavanshi: ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ‘ಸೂರ್ಯವಂಶಿ’; ದಿನದ 24 ಗಂಟೆಯೂ ಅಕ್ಷಯ್​ ಕುಮಾರ್​ ಚಿತ್ರ ಪ್ರದರ್ಶನ

ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ