AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕದ ನಡುವೆ ಗುಡ್​ನ್ಯೂಸ್​; ಭಾರತಕ್ಕೆ ಮರಳಿದ ಸೂಪರ್​ ಸ್ಟಾರ್​ ರಜನಿಕಾಂತ್​

ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಏನಿರಬಹುದು ಎಂದು ಅಭಿಮಾನಿಗಳು ಚಿಂತೆಗೀಡಾಗಿದ್ದರು.

ಆತಂಕದ ನಡುವೆ ಗುಡ್​ನ್ಯೂಸ್​; ಭಾರತಕ್ಕೆ ಮರಳಿದ ಸೂಪರ್​ ಸ್ಟಾರ್​ ರಜನಿಕಾಂತ್​
ರಜನಿಕಾಂತ್​
TV9 Web
| Edited By: |

Updated on: Jul 09, 2021 | 4:40 PM

Share

ನಟ ರಜನಿಕಾಂತ್​ ಅವರು ಶುಕ್ರವಾರ (ಜು.9) ಭಾರತಕ್ಕೆ ಮರಳಿದ್ದಾರೆ. ಕಳೆದ ತಿಂಗಳು ಅವರು ಅಮೆರಿಕಕ್ಕೆ ತೆರಳಿದ್ದರು. ಆರೋಗ್ಯ ತಪಾಸಣೆಗಾಗಿ ಅವರು ವಿದೇಶಕ್ಕೆ ಹೋಗಿದ್ದರು. ಹಾಗಾಗಿ ಅವರ ಅಭಿಮಾನಿಗಳಲ್ಲಿ ಕೊಂಚ ಆತಂಕ ಮನೆ ಮಾಡಿತ್ತು. ಈಗ ಅವರು ಸುರಕ್ಷಿತವಾಗಿ ಚೆನ್ನೈಗೆ ವಾಪಸ್​ ಬಂದಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಅಮೆರಿಕದಿಂದ ತಲೈವಾ ಮರಳುತ್ತಿದ್ದಾರೆ ಎಂಬ ಸುದ್ದಿ ಕೇಳುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಬಹುದಿನಗಳ ಬಳಿಕ ತಮ್ಮ ನೆಚ್ಚಿನ ನಟನನ್ನು ನೋಡಿದ ಅಭಿಮಾನಿಗಳು ಸಂತಸಗೊಂಡಿದ್ದಾರೆ. ತಲೈವಾ.. ತಲೈವಾ.. ಎಂದು ಕೂಗುತ್ತ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ನೆರೆದಿದ್ದ ಜನರತ್ತ ರಜನಿಕಾಂತ್​ ಕೈ ಮುಗಿದು ನಮಸ್ಕರಿಸುತ್ತ ತಾಯ್ನಾಡಿಗೆ ಕಾಲಿಟ್ಟಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗುತ್ತಿವೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ರಜನಿಕಾಂತ್​ ಅವರು ಅಮೆರಿಕಕ್ಕೆ ತೆರಳಿದ್ದರು. ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಅವರು ಈ ಪ್ರಯಾಣ ಮಾಡಿದ್ದರು. ಅಷ್ಟು ತರಾತುರಿಯಲ್ಲಿ ವಿಮಾನ ಹತ್ತಲು ಅವರು ನಿರ್ಧರಿಸಿದ್ದು ಯಾಕೆ? ಕೊವಿಡ್​ ಸಂದರ್ಭದಲ್ಲೂ ವಿದೇಶಕ್ಕೆ ಪ್ರಯಾಣ ಮಾಡುವ ರಿಸ್ಕ್​ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ಅವರ ಆರೋಗ್ಯದಲ್ಲಿ ಏನೋ ಗಂಭೀರ ಸಮಸ್ಯೆ ಇರಬಹುದು ಎಂದು ಕೆಲವು ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು.

ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಏನಿರಬಹುದು ಎಂದು ಕೂಡ ಅಭಿಮಾನಿಗಳು ಚಿಂತೆಗೀಡಾಗಿದ್ದರು. ಈಗ ಅವರು ಚೆನ್ನೈಗೆ ಮರಳಿರುವುದರಿಂದ ಎಲ್ಲ ಆತಂಕ ದೂರ ಆಗಿದೆ. ಸದ್ಯ ರಜನಿಕಾಂತ್​ ನಟನೆಯ ‘ಅಣ್ಣಾತೆ’ ಚಿತ್ರಕ್ಕಾಗಿ ಸಿನಿಪ್ರಿಯರು ಕಾಯುತ್ತಿದ್ದಾರೆ.

ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ರಜನಿಕಾಂತ್​ 2ನೇ ಡೋಸ್​ ಕೊವಿಡ್​ ಲಸಿಕೆ ಪಡೆದುಕೊಂಡಿದ್ದರು. ಅಮೆರಿಕದಲ್ಲಿ ಅವರು ಅನೇಕ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ತಮ್ಮ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಮೆರಿಕದ ಬಳಿಕ ದೋಹಾ, ಖತಾರ್​ಗೂ ತೆರಳಿ, ಇದೇ ಮಾರ್ಗವಾಗಿ ಚೆನ್ನೈಗೆ ಬಂದು ಇಳಿದಿದ್ದಾರೆ.

ಇದನ್ನೂ ಓದಿ:

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ

Rajinikanth: ನಿವೃತ್ತಿ ಬಗ್ಗೆ ಕೊನೆಗೂ ಮೌನ ಮುರಿದ ರಜನಿಕಾಂತ್​; ಅವರ ಕೊನೆಯ ಚಿತ್ರ ಯಾವುದು?

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ